Homeಮುಖಪುಟ'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

- Advertisement -
- Advertisement -

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ ಆದೇಶವನ್ನು ವಿರೋಧಿಸಲು ಆ್ಯಪಲ್ ಕಂಪನಿ ಮುಂದಾಗಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ (ಡಿ.2) ವರದಿ ಮಾಡಿದೆ.

“ಆ್ಯಪಲ್ ಕಂಪನಿ ಕೇಂದ್ರದ ಆದೇಶವನ್ನು ಪಾಲಿಸದಿರಲು ಯೋಜಿಸಿದೆ. ಈ ಬಗ್ಗೆ ತನ್ನ ಕಳವಳಗಳನ್ನು ಕಂಪನಿ ಕೇಂದ್ರ ಸರ್ಕಾರಕ್ಕೆ ತಿಳಿಸಲಿದೆ” ಎಂದು ಮೂರು ಮೂಲಗಳು ಹೇಳಿರುವುದಾಗಿ ರಾಯಿಟರ್ಸ್ ಹೇಳಿದೆ.

90 ದಿನಗಳ ಒಳಗೆ ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್ ಪ್ರಿ ಲೋಡ್ ಮಾಡಲು ಆ್ಯಪಲ್, ಸ್ಯಾಮ್‌ಸಂಗ್, ಶಿವೋಮಿ ಸೇರಿದಂತೆ ಮೊಬೈಲ್ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ಕದ್ದ ಫೋನ್‌ಗಳನ್ನು ಪತ್ತೆಹಚ್ಚಲು, ಅವುಗಳನ್ನು ನಿರ್ಬಂಧಿಸಲು ಮತ್ತು ದುರುಪಯೋಗವಾಗದಂತೆ ತಡೆಯಲು ಈ ಅಪ್ಲಿಕೇಶನ್ ಇನ್‌ಸ್ಟಾಲ್ ಮಾಡಿಲಾಗುತ್ತಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಸ್ಮಾರ್ಟ್‌ ಫೋನ್ ತಯಾರಕರು ‘ಸಂಚಾರ್ ಸಾಥಿ’ ಆ್ಯಪ್ ಅನ್ನು ಮೊಬೈಲ್‌ ಬಳಕೆದಾರರು ಡಿಲಿಟ್ ಮಾಡದಂತೆ ಮಾಡಬೇಕು. ಈಗಾಗಲೇ ಪೂರೈಕೆ ಸರಪಳಿಯಲ್ಲಿರುವ ಫೋನ್‌ಗಳಿಗೆ ತಯಾರಕರು ಸಾಫ್ಟ್‌ವೇರ್ ಅಪ್ಡೇಟ್ ಮೂಲಕ ಅಪ್ಲಿಕೇಶನ್ ಅನ್ನು ತಳ್ಳಬೇಕು ಎಂದು ಸರ್ಕಾರ ಆದೇಶದಲ್ಲಿ ಹೇಳಿರುವುದಾಗಿ ಸೋಮವಾರ (ಡಿ.1) ರಾಯಿಟರ್ಸ್ ವರದಿ ಮಾಡಿದೆ.

ಸರ್ಕಾರದ ಆದೇಶದ ವಿರುದ್ದ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಹಲವರು ಕಳವಳ ವ್ಯಕ್ತಪಡಿಸಿದ್ದಾರೆ. ಇದು ಮೊಬೈಲ್ ಫೋನ್ ಬಳಕೆದಾರರ ಮೇಲೆ ಕಣ್ಗಾವಲು ಇಡಲು ಸರ್ಕಾರ ಮಾಡಿರುವ ತಂತ್ರವಾಗಿದೆ. ಸರ್ಕಾರದ ಆದೇಶದ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದಾರೆ.

ವಿರೋಧಗಳು ಹೆಚ್ಚಾಗುತ್ತಿದ್ದಂತೆ ಕೇಂದ್ರ ದೂರ ಸಂಪರ್ಕ ಖಾತೆ ಸಚಿವ ಜೋತಿರಾಧಿತ್ಯ ಎಂ. ಸಿಂಧಿಯಾ ಪ್ರತಿಕ್ರಿಯಿಸಿದ್ದಾರೆ. “ಸಂಚಾರ್ ಸಾಥಿ ಅಪ್ಲಿಕೇಶನ್ ‘ಸ್ವಯಂಪ್ರೇರಿತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ’ಯನ್ನು ಹೊಂದಿದೆ. ಬಳಕೆದಾರರು ಅದನ್ನು ಸಕ್ರಿಯಗೊಳಿಸಬಹುದು ಮತ್ತು ಯಾವುದೇ ಸಮಯದಲ್ಲಿ ಅದನ್ನು ತಮ್ಮ ಫೋನ್‌ನಿಂದ ಸುಲಭವಾಗಿ ಅಳಿಸಬಹುದು ಎಂದು ಹೇಳಿದ್ದಾರೆ.

ಪ್ರಸ್ತುತ ಬಳಕೆದಾರರು ಅಪ್ಲಿಕೇಶನ್ ಅನ್ನು ಅಳಿಸಬಹುದು ಎಂದು ಮಾತ್ರ ಸಚಿವ ಸಿಂಧಿಯಾ ಹೇಳಿದ್ದಾರೆ. ಸ್ಮಾರ್ಟ್‌ಫೋನ್ ತಯಾರಕರು ಅದನ್ನು ಪ್ರಿ ಲೋಡ್ ಮಾಡಬೇಕು. ಅದು ನಿಷ್ಕ್ರಿಯಗೊಂಡಿಲ್ಲ ಅಥವಾ ನಿರ್ಬಂಧಿಸಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂಬ ನವೆಂಬರ್ 28ರ ಗೌಪ್ಯ ನಿರ್ದೇಶನದ ಬಗ್ಗೆ ಸಿಂಧಿಯಾ ಯಾವುದೇ ಪ್ರತಿಕ್ರಿಯೆ ಅಥವಾ ಸ್ಪಷ್ಟನೆ ಕೊಟ್ಟಿಲ್ಲ ಎಂದು ರಾಯಿಟರ್ಸ್ ವರದಿ ಹೇಳಿದೆ.

“ಆ್ಯಪಲ್ ಕಂಪನಿ ಸರ್ಕಾರದ ನಿರ್ದೇಶನ ಪಾಲಿಸದಿರಲು ಯೋಜಿಸಿದೆ. ಏಕೆಂದರೆ, ಅದರಿಂದ ಕಂಪನಿಯ ಐಒಎಸ್‌ ಪರಿಸರ ವ್ಯವಸ್ಥೆಗೆ ಹಲವಾರು ಗೌಪ್ಯತೆ ಮತ್ತು ಭದ್ರತಾ ಸಮಸ್ಯೆಗಳು ಉಂಟಾಗಲಿದೆ. ಜಗತ್ತಿನಲ್ಲಿ ಎಲ್ಲಿಯೂ ಇಂತಹ ಆದೇಶಗಳನ್ನು ಪಾಲಿಸುತ್ತಿಲ್ಲ ಎಂದು ಸರ್ಕಾರಕ್ಕೆ ಕಂಪನಿ ತಿಳಿಸಲಿದೆ” ಎಂದು ಆ್ಯಪಲ್‌ನ ಕಳವಳಗಳನ್ನು ತಿಳಿದಿರುವ ಎರಡು ಉದ್ಯಮ ಮೂಲಗಳು ತಿಳಿಸಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

“ಇದು (ಸರ್ಕಾರದ ಆದೇಶ) ಕೇವಲ ದೊಣ್ಣೆ ಹೊಡೆತವಲ್ಲ, ಡಬಲ್ ಬ್ಯಾರೆಲ್ ಗನ್‌ನಂತಿದೆ” ಎಂದು ಆ ಮೂಲ ಹೇಳಿರುವುದಾಗಿ ವರದಿ ತಿಳಿಸಿದೆ.

ಆ್ಯಪಲ್ ಕಂಪನಿಯ ನಿರ್ಧಾರದ ಕುರಿತು ಕಂಪನಿಯಾಗಲಿ, ದೂರಸಂಪರ್ಕ ಸಚಿವಾಲಯವಾಗಲಿ ಇದುವರೆಗೆ ಅಧಿಕೃತ ಪ್ರತಿಕ್ರಿಯೆಗೆ ಸಿಕ್ಕಿಲ್ಲ ಎಂದು ವರದಿ ಹೇಳಿದೆ.

ಆ್ಯಪಲ್ ಕಂಪೆನಿ ತನ್ನ ಆ್ಯಪ್ ಸ್ಟೋರ್ ಮತ್ತು ಐಒಎಸ್‌ ಸಾಫ್ಟ್‌ವೇರ್‌ನ್ನು ತುಂಬಾ ಕಟ್ಟುನಿಟ್ಟಾಗಿ ನಿಯಂತ್ರಿಸುತ್ತದೆ. ಇದು ಆ್ಯಪಲ್‌ಗೆ ವರ್ಷಕ್ಕೆ ಸುಮಾರು 100 ಬಿಲಿಯನ್ ಡಾಲರ್ (ಸುಮಾರು 8 ಲಕ್ಷ ಕೋಟಿ ರೂಪಾಯಿಗಿಂತ ಹೆಚ್ಚು) ಆದಾಯ ತಂದುಕೊಡುವ ಅತಿ ಮುಖ್ಯವಾದ ಸೇವೆಗಳ ವ್ಯವಹಾರವಾಗಿದೆ.

ಆದರೆ, ಗೂಗಲ್‌ನ ಆಂಡ್ರಾಯ್ಡ್ ತಂತ್ರಾಂಶವು ಓಪನ್-ಸೋರ್ಸ್ (ಯಾರು ಬೇಕಾದರೂ ಉಚಿತವಾಗಿ ಬದಲಾಯಿಸಬಹುದಾದ) ಆಗಿರುವುದರಿಂದ, ಸ್ಯಾಮ್‌ಸಂಗ್, ಶಿವೋಮಿ ಇತ್ಯಾದಿ ಮೊಬೈಲ್ ತಯಾರಕರು ತಮ್ಮ ಇಚ್ಛೆಯಂತೆ ಆಂಡ್ರಾಯ್ಡ್ ಸಾಫ್ಟ್‌ವೇರ್‌ನ್ನು ಬದಲಾಯಿಸಿ, ತಮ್ಮದೇ ಆವೃತ್ತಿಯನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ. ಇದರಿಂದ ಅವರಿಗೆ ಹೆಚ್ಚು ಸ್ವಾತಂತ್ರ್ಯ ಇದೆ.

ಎರಡನೇ ಮೂಲವು ಆ್ಯಪಲ್ ನ್ಯಾಯಾಲಯಕ್ಕೆ ಹೋಗಲು ಅಥವಾ ಸಾರ್ವಜನಿಕ ನಿಲುವು ತೆಗೆದುಕೊಳ್ಳಲು ಯೋಜಿಸಿಲ್ಲ ಎಂದು ಹೇಳಿದೆ. ಆದರೆ ಭದ್ರತಾ ದೋಷಗಳಿಂದಾಗಿ ಆದೇಶವನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಸರ್ಕಾರಕ್ಕೆ ತಿಳಿಸುತ್ತದೆ ಎಂದಿದೆ ಎಂದು ರಾಯಿಟರ್ಸ್ ಹೇಳಿದೆ.

ಪ್ರಸ್ತುತ ಆ್ಯಪಲ್ ಕಂಪೆನಿ ಭಾರತದಲ್ಲಿ ಒಂದು ದೊಡ್ಡ ಕಾನೂನು ಹೋರಾಟ ನಡೆಸುತ್ತಿದೆ. ಭಾರತದ ಸ್ಪರ್ಧಾ ನಿಯಂತ್ರಣ ಸಂಸ್ಥೆ (CCI – Competition Commission of India) ಆ್ಯಪಲ್‌ನ ವಿರುದ್ಧ ದೇಶದ ಏಕಸ್ವಾಮ್ಯ ವಿರೋಧಿ ಕಾನೂನಿನಡಿ ದಂಡ ವಿಧಿಸುವ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹೋರಾಡುತ್ತಿದೆ.

ಆ್ಯಪಲ್ ಕಂಪೆನಿ ಹೇಳಿಕೊಂಡಿರುವಂತೆ, ಈ ಪ್ರಕರಣದಲ್ಲಿ ಅದು ಸೋತರೆ ಗರಿಷ್ಠ 38 ಬಿಲಿಯನ್ ಡಾಲರ್ (ಅಂದರೆ ಸುಮಾರು 3.2 ಲಕ್ಷ ಕೋಟಿ ರೂಪಾಯಿಗಿಂತಲೂ ಹೆಚ್ಚು) ದಂಡ ಪಾವತಿಸಬೇಕಾಗಬಹುದು ಎಂಬ ಅಪಾಯ ಇದೆ.

ಸ್ಯಾಮ್‌ಸಂಗ್ ಸೇರಿದಂತೆ ಇತರ ಬ್ರ್ಯಾಂಡ್‌ಗಳು ಆದೇಶವನ್ನು ಪರಿಶೀಲಿಸುತ್ತಿವೆ ಎಂದು ಈ ವಿಷಯದ ಬಗ್ಗೆ ತಿಳಿದಿರುವ ನಾಲ್ಕನೇ ಉದ್ಯಮ ಮೂಲ ತಿಳಿಸಿವೆ. ನಮ್ಮ ಪ್ರಶ್ನೆಗಳಿಗೆ ಸ್ಯಾಮ್‌ಸಂಗ್ ಪ್ರತಿಕ್ರಿಯಿಸಿಲ್ಲ. ಸರ್ಕಾರವು ಉದ್ಯಮದ ಸಮಾಲೋಚನೆಯಿಲ್ಲದೆ ಆದೇಶದ ನೀಡಿದೆ ಎಂದು ಮೂಲಗಳು ಹೇಳಿವೆ ಎಂದು ರಾಯಿಟರ್ಸ್ ವರದಿ ವಿವರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...