Homeಮುಖಪುಟಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

- Advertisement -
- Advertisement -

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ.

ವರದಿಗಳ ಪ್ರಕಾರ, ಬಿಹಾರದ ಎಸ್‌ಐಆರ್‌ ಯಶಸ್ಸಿನ ಉದಾಹರಣೆ ಕೊಟ್ಟು ಎಸ್‌ಐಆರ್ ಪ್ರಕ್ರಿಯೆಯನ್ನು ಬಲವಾಗಿ ಸಮರ್ಥಿಸಿಕೊಳ್ಳಲು ಕೇಂದ್ರ ಸರ್ಕಾರ ಯೋಜಿಸಿದೆ. ಡಿಸೆಂಬರ್ 8ರಂದು ವಂದೇ ಮಾತರಂ ಕುರಿತು ಚರ್ಚೆ ನಡೆಸಲೂ ನಿರ್ಧರಿಸಿದೆ.

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಡಿಸೆಂಬರ್ 8ರಂದು ಸೋಮವಾರ ಮಧ್ಯಾಹ್ನ 12ಗಂಟೆಯಿಂದ ‘ವಂದೇ ಮಾತರಂ’ ಕುರಿತು ಹಾಗೂ ಡಿಸೆಂಬರ್ 9ರಂದು ಮಂಗಳವಾರ ಮಧ್ಯಾಹ್ನ 12 ಗಂಟೆಯಿಂದ ಚುನಾವಣಾ ಸುಧಾರಣೆಗಳ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ನವೆಂಬರ್ 30ರಂದು ಭಾನುವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಬೇಡಿಕೆ ಇಟ್ಟಿತ್ತು. ಚರ್ಚೆಗೆ ಅವಕಾಶ ನೀಡದಿದ್ದರೆ ಕಲಾಪ ನಡೆಯಲು ಬಿಡುವುದಿಲ್ಲ ಎಂದಿತ್ತು.

ಎಸ್‌ಐಆರ್ ಮಾತ್ರವಲ್ಲದೆ ದೆಹಲಿ ಸ್ಫೋಟ ಘಟನೆಯ ನಂತರ ರಾಷ್ಟ್ರೀಯ ಭದ್ರತೆಯ ಕುರಿತು ಚರ್ಚೆಗೆ ವಿರೋಧ ಪಕ್ಷದವರು ಬಲವಾಗಿ ಒತ್ತಾಯಿಸಿದ್ದರು. ಸರ್ಕಾರ ಪ್ರಜಾಪ್ರಭುತ್ವವನ್ನು ಮುಗಿಸಿ, ಸಂಸದೀಯ ಸಂಪ್ರದಾಯಗಳನ್ನು ಸಮಾಧಿ ಮಾಡಲು ಬಯಸುತ್ತಿದೆ ಎಂದು ಆರೋಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...

ಪೋಕ್ಸೊ ಪ್ರಕರಣ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಚಾರಣೆಗೆ ತಡೆಯಾಜ್ಞೆ ನೀಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಎಫ್‌ಟಿಎಸ್‌ ವಿಶೇಷ ಸೆಷನ್ಸ್‌ ನ್ಯಾಯಾಲಯ ಹೊರಡಿಸಿದ್ದ ಸಮನ್ಸ್‌ ಹಾಗೂ ವಿಚಾರಣಾ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌...