Homeಮುಖಪುಟಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ...

ಬಾಂಗ್ಲಾಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ, ಮಗನನ್ನು ವಾಪಸ್ ಕರೆತರುತ್ತೇವೆ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

- Advertisement -
- Advertisement -

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ ಗರ್ಭಿಣಿ ಮಹಿಳೆ ಸುನಾಲಿ ಖಾತೂನ್ ಮತ್ತು ಅವರ 8 ವರ್ಷದ ಮಗ ಸಬೀರ್ ಅವರನ್ನು ಮಾನವೀಯ ನೆಲೆಯಲ್ಲಿ ಭಾರತಕ್ಕೆ ಮರಳಿ ಕರೆತರುವುದಾಗಿ ಕೇಂದ್ರ ಸರ್ಕಾರ ಬುಧವಾರ (ಡಿ.3) ಸುಪ್ರೀಂ ಕೋರ್ಟ್ ಮುಂದೆ ವಾಗ್ದಾನ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠದ ಮುಂದೆ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಅವರ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆ ತರಲಾಗುವುದು. ಆದರೆ, ಇದು ಕೇವಲ ಮಾನವೀಯ ಆಧಾರದ ಮೇಲೆ ಮಾತ್ರ. ಇದರಿಂದ ನಮ್ಮ ಮೂಲ ವಾದ (merits of the case)ಅಥವಾ ಹಕ್ಕುಗಳ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಪ್ರಕರಣದಲ್ಲಿ ನಮ್ಮ ಅಧಿಕೃತ ನಿಲುವು ಬದಲಾಗುವುದಿಲ್ಲ, ಅವರನ್ನು ಭಾರತಕ್ಕೆ ಕರೆತಂದ ನಂತರ ನಾವು ಅವರ ಮೇಲೆ ನಿಗಾ (surveillance)ಇರಿಸುವ ಹಕ್ಕನ್ನೂ ಬಿಟ್ಟುಕೊಡುತ್ತಿಲ್ಲ" ಎಂದು ಸಾಲಿಸಿಟರ್ ಜನರಲ್ ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸುನಾಲಿ ಖಾತೂನ್ ಮತ್ತು ಅವರ ಮಗನನ್ನು ಮಾನವೀಯ ಆಧಾರದ ಮೇಲೆ ಭಾರತಕ್ಕೆ ಮರಳಿ ಕರೆತರಬಹುದೇ? ಎಂದು ಸೋಮವಾರ ನ್ಯಾಯಾಲಯವು ಸರ್ಕಾರವನ್ನು ಕೇಳಿತ್ತು. ಇದಕ್ಕೆ ಪ್ರತಿಕ್ರಿಯಿಸಿದ್ದ ಎಸ್‌ಜಿ ತುಷಾರ್ ಮೆಹ್ತಾ, ಸರ್ಕಾರದಿಂದ ಸೂಚನೆಗಳನ್ನು ಪಡೆಯುವುದಾಗಿ ಹೇಳಿದ್ದರು. ಅದರಂತೆ ಕೇಂದ್ರ ಸರ್ಕಾರದಿಂದ ಸೂಚನೆಗಳನ್ನು ಪಡೆದು ಇಬ್ಬರನ್ನು ವಾಪಸ್ ಕರೆತರುಲು ಒಪ್ಪಿಕೊಂಡಿದ್ದಾರೆ.

"ಮಾನವೀಯ ನೆಲೆಯಲ್ಲಿ ಸುನಾಲಿ ಖಾತೂನ್ ಮತ್ತು ಆಕೆಯ 8 ವರ್ಷದ ಮಗ ಸಬೀರ್ ಅವರನ್ನು ಭಾರತಕ್ಕೆ ವಾಪಸ್ ಕರೆತರುವುದಾಗಿ ಸಾಲಿಸಿಟರ್ ಜನರಲ್ ಹೇಳಿದ್ದಾರೆ. ಇಬ್ಬರನ್ನೂ ದೆಹಲಿಯಲ್ಲಿ ವಶಕ್ಕೆ ಪಡೆದ ಕಾರಣ ಅವರನ್ನು ದೆಹಲಿಗೇ ವಾಪಸ್ ಕರೆತರುವುದಾಗಿ ತಿಳಿಸಿದ್ದಾರೆ. ಆದರೆ, ಅರ್ಜಿದಾರರ ಪರ ವಕೀಲರು ಮಹಿಳೆ ಮತ್ತು ಮಗನನ್ನು ಆಕೆಯ ತಂದೆ ವಾಸಿಸುವ ಪಶ್ವಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಪಟ್ಟಣಕ್ಕೆ ಸ್ಥಳಾಂತರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ" ಎಂದು ಸುಪ್ರೀಂ ಕೋರ್ಟ್ ವಿವರಿಸಿದೆ.

ಮಹಿಳೆ ಗರ್ಭಿಣಿಯಾಗಿರುವ ಹಿನ್ನೆಲೆ ಪಶ್ಚಿಮ ಬಂಗಾಳ ಸರ್ಕಾರ ಆಕೆಗೆ ವೈದ್ಯಕೀಯ ಸೌಲಭ್ಯಗಳನ್ನು ಉಚಿತವಾಗಿ ಒದಗಿಸಬೇಕು. ಅಲ್ಲದೆ, ಆಕೆಯ ಮಗನನ್ನು ಸಹ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಸುನಾಲಿ ಖಾತೂನ್, ಆಕೆಯ ಮಗ ಸಬೀರ್ ಸೇರಿದಂತೆ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ 6 ಮಂದಿಯನ್ನು ವಾಪಸ್ ಕರೆತರುವಂತೆ ಸೆಪ್ಟೆಂಬರ್ 27ರಂದು ಕಲ್ಕತ್ತಾ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ಇದರ ವಿರುದ್ದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಆ ಆರ್ಜಿಯ ವಿಚಾರಣೆ ನಡೆಯುತ್ತಿದೆ.

ಸುನಾಲಿ ಅವರ ತಂದೆ ಭೋದು ಶೇಖ್ ಕಲ್ಕತ್ತಾ ಹೈಕೋರ್ಟ್‌ ಮೊರೆ ಹೋಗಿದ್ದರು. ನನ್ನ ಮಗಳು, ಅಳಿಯ ಮತ್ತು ಮೊಮ್ಮಗನನ್ನು ಸುಳ್ಳು ಆರೋಪದ ಮೇಲೆ ಬಂಧಿಸಿ ಗಡಿಪಾರು ಮಾಡಿದ್ದಾರೆ. ದಯಮಾಡಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂದು ಕೇಳಿಕೊಂಡಿದ್ದರು. ನಾನು ಪಶ್ಚಿಮ ಬಂಗಾಳದ ಖಾಯಂ ನಿವಾಸಿ. ನನ್ನ ಮಗಳು, ಅಳಿಯನೂ ಭಾರತದಲ್ಲಿ ಹುಟ್ಟಿ ಬೆಳೆದವರು. ನಮ್ಮ ಕುಟುಂಬ ತಲೆತಲಾಂತರದಿಂದ ಪಶ್ಚಿಮ ಬಂಗಾಳದಲ್ಲೇ ಇದೆ. ಕೆಲಸಕ್ಕಾಗಿ ಮಾತ್ರ ಮಗಳು, ಅಳಿಯ ದೆಹಲಿಗೆ ಹೋಗಿದ್ದರು ಎಂದು ಭೋದು ಶೇಖ್ ಹೇಳಿದ್ದರು.

ಇಂದು, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಗಡಿಪಾರು ಮಾಡಲಾದ ಇತರ ನಾಲ್ವರು ವ್ಯಕ್ತಿಗಳನ್ನು ವಾಪಸ್ ಕರೆ ತರುವ ಬಗ್ಗೆ ಕೇಂದ್ರದಿಂದ ಸೂಚನೆಗಳನ್ನು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಎಸ್‌ಜಿ ತುಷಾರ್ ಮೆಹ್ತಾ, ಗಡಿಪಾರಾದವರು ಬಾಂಗ್ಲಾದೇಶಿಗರು, ಅವರನ್ನು ವಾಪಸ್ ಕರೆತರುವುದಕ್ಕೆ ಕೇಂದ್ರ ಸರ್ಕಾರದ ತೀವ್ರ ಆಕ್ಷೇಪವಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರವೇ ಕೆವಿಯಟ್ (ಮುಂಚಿತ ಎಚ್ಚರಿಕೆ ಅರ್ಜಿ) ಹಾಕಿ, ಆ ವ್ಯಕ್ತಿಗಳಿಗೆ ರಕ್ಷಣೆಯನ್ನು ಕೋರುತ್ತಿರುವುದು ಆಶ್ಚರ್ಯಕರವಾಗಿದೆ ಎಂದಿದ್ದಾರೆ.

ಅರ್ಜಿದಾರ ಬೋಧು ಶೇಕ್ ಪರ ಹಿರಿಯ ವಕೀಲ ಸಂಜಯ್ ಹೆಗ್ಡೆ ವಾದ ಮಂಡಿಸಿದ್ದಾರೆ. ವಿಚಾರಣೆ ವೇಳೆ ನ್ಯಾಯಮೂರ್ತಿ ಬಾಗ್ಚಿ ಅವರು, ಸುನಾಲಿ ಖಾತೂನ್ ಭೋದು ಶೇಖ್ (ಭಾರತೀಯ ಪ್ರಜೆ) ಅವರೊಂದಿಗೆ ಜೈವಿಕ ಸಂಬಂಧವನ್ನು ಸಾಬೀತು ಮಾಡಬಹುದು ಎಂದಾದರೆ, ಅವರು ಭಾರತೀಯ ನಾಗರಿಕತ್ವವನ್ನೂ ಸಾಬೀತು ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...