Homeಕರ್ನಾಟಕಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

- Advertisement -
- Advertisement -

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಊರಾದ ಸಿದ್ದರಾಮನಹುಂಡಿಯಿಂದ ಬೆಳಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ, ‘ಒಳಮೀಸಲಾತಿ ಜಾರಿಗೊಳಿಸಿ, ಇಲ್ಲ ಕುರ್ಚಿ ಖಾಲಿ ಮಾಡಿ’ ಘೋಷಣೆಯೊಂದಿಗೆ ಸಾಗಲಿದೆ. ಬಳಿಕ ಟಿ. ನರಸೀಪುರ, ಬನ್ನೂರು, ವ್ಯಾಸರಾಯನಪುರ ಮೂಲಕ ಮೈಸೂರಿನ ಕಡೆಗೆ ತೆರಳಲಿರುವ ಜಾಥಾ ಡಿಸೆಂಬರ್ 11ರಂದು ಮೈಸೂರಿಗೆ ತಲುಪಿ, ಅಪರಾಹ್ನ 12ಕ್ಕೆ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಪೂರ್ಣಪ್ರಮಾಣದ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳದೆ ಇದ್ದರೆ ಎರಡನೇ ಹಂತದ ಹೋರಾಟವಾಗಿ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಎಸ್. ಮಾರೆಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತಿದ್ದಾರೆ. ಹೀಗಾಗಿ, ಸಂಬಂಧಪಟ್ಟವರನ್ನು ವರ್ಗಾಯಿಸಬೇಕು ಸಾಮಾಜಿಕ ನ್ಯಾಯ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಗೂರು ಸಿದ್ದರಾಜು, ಕನಕನಹಳ್ಳಿ ಕೃಷ್ಣಪ್ಪ, ರಾಜಣ್ಣ ದಂಡೋರ, ಬಸಪ್ಪ ಲಿಡ್ಕರ್, ಸ್ವಾಮಿ ಮೈಸೂರು, ವೆಂಕಟರಾಮು, ಆನಂದಕುಮಾರ್, ಹನುಮೇಶ್ ಗುಂಡೂರು, ಹುಣಸೂರು ಪುಟ್ಟಯ್ಯ ಇದ್ದರು.

ಹಕ್ಕೊತ್ತಾಯಗಳು:

ಶೈಕ್ಷಣಿಕ ಕ್ಷೇತ್ರವಾದ ಉನ್ನತ ಶಿಕ್ಷಣ ಸೇರಿದಂತೆ ಎಲ್ಲಾ ಶೈಕ್ಷಣಿಕ ರಂಗಗಳಲ್ಲಿ ಒಳಮೀಸಲಾತಿಯನ್ನು ಅನ್ವಯಿಸಬೇಕು ಮತ್ತು ಕೂಡಲೇ, ಕಂದಾಯ ಇಲಾಖೆಯು ಪರಿಶಿಷ್ಟ ಜಾತಿಗಳ ಪ್ರವರ್ಗವಾರು ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 15(4) ರಂತೆ ಶೇ.6: 6: 5 ನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿಗಳ ಒಳಮೀಸಲಾತಿಯನ್ನು ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅರೆಸರಕಾರಿ ಹುದ್ದೆಗಳ ನೇರನೇಮಕಾತಿ, ಬಡ್ತಿ, ಬ್ಲಾಕ್‌ಲಾಗ್ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 16(4), 16 (4ಎ)- ಸಂವಿಧಾನ 77ನೇ ತಿದ್ದುಪಡಿ ಕಾಯ್ದೆ 1995 ರಂತೆ ಶೇ.6: 6: 5 ಅನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿ ಉಪ ಹಂಚಿಕೆ ಹಣದಲ್ಲೂ ಒಳಮೀಸಲಾತಿ ಶೇ.6: 6: 5 ಅನುಪಾತದಂತೆ ಆದೇಶ ಮಾಡಿ ಜಾರಿಗೊಳಿಸಬೇಕು. ಉಪಹಂಚಿಕೆ ಕಾಯ್ದೆ ಕಲಂ 7.(ಬಿ), 7 (ಸಿ) ಯನ್ನು ಕೂಡಲೆ ರದ್ದುಪಡಿಸಬೇಕು. (ಸಂವಿಧಾನ ಪರಿಚ್ಛೇದ 16(4) – ಆರ್ಥಿಕ ಸಬಲೀಕರಣಕ್ಕೆ ಸಮಾನ ಅವಕಾಶಗಳು, ಪರಿಶಿಷ್ಟ ಜಾತಿಗಳ ಉಪಯೋಜನೆ ಕಾಯ್ದೆ 2013 ರಂತೆ ಕೆಳ ಮಟ್ಟದ ಆದಾಯ ವರ್ಗವಾದ ಪರಿಶಿಷ್ಟ ಜಾತಿಗಳು ರೂ. 2.50 ಲಕ್ಷ ಆದಾಯ ತಲುಪಲು ಉದ್ದೇಶಿಸಲಾಗಿದ್ದು, ಮಧ್ಯಮ ವರ್ಗದ ಆದಾಯ ರೂ. 5.00 ಲಕ್ಷ ತಲುಪುವ ಗುರಿ ಹೊಂದಿದೆ. ಅದ್ದರಿಂದ ಪರಿಶಿಷ್ಟ ಜಾತಿ ಸಮುದಾಯಗಳು ಕಡಿಮೆ ಆದಾಯ ಹೊಂದಿರುವ ವರ್ಗವಾದ್ದರಿಂದ ಉಪಯೋಜನೆ ಹಣವನ್ನು ಶೇ.6.6:5 ಅನುಪಾತದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಸಮಂಜಸವಾಗಿದೆ)

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. (ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮೂರು (3) ಹಂತದ ಸ್ಥಳೀಯ ಸ್ವಂತ ಸರಕಾರ ರಚನೆ, ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪ.ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸಿದೆ. 1992 ರ ಇಂದಿರಾ ಸಹಾನಿ ತೀರ್ಪಿನಲ್ಲಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಮೀಸಲಾತಿ ನಿಗದಿಪಡಿಸಲಾಗಿತ್ತು. ಆದರೆ, ಪಂಚಾಯತ್ ಕಾಯ್ದೆ 1993 ಹಿಂದುಳಿದವರಿಗೂ ಸ್ಥಳೀಯ ಚುನಾವಣೆಗಳಲ್ಲಿ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಜಾರಿಗೊಳಿಸಿದಂತೆ, ಪ.ಜಾತಿಗಳಿಗೆ ಶೇ.6: 65 ಅನುಪಾತದಂತೆ ಪ್ರವರ್ಗವಾರು ಒಳಮೀಸಲಾತಿ ಜಾರಿಗೊಳಿಸುವುದು ನ್ಯಾಯಯುತ, ಸಮಂಜಸವಾಗಿದೆ)

ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಲು ಪ್ರವರ್ಗ -ಎ ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕು. (ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಬಹುದೆಂದು ಸರಕಾರ ದಿ-25-08-2025 ರಂದು ಆದೇಶಿಸಿದೆ. ಕಡಿಮೆ ಮೆರಿಟ್ ವರ್ಗವಾದ ಪ್ರವರ್ಗ-ಎ ಗೆ, ಮಾದಿಗರಲ್ಲದ ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಬಿ ಸೇರಿದಂತೆ ಯಾರಾದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪ್ರವರ್ಗ-ಎ ಯಲ್ಲಿ ಒಳಮೀಸಲಾತಿ ಪಡೆಯುವ ಅಪಾಯವಿದೆ. ಸಫಾಯಿ ಕರ್ಮಚಾರಿ ಆಯೋಗಕ್ಕೆ ಮೇಲ್ವಿಚಾರಣ ಸಮಿತಿ ಇರುವಂತೆ ಪ.ಜಾತಿ ಪ್ರವರ್ಗ-ಎ ಗೆ ಕೂಡ ಜಾತಿ ಪ್ರಮಾಣ ಪತ್ರ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿ ರಚಿಸಬೇಕು)

ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಇನ್ನು ಮುಂದೆ ಸರ್ಕಾರ ಈ ಜಾತಿಗಳ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ, ಸಲಹೆಗಾರರಾದ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು.

ಕೇಂದ್ರ ಸರಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಶೇ.6:6:5 ಅನ್ವಯಿಸಿ ಆದೇಶಿಸಬೇಕು.

ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.! ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು, ಯು.ಜಿ.ಡಿ. ಕಾರ್ಮಿಕರನ್ನು ಮತ್ತು ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು.

2022-23ರ ಅವದಿಯಲ್ಲಿ ನೇರ ನೇಮಕಗೊಂಡ ರಾಜ್ಯದ 5533 ಪೌರ ಕಾರ್ಮಿಕರ ವೇತನ ಸರ್ಕಾರದಿಂದ ಶೇ. 65ರಷ್ಟು ಮಾತ್ರ ನೀಡುತ್ತಿದ್ದು, ಇತರೆ ಖಾಯಂ ಪೌರ ಕಾರ್ಮಿಕರಿಗೆ ನೀಡುವ ಶೇ. 100 ರಷ್ಟು ಸಂಪೂರ್ಣ ವೇತನ ಸರ್ಕಾರದಿಂದಲೇ ಪಾವತಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...

ಛತ್ತೀಸ್‌ಗಢ| ಬಿಜಾಪುರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಆರು ನಕ್ಸಲರು ಸಾವು, ಇಬ್ಬರು ಯೋಧರು ಹುತಾತ್ಮ

ಛತ್ತೀಸ್‌ಗಢದ ಬಿಜಾಪುರದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಆರು ಜನ ನಕ್ಸಲರು ಸಾವನ್ನಪ್ಪಿದ್ದು, ದುರದೃಷ್ಟವಶಾತ್, ನಕ್ಸಲ್ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಯ ಇಬ್ಬರು ಜವಾನರು ಹುತಾತ್ಮರಾಗಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ,...

ಏಪ್ರಿಲ್ 2026 ರಿಂದ 2 ಹಂತದ ಡಿಜಿಟಲ್ ಜನಗಣತಿ: ಕೇಂದ್ರ ಸರ್ಕಾರ

2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ...

ಬಂಗಾಳಿ ಕಾರ್ಮಿಕರನ್ನು ಒಡಿಶಾ ಪೊಲೀಸರು ಬಲವಂತವಾಗಿ ಹೊರಹಾಕಿದ್ದಾರೆ

ಒಡಿಶಾದ ನಯಾಗಢ ಜಿಲ್ಲೆಯ ಪೊಲೀಸರು ನಾಲ್ಕು ಜನ ಬಂಗಾಳಿ ಮಾತನಾಡುವ ಮುಸ್ಲಿಂ ವ್ಯಾಪಾರಿಗಳನ್ನು ಭಾರತೀಯ ನಾಗರಿಕರು ಎಂದು ಸಾಬೀತುಪಡಿಸುವ ಆಧಾರ್ ಮತ್ತು ಮತದಾರರ ಗುರುತಿನ ಚೀಟಿಗಳ ಹೊರತಾಗಿಯೂ ಬಲವಂತವಾಗಿ ಹೊರಹಾಕಿದ್ದಾರೆ ಎಂದು ತೃಣಮೂಲ...

‘ಸಂಚಾರ್ ಸಾಥಿ ಆ್ಯಪ್‌’ನಿಂದ ಗೂಢಚರ್ಯೆ ಸಾಧ್ಯವಿಲ್ಲ, ಆದೇಶದಲ್ಲಿ ಬದಲಾವಣೆಗೆ ಸಿದ್ದ : ಸಚಿವ ಸಿಂಧಿಯಾ

ಕೇಂದ್ರ ಸರ್ಕಾರ ಎಲ್ಲಾ ಸ್ಮಾರ್ಟ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಆ್ಯಪ್ ಕಡ್ಡಾಯಗೊಳಿಸಿರುವುದರಿಂದ ಜನರು ಗೌಪ್ಯತೆ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಕುರಿತು ಬುಧವಾರ (ಡಿ.3) ಲೋಕಸಭೆಯಲ್ಲಿ ಮಾತನಾಡಿದ ಕೇಂದ್ರ ದೂರ ಸಂಪರ್ಕ ಸಚಿವ ಜೋತಿರಾಧಿತ್ಯ...

ಮಹಾರಾಷ್ಟ್ರ| ವರದಕ್ಷಿಣೆಯಾಗಿ ಬೈಕ್‌ ಕೊಡಲಿಲ್ಲವೆಂದು ಪತ್ನಿಗೆ ‘ತಲಾಖ್’ ನೀಡಿದ ಪತಿ

ಭಾರತೀಯ ಕಾನೂನಿನಡಿಯಲ್ಲಿ ಕ್ರಿಮಿನಲ್ ಅಪರಾಧವಾಗಿದ್ದರೂ, ವರದಕ್ಷಿಣೆಯಾಗಿ ಮೋಟಾರ್ ಸೈಕಲ್ (ಬೈಕ್‌) ಕೊಡದ ಕಾರಣ ತನ್ನ ಪತ್ನಿಗೆ 'ತ್ರಿವಳಿ ತಲಾಖ್' ನೀಡಿದ ಆರೋಪದ ಮೇಲೆ ಮಹಾರಾಷ್ಟ್ರದ ಭಿವಂಡಿಯ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಥಾಣೆ...

ದೆಹಲಿ ಮಹಾನಗರ ಪಾಲಿಕೆ ಉಪಚುನಾವಣೆ: 7 ವಾರ್ಡ್‌ಗಳಲ್ಲಿ ಬಿಜೆಪಿ, ಮೂರರಲ್ಲಿ ಆಪ್‌ಗೆ ಗೆಲುವು

ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಉಪಚುನಾವಣೆಯ ಮತಗಳ ಎಣಿಕೆ ಬುಧವಾರ (ಡಿಸೆಂಬರ್ 1) ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ) 12 ವಾರ್ಡ್‌ಗಳಲ್ಲಿ ಏಳು ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯ ಸಾಧಿಸಿದೆ....

ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

ಹಾಸನ ಜಿಲ್ಲೆ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ತನಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ಕೋರಿ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್...