Homeಕರ್ನಾಟಕಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

- Advertisement -
- Advertisement -

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣದ ದಿನದಂದು ಸಾಮಾಜಿಕ ನ್ಯಾಯಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗಳ ಊರಾದ ಸಿದ್ದರಾಮನಹುಂಡಿಯಿಂದ ಬೆಳಗ್ಗೆ ಕಾಲ್ನಡಿಗೆ ಜಾಥ ಆರಂಭಿಸಿ, ‘ಒಳಮೀಸಲಾತಿ ಜಾರಿಗೊಳಿಸಿ, ಇಲ್ಲ ಕುರ್ಚಿ ಖಾಲಿ ಮಾಡಿ’ ಘೋಷಣೆಯೊಂದಿಗೆ ಸಾಗಲಿದೆ. ಬಳಿಕ ಟಿ. ನರಸೀಪುರ, ಬನ್ನೂರು, ವ್ಯಾಸರಾಯನಪುರ ಮೂಲಕ ಮೈಸೂರಿನ ಕಡೆಗೆ ತೆರಳಲಿರುವ ಜಾಥಾ ಡಿಸೆಂಬರ್ 11ರಂದು ಮೈಸೂರಿಗೆ ತಲುಪಿ, ಅಪರಾಹ್ನ 12ಕ್ಕೆ ಪುರಭವನ ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಒಂದು ವೇಳೆ ಪೂರ್ಣಪ್ರಮಾಣದ ಒಳಮೀಸಲಾತಿ ಜಾರಿಗೆ ಕ್ರಮಕೈಗೊಳ್ಳದೆ ಇದ್ದರೆ ಎರಡನೇ ಹಂತದ ಹೋರಾಟವಾಗಿ ಬೆಂಗಳೂರಿನಲ್ಲಿ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

ವಕೀಲರಾದ ಎಸ್. ಮಾರೆಪ್ಪ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಮೈಸೂರು ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಅವರು ಒಳಮೀಸಲಾತಿ ಜಾರಿಗೆ ಅಡ್ಡಗಾಲು ಹಾಕುತಿದ್ದಾರೆ. ಹೀಗಾಗಿ, ಸಂಬಂಧಪಟ್ಟವರನ್ನು ವರ್ಗಾಯಿಸಬೇಕು ಸಾಮಾಜಿಕ ನ್ಯಾಯ ನೀಡುವಂತಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಗೂರು ಸಿದ್ದರಾಜು, ಕನಕನಹಳ್ಳಿ ಕೃಷ್ಣಪ್ಪ, ರಾಜಣ್ಣ ದಂಡೋರ, ಬಸಪ್ಪ ಲಿಡ್ಕರ್, ಸ್ವಾಮಿ ಮೈಸೂರು, ವೆಂಕಟರಾಮು, ಆನಂದಕುಮಾರ್, ಹನುಮೇಶ್ ಗುಂಡೂರು, ಹುಣಸೂರು ಪುಟ್ಟಯ್ಯ ಇದ್ದರು.

ಹಕ್ಕೊತ್ತಾಯಗಳು:

ಶೈಕ್ಷಣಿಕ ಕ್ಷೇತ್ರವಾದ ಉನ್ನತ ಶಿಕ್ಷಣ ಸೇರಿದಂತೆ ಎಲ್ಲಾ ಶೈಕ್ಷಣಿಕ ರಂಗಗಳಲ್ಲಿ ಒಳಮೀಸಲಾತಿಯನ್ನು ಅನ್ವಯಿಸಬೇಕು ಮತ್ತು ಕೂಡಲೇ, ಕಂದಾಯ ಇಲಾಖೆಯು ಪರಿಶಿಷ್ಟ ಜಾತಿಗಳ ಪ್ರವರ್ಗವಾರು ಜಾತಿ ಪ್ರಮಾಣ ಪತ್ರ ನೀಡಲು ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 15(4) ರಂತೆ ಶೇ.6: 6: 5 ನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿಗಳ ಒಳಮೀಸಲಾತಿಯನ್ನು ಅನುದಾನಿತ ಶಾಲೆಗಳು ಸೇರಿದಂತೆ ಸರಕಾರಿ, ಅರೆಸರಕಾರಿ ಹುದ್ದೆಗಳ ನೇರನೇಮಕಾತಿ, ಬಡ್ತಿ, ಬ್ಲಾಕ್‌ಲಾಗ್ ಹುದ್ದೆಗಳ ನೇಮಕಾತಿಗೂ ಅನ್ವಯಿಸಿ ಆದೇಶಿಸಬೇಕು. (ಸಂವಿಧಾನ ಪರಿಚ್ಛೇದ 16(4), 16 (4ಎ)- ಸಂವಿಧಾನ 77ನೇ ತಿದ್ದುಪಡಿ ಕಾಯ್ದೆ 1995 ರಂತೆ ಶೇ.6: 6: 5 ಅನುಪಾತದಲ್ಲಿ ಜಾರಿಗೆಗೊಳಿಸಬೇಕು)

ಪರಿಶಿಷ್ಟಜಾತಿ ಉಪ ಹಂಚಿಕೆ ಹಣದಲ್ಲೂ ಒಳಮೀಸಲಾತಿ ಶೇ.6: 6: 5 ಅನುಪಾತದಂತೆ ಆದೇಶ ಮಾಡಿ ಜಾರಿಗೊಳಿಸಬೇಕು. ಉಪಹಂಚಿಕೆ ಕಾಯ್ದೆ ಕಲಂ 7.(ಬಿ), 7 (ಸಿ) ಯನ್ನು ಕೂಡಲೆ ರದ್ದುಪಡಿಸಬೇಕು. (ಸಂವಿಧಾನ ಪರಿಚ್ಛೇದ 16(4) – ಆರ್ಥಿಕ ಸಬಲೀಕರಣಕ್ಕೆ ಸಮಾನ ಅವಕಾಶಗಳು, ಪರಿಶಿಷ್ಟ ಜಾತಿಗಳ ಉಪಯೋಜನೆ ಕಾಯ್ದೆ 2013 ರಂತೆ ಕೆಳ ಮಟ್ಟದ ಆದಾಯ ವರ್ಗವಾದ ಪರಿಶಿಷ್ಟ ಜಾತಿಗಳು ರೂ. 2.50 ಲಕ್ಷ ಆದಾಯ ತಲುಪಲು ಉದ್ದೇಶಿಸಲಾಗಿದ್ದು, ಮಧ್ಯಮ ವರ್ಗದ ಆದಾಯ ರೂ. 5.00 ಲಕ್ಷ ತಲುಪುವ ಗುರಿ ಹೊಂದಿದೆ. ಅದ್ದರಿಂದ ಪರಿಶಿಷ್ಟ ಜಾತಿ ಸಮುದಾಯಗಳು ಕಡಿಮೆ ಆದಾಯ ಹೊಂದಿರುವ ವರ್ಗವಾದ್ದರಿಂದ ಉಪಯೋಜನೆ ಹಣವನ್ನು ಶೇ.6.6:5 ಅನುಪಾತದಲ್ಲಿ ಒಳಮೀಸಲಾತಿ ಜಾರಿಗೊಳಿಸುವುದು ಸಮಂಜಸವಾಗಿದೆ)

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. (ಕರ್ನಾಟಕ ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ಕಾಯ್ದೆ 1993 ಮೂರು (3) ಹಂತದ ಸ್ಥಳೀಯ ಸ್ವಂತ ಸರಕಾರ ರಚನೆ, ಗ್ರಾಮ, ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಯಲ್ಲಿ ಪ.ಜಾತಿ/ಪಂಗಡ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿಯನ್ನು ಖಾತ್ರಿಪಡಿಸಿದೆ. 1992 ರ ಇಂದಿರಾ ಸಹಾನಿ ತೀರ್ಪಿನಲ್ಲಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮಾತ್ರ ಮೀಸಲಾತಿ ನಿಗದಿಪಡಿಸಲಾಗಿತ್ತು. ಆದರೆ, ಪಂಚಾಯತ್ ಕಾಯ್ದೆ 1993 ಹಿಂದುಳಿದವರಿಗೂ ಸ್ಥಳೀಯ ಚುನಾವಣೆಗಳಲ್ಲಿ ಪ್ರವರ್ಗವಾರು ಮೀಸಲಾತಿ ನಿಗದಿಪಡಿಸಿ ಜಾರಿಗೊಳಿಸಿದಂತೆ, ಪ.ಜಾತಿಗಳಿಗೆ ಶೇ.6: 65 ಅನುಪಾತದಂತೆ ಪ್ರವರ್ಗವಾರು ಒಳಮೀಸಲಾತಿ ಜಾರಿಗೊಳಿಸುವುದು ನ್ಯಾಯಯುತ, ಸಮಂಜಸವಾಗಿದೆ)

ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪರಿಶೀಲಿಸಿಲು ಪ್ರವರ್ಗ -ಎ ಗೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣಾ ಸಮಿತಿಯನ್ನು ರಚಿಸಬೇಕು. (ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಎ, ಪ್ರವರ್ಗ-ಬಿ ಯಲ್ಲಿ ಒಳಮೀಸಲಾತಿ ಪಡೆಯಬಹುದೆಂದು ಸರಕಾರ ದಿ-25-08-2025 ರಂದು ಆದೇಶಿಸಿದೆ. ಕಡಿಮೆ ಮೆರಿಟ್ ವರ್ಗವಾದ ಪ್ರವರ್ಗ-ಎ ಗೆ, ಮಾದಿಗರಲ್ಲದ ಎಕೆ,ಎಡಿ,ಎಎ, ಹೆಸರಿನಲ್ಲಿ ಪ್ರವರ್ಗ-ಬಿ ಸೇರಿದಂತೆ ಯಾರಾದರೂ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಪ್ರವರ್ಗ-ಎ ಯಲ್ಲಿ ಒಳಮೀಸಲಾತಿ ಪಡೆಯುವ ಅಪಾಯವಿದೆ. ಸಫಾಯಿ ಕರ್ಮಚಾರಿ ಆಯೋಗಕ್ಕೆ ಮೇಲ್ವಿಚಾರಣ ಸಮಿತಿ ಇರುವಂತೆ ಪ.ಜಾತಿ ಪ್ರವರ್ಗ-ಎ ಗೆ ಕೂಡ ಜಾತಿ ಪ್ರಮಾಣ ಪತ್ರ ಪರಿಶೀಲಿಸಲು ಮೇಲ್ವಿಚಾರಣಾ ಸಮಿತಿ ರಚಿಸಬೇಕು)

ಪರಿಶಿಷ್ಟ ಜಾತಿಯ ಪಟ್ಟಿಯಿಂದ ಆದಿ ಕರ್ನಾಟಕ, ಆದಿ ದ್ರಾವಿಡ ಮತ್ತು ಆದಿ ಆಂಧ್ರ ಜಾತಿಗಳನ್ನು ಪರಿಶಿಷ್ಟ ಜಾತಿಯ 101 ಜಾತಿಗಳ ಪಟ್ಟಿಯಿಂದ ತೆಗೆಯಲು ರಾಜ್ಯ ಸರ್ಕಾರ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಮತ್ತು ಇನ್ನು ಮುಂದೆ ಸರ್ಕಾರ ಈ ಜಾತಿಗಳ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ನಿಲ್ಲಿಸಬೇಕು.

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಸಮಾಜ ಕಲ್ಯಾಣ ಇಲಾಖೆಯನ್ನೇ ತಪ್ಪು ದಾರಿಗೆ ಎಳೆದು, ಒಳಮೀಸಲಾತಿ ಬಗ್ಗೆ ಸರಕಾರಕ್ಕೆ ಸುಳ್ಳು ಮಾಹಿತಿ ನೀಡಿ ಇಲಾಖೆಯನ್ನು ನಿಷ್ಕ್ರಿಯಗೊಳಿಸುತ್ತಿರುವ ಸಚಿವ ಡಾ|| ಹೆಚ್.ಸಿ. ಮಹದೇವಪ್ಪ ಇಲಾಖೆಯ ಆಯುಕ್ತರಾದ ರಾಕೇಶ್ ಕುಮಾರ, ಸಲಹೆಗಾರರಾದ ವೆಂಕಟಯ್ಯನವರನ್ನು ಕೂಡಲೇ ವರ್ಗಾಯಿಸಬೇಕು.

ಕೇಂದ್ರ ಸರಕಾರ ಹುದ್ದೆಗಳನ್ನು ಹೊರತುಪಡಿಸಿ, ರಾಜ್ಯ ಸರಕಾರದ ವ್ಯಾಪ್ತಿಗೊಳಪಡುವ ಗುತ್ತಿಗೆ ಕಾಮಗಾರಿ, ಗುತ್ತಿಗೆ ಕಾರ್ಮಿಕರ ನೇಮಕಾತಿ, ತಾತ್ಕಾಲಿಕ ನೇಮಕಾತಿ ಸೇರಿದಂತೆ ಅತಿಥಿ ಉಪನ್ಯಾಸಕರು ಮತ್ತು ಶಿಕ್ಷಕರು ನೇಮಕಾತಿಯಲ್ಲೂ ಶೇ.6:6:5 ಅನ್ವಯಿಸಿ ಆದೇಶಿಸಬೇಕು.

ಪ.ಜಾತಿ ಅಲೆಮಾರಿ ಸಮುದಾಯಿಗಳಿಗೆ ಶೇ.! ಒಳಮೀಸಲಾತಿಯನ್ನು ಜಾರಿಗೊಳಿಸಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ಹೊರತುಪಡಿಸಿ, ರಾಜ್ಯದ ವಿವಿಧ ಪಾಲಿಕೆ, ವಿವಿಧ ನಗರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು, ಯು.ಜಿ.ಡಿ. ಕಾರ್ಮಿಕರನ್ನು ಮತ್ತು ವಾಹನ ಚಾಲಕರು, ಲೋಡರ್ಸ್, ಕ್ಲೀನರ್ಸ್‌ಗಳನ್ನು ಕೂಡಲೇ ಕಾಯಂಗೊಳಿಸಬೇಕು.

2022-23ರ ಅವದಿಯಲ್ಲಿ ನೇರ ನೇಮಕಗೊಂಡ ರಾಜ್ಯದ 5533 ಪೌರ ಕಾರ್ಮಿಕರ ವೇತನ ಸರ್ಕಾರದಿಂದ ಶೇ. 65ರಷ್ಟು ಮಾತ್ರ ನೀಡುತ್ತಿದ್ದು, ಇತರೆ ಖಾಯಂ ಪೌರ ಕಾರ್ಮಿಕರಿಗೆ ನೀಡುವ ಶೇ. 100 ರಷ್ಟು ಸಂಪೂರ್ಣ ವೇತನ ಸರ್ಕಾರದಿಂದಲೇ ಪಾವತಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...