Homeಕರ್ನಾಟಕಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ಮೈಸೂರು ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ: ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ ಎಂದು ಒಪ್ಪಿಕೊಂಡ ಬಿಜೆಪಿ ಶಾಸಕ!

ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ಆರೋಪಿಯ ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮಹಾರಾಣಿ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿಯೊರ್ವಳಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿ ಪರ ಗೊತ್ತಿಲ್ಲದೇ ಪತ್ರಕೊಟ್ಟು ತಪ್ಪು ಮಾಡಿದ್ದೇನೆ, ಮತ್ತೊಮ್ಮೆ ಹೀಗೆ ಮಾಡುವುದಿಲ್ಲ ಎಂದು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರು ತಿಳಿಸಿದ್ದಾರೆ.

ಇನ್ನೊಂದೆಡೆ ಆರೋಪಿ ದ್ವಿತಿಯ ದರ್ಜೆ ಸಹಾಯಕ ಜಯರಾಮುನನ್ನು ಅಮಾನತು ಮಾಡಿರುವುದನ್ನು ತೆರವುಗೊಳಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌ ತಿಳಿಸಿದ್ದಾರೆ.

ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು ನಮಗೆ ಅಮಾನತು ಆದೇಶ ವಾಪಸ್‌ ತೆಗೆದುಕೊಳ್ಳಿ ಎಂದು ಯಾವುದೇ ಆದೇಶ ಬಂದಿಲ್ಲ. ಅಲ್ಲದೇ ವಿಚಾರಣೆ ಪ್ರಗತಿಯಲ್ಲಿದೆ. ಹಾಗಾಗಿ ಪೂರ್ಣ ವಿಚಾರಣೆ ಮುಗಿಯುವವರೆಗೂ ಯಾವುದೇ ಕಾರಣಕ್ಕೂ ನಾವು ಅಮಾನತನ್ನು ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ಆರೋಪಿಯಾಗಿ ಅಮಾನತು ಆಗಿರುವ ಕಾಲೇಜಿನ ದ್ವಿತಿಯ ದರ್ಜೆ ಸಹಾಯಕ ಜಯರಾಮುರವರು ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕರಾದ ಎಲ್‌.ನಾಗೇಂದ್ರರವರಿಂದ ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ ನಾರಾಯಣ್‌ರವರಿಗೆ ಅಮಾನತು ರದ್ದುಪಡಿಸುವಂತೆ ಪತ್ರ ಬರೆದಿದ್ದರು. ದಿನಾಂಕ 16-12-2019ರಂದು ಪತ್ರ ಬರೆದಿದ್ದ ಶಾಸಕರು ಕಾಲೇಜಿನಲ್ಲಿ ಜಯರಾಮುರವರಿಗೆ ಆಗದ ಪ್ರಾಧ್ಯಾಪಕರು ಅಮಾನತ್ತಿಗೆ ಕಾರಣರಾಗಿದ್ದಾರೆ. ಕೂಡಲೇ ಅಮಾನತ್ತು ರದ್ದುಪಡಿಸಿ ಅದೇ ಕಾಲೇಜಿಗೆ ಅವರನ್ನು ನಿಯುಕ್ತಿ ಮಾಡಬೇಕೆಂದು ಒತ್ತಾಯಿಸಿದ್ದರು.

ಇದನ್ನೂ ಓದಿ: ಮಹಾರಾಣಿ ಕಾಲೇಜು: ಲೈಂಗಿಕ ಕಿರುಕುಳ ನಡೆಸಿದ ಆರೋಪಿಯ ಪರ ಬಿಜೆಪಿ ಶಾಸಕ ನಾಗೇಂದ್ರ ವಕಾಲತ್ತು..

ಈ ಕುರಿತು ನಾನುಗೌರಿ.ಕಾಂ ಶಾಸಕ ನಾಗೇಂದ್ರರವರನ್ನು ಸಂಪರ್ಕಿಸಿತು. ದಿನನಿತ್ಯ ನೂರಾರು ಜನರು ನನ್ನ ಕಛೇರಿ ಬಂದು ಪತ್ರ ಕೇಳುತ್ತಾರೆ. ಹಾಗಾಗಿ ಆತನಿಗೆ ಪತ್ರ ಕೊಟ್ಟಿದ್ದೇನೆ, ಹುಡುಗಿಯೇ ವಾಪಸ್‌ ಕೇಸು ಪಡೆದಿದ್ದಾಳೆ. ಕೇಸು ಮುಗಿದಿದೆಯಲ್ಲವೇ ಎಂದು ಜಾರಿಕೊಳ್ಳಲು ಪ್ರಯತ್ನಿಸಿದರು. ನೀವು ಒಬ್ಬ ಶಾಸಕ ಸ್ಥಾನದಲ್ಲಿದ್ದುಕೊಂಡು ಅನ್ಯಾಯಕ್ಕೆ ಒಳಗಾದವರಿಗೆ ಬೆಂಬಲಿಸಬೇಕೆ ಅಥವಾ ಆರೋಪಿಗೋ? ಹೆಣ್ಣು ಮಕ್ಕಳ ವಿಷಯದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಲ್ಲವೇ? ಶಾಸಕರೇ ಹೀಗೆ ಮಾತನಾಡಿದರೆ  ಹೇಗೆ, ಆ ಆಡಿಯೋ ಪೂರ್ಣವಾಗಿ ಕೇಳಿದ್ದೀರಾ ಎಂದು ಅವರನ್ನು ಪ್ರಶ್ನಿಸಲಾಯಿತು.

ಶಾಸಕರಾದ ಎಲ್‌.ನಾಗೇಂದ್ರ

ಆಗ ಎಚ್ಚೆತ್ತುಕೊಂಡ ಅವರು ನನಗೆ ಈ ವಿಚಾರದ ಬಗ್ಗೆ ಪೂರ್ಣ ಅರಿವಿಲ್ಲದೇ ಪತ್ರ ಕೊಟ್ಟು ತಪ್ಪು ಮಾಡಿದ್ದೇನೆ. ಆನಂತರ ಆತ ತಪ್ಪು ಮಾಡಿದ್ದಾನೆಂದು ಗೊತ್ತಾಗಿದೆ. ಹಾಗಾಗಿ ಆತನಿಗೆ ಶಿಕ್ಷೆಯಾಗಬೇಕೆಂದು ಮತ್ತೊಂದು ಪತ್ರ ಬೇಕಾದರೆ ಕೊಡುತ್ತೇನೆ. ಆತ ನಮ್ಮೂರಿನವನೇ ಆಗಿದ್ದು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಈ ವಿಚಾರದಲ್ಲಿ ಇನ್ನು ಮುಂದೆ ಈ ರೀತಿ ಮಾಡುವುದಿಲ್ಲ, ಎಚ್ಚರಿಕೆ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.

ತನಗಾದ ಅನ್ಯಾಯದ ವಿರುದ್ಧ ವಿದ್ಯಾರ್ಥಿನಿಯು ಪ್ರಾಂಶುಪಾಲರಿಗೆ ದೂರು ನೀಡಿದ್ದರು. ತದನಂತರ ಕಾಲೇಜಿನ ಮಹಿಳಾ ದೌರ್ಜನ್ಯ ತಡೆ ಸಮಿತಿಯು ಈ ಕುರಿತು ವಿಚಾರಣೆ ನಡೆಸಿ ಆರೋಪ ಸಾಬೀತಾಗಿದ್ದು ಆರೋಪಿಯ ಮೇಲೆ ಕ್ರಮ ಜರುಗಿಸುವಂತೆ ವರದಿ ನೀಡಿತ್ತು. ಅದರ ಆಧಾರದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತರಾದ ಅನಿರುದ್ಧ್ ಶ್ರವಣ್‌‌ರವರು ಸಂಪೂರ್ಣ ವಿಚಾರಣೆಗೆ ಆದೇಶಿಸಿ 12-12-2019 ರಂದು ಆರೋಪಿ ಜಯರಾಮುನನ್ನು ಅಮಾನತ್ತುಗೊಳಿಸಿದ್ದರು.

ನಾನುಗೌರಿ.ಕಾಂ ಈ ಕುರಿತು ಮಹಿಳಾ ಆಯೋಗದ ಮಾಜಿ ಅಧ್ಯಕ್ಷರು ಮತ್ತು ವಕೀಲರಾದ ಮಂಜುಳ ಮಾನಸರವನ್ನು ಮಾತನಾಡಿಸಲಾಯಿತು. “ಯಾರೇ ತಪ್ಪು ಮಾಡಿದರೂ ಅದು ತಪ್ಪೆ. ತಪ್ಪೆಂದು ಗೊತ್ತಿದ್ದು ಅದನ್ನು ಬೆಂಬಲಿಸುವುದು ಅದು ದೊಡ್ಡ ತಪ್ಪು. ಆ ರೀತಿಯಲ್ಲಿ ನೋಡಿದರೆ ಶಾಸಕರಾದ ನಾಗೇಂದ್ರರವರ ಈ ನಡೆ ತೀವ್ರ ಖಂಡನೀಯ. ಬಿಜೆಪಿಯ ಶಾಸಕರು ಒಬ್ಬ ಹೆಣ್ಣು ಮಗಳಿಗೆ ಅನ್ಯಾಯವಾಗಿದೆ ಎಂದು ಗೊತ್ತಿದ್ದರೂ ಕೂಡ ಆರೋಪಿಯ ಪರ ಪತ್ರ ಬರೆಯುವುದು ಎಷ್ಟು ಸರಿ?” ಎಂದು ಪ್ರಶ್ನಿಸಿದ್ದಾರೆ.

ಮಂಜುಳ ಮಾನಸ

ಅಮಾನತ್ತನ್ನು ತಕ್ಷಣವೇ ತೆರವುಗೊಳಿಸಿ ಎನ್ನುವುದರ ಮೂಲಕ ಶಾಸಕರು ಯಾವ ಸಂದೇಶ ಕೊಡುತ್ತಿದ್ದಾರೆ? ಒಬ್ಬ ಶಾಸಕರಾಗಿ ನನಗೆ ಗೊತ್ತಿಲ್ಲದೇ ಹೀಗೆ ಮಾಡಿದ್ದೇನೆ ಎಂದು ತಪ್ಪಿಸಿಕೊಳ್ಳಬಾರದು. ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಬೇಕಾದ ಜವಾಬ್ದಾರಿ ಇಡೀ ಸಮಾಜದ್ದು. ಅಂತದ್ದರಲ್ಲಿ ಶಾಸಕ ಸ್ಥಾನದಲ್ಲಿರುವವರು ಆರೋಪಿಗೆ ಬೆಂಬಲ ನೀಡುವುದನ್ನು ಯಾವ ಸಮಾಜವೂ ಒಪ್ಪುವುದಿಲ್ಲ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಅಮಾನತ್ತು ಯಾವ ಕಾರಣಕ್ಕೂ ರದ್ದಾಗಬಾರದು. ಸಮಗ್ರ ತನಿಖೆ ನಡೆಯಬೇಕು, ಆ ವಿದ್ಯಾರ್ಥಿನಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಲೇಜಿನ ಮಹಿಳಾ ದೌರ್ಜನ್ಯ ವಿರೋಧಿ ಸಮಿತಿಯ ಸದಸ್ಯರು ಆಗಿದ್ದ, ವಕೀಲರಾದ ಸುಮನರವರು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಆರೋಪಿ ಜಯರಾಮು ಮಾತ್ರವಲ್ಲ. ಅವರ ಪರ ನಿಂತ ಶಾಸಕ ಎಲ್.ನಾಗೇಂದ್ರ, ನಮ್ಮ ಸಮಿತಿಯನ್ನು ಯಾರಿಗೆ ತಿಳಿಸದೇ ಮುಚ್ಚಿರುವ ಪ್ರಾಂಶುಪಾಲರು ಸಹ ಆರೋಪಿಯಾಗಿದ್ದಾರೆ. ಇನ್ನು ವಿಚಾರಣೆ ಜಾರಿಯಲ್ಲಿರುವಾಗಲೇ ಪ್ರಾಶುಪಾಲರು ಸಮಿತಿಯನ್ನು ವಿಸರ್ಜಿಸಿ ಆರೋಪಿ ಪರ ವಹಿಸಿರುವುದು ದುರದೃಷ್ಠಕರ, ಹಾಗೆಯೇ ಶಾಸಕರು ಆರೋಪಿ ಪರ ಪತ್ರ ನೀಡಿರುವುದು ನಾಚಿಕೇಕೇಡು ಎಂದು ಕಿಡಿಕಾರಿದ್ದಾರೆ. ನಿಷ್ಪಕ್ಷಪಾತ ತನಿಖೆ ನಡೆದು ಆರೋಪಿಗಳೆಲ್ಲರ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...