Homeಕರ್ನಾಟಕದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

- Advertisement -
- Advertisement -

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಬೆಂಗಳೂರಿನಲ್ಲಿ ಇಂದು ಆಯೋಜಿಸಿದ್ದ ‘ಸಂವಿಧಾನ ಸಂರಕ್ಷಿಸಿ ಮನುಸ್ಮೃತಿ ಹಿಮ್ಮೆಟ್ಟಿಸೋಣ’ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು. 

“ಸಂವಿಧಾನಕ್ಕೆ ಪರ್ಯಾಯವಾಗಿ ಮನುವಾದ ಜಾರಿಗೆ ತರುವ ಪ್ರಯತ್ನ ಹಲವು ವರ್ಷಗಳಿಂದ ನಡೆಯುತ್ತಿದೆ. ಅಂಬೇಡ್ಕರ್ ಮತ್ತು ಬುದ್ಧನ ಅನುಯಾಯಿಗಳಾದ ನಮ್ಮ ಮೇಲೆ ಬಹಳಷ್ಟು ಜವಾಬ್ದಾರಿ ಇದೆ. ಕಳೆದ 12 ವರ್ಷಗಳ ಬಿಜೆಪಿ ಆಡಳಿತದಲ್ಲಿ ದೇಶದ ವಾತಾವರಣ ಸಾಕಷ್ಟು ಬದಲಾಗಿದೆ, ಮನುವಾದಿಗಳು ಶರವೇಗದಲ್ಲಿ ಬೆಳೆಯುತ್ತಿದ್ದಾರೆ. ಏಕೆಂದರೆ, ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯ ಇದೆ. ನಾವು ಒಂದಾಗದೇ ಅವರ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ. ನಮ್ಮ ನಡುವಿನ ಸಮಸ್ಯೆಗಳ ಬಗ್ಗೆಯೂ ಚರ್ಚೆ ಆಗಬೇಕು. ಆಗ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ” ಎಂದು ಕಿವಿಮಾತು ಹೇಳಿದರು.

“ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಹಾರದ ಹಿಂದುಳಿದವರು ಏನು ಮಾಡಿದರು ಎಂಬುದು ನಮಗೆಲ್ಲಾ ಗೊತ್ತಿದೆ. ಕರ್ನಾಟಕದಲ್ಲೂ ಹೀಗೆ ಆದರೆ ಆಶ್ಚರ್ಯಪಡಬೇಕಿಲ್ಲ. ‘ಸಂವಿಧಾನ ನಮಗೆ ಬೇಕಿಲ್ಲ.. ಬೇರೆ ಸಂವಿಧಾನ ಬೇಕು’ ಎಂದು ಮನುವಾದಿಗಳು ಬಹಿರಂಗವಾಗಿ ಹೇಳುತ್ತಿದ್ದಾರೆ. ಬಸವಣ್ಣನ ಅಭಿಮಾನಿಗಳು ತಾಲಿಬಾನಿಗಳು ಎಂದು ಸ್ವಾಮೀಜಿಯೊಬ್ಬರು ಹೇಳಿದ್ದಾರೆ. ಏಕೆಂದರೆ. ಇಂದು ಅವರ ಶಕ್ತಿ, ಸದಸ್ಯರು ಮತ್ತು ಶಾಖೆಗಳು ಹೆಚ್ಚಾಗಿವೆ, ನಮ್ಮಲ್ಲಿ ಶಾಖೆಗಳು ಇಲ್ಲ. ನಾವು ಒಂದು ಕರೆ ಕೊಟ್ಟಾಗ ಲಕ್ಷಾಂತರ ಜನ ಸೇರಿದರೆ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ. ಹೀಗೆ ನೂರಿನ್ನೂರು ಜನ ಸೇರಿಕೊಂಡು ಕಾರ್ಯಕ್ರಮ ಮಾಡಿದರೆ ಪ್ರಯೋಜನವಿಲ್ಲ” ಎಂದರು.

“ಎಲ್ಲವನ್ನೂ ಮರೆತು ನಾವು ಒಂದಾದರೆ ಮಾತ್ರ ಸಂವಿಧಾನ ರಕ್ಷಣೆ ಸಾಧ್ಯ. ನಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟಾಗಬೇಕು. ಬಿ.ಕೃಷ್ಣಪ್ಪ ದಲಿತ ಸಂಘರ್ಷ ಸಮಿತಿ (ದಸಂಸ) ಸ್ಥಾಪನೆ ಮಾಡಿದ ಬಳಿಕ ಸರ್ಕಾರಗಳು ಅವರ ಮಾತು ಕೇಳುತ್ತಿದ್ದವು. ಆದರೆ, ಇಂದು ನಮ್ಮಲ್ಲಿ ಒಡಕು ಹೆಚ್ಚಾಗಿದ್ದು ನಮ್ಮ ಮಾತು ಯಾರೂ ಕೇಳುತ್ತಿಲ್ಲ. ನಾವು ರಾಜಕೀಯ ಅಧಿಕಾರ ಹಿಡಿಯಬೇಕಾದರೆ ಒಗ್ಗಟಾಗಬೇಕು” ಎಂದರು.

“ಮನುಸ್ಮೃತಿ ಮತ್ತು ಸಂವಿಧಾನ ನಡುವಿನ ವ್ಯತ್ಯಾಸಗಳನ್ನು ನಾವು ನಮ್ಮವರಿಗೆ ಬಿಸಿಡಿ ಹೇಳಬೇಕು. ಇಲ್ಲದಿದ್ದರೆ ಅದನ್ನೂ ಒಂದು ಪುಸ್ತಕ ಎಂದುಕೊಳ್ಳುತ್ತಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಬೇಕು. ನಾವು ಮಾತ್ರ ಬದಲಾವಣೆಯಾಗುವುದು ಪರಿಹಾರವಲ್ಲ. ನಾವು ನಮ್ಮ ಮನೆಯನ್ನು ಬದಲಾವಣೆ ಮಾಡಿದರೆ ಮಾತ್ರ ಬಾಬಾ ಸಾಹೇಬರ ಕನಸು ನನಸು ಮಾಡಲು ಸಾಧ್ಯ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...