Homeಅಂತರಾಷ್ಟ್ರೀಯರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

- Advertisement -
- Advertisement -

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್​ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಈ ಸಮಯದಲ್ಲಿ ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಪ್ರಧಾನಿ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

ಉಕ್ರೇನ್ ಬಿಕ್ಕಟ್ಟು ಆರಂಭವಾದಾಗಿನಿಂದ ನಾವು ನಿರಂತರ ಚರ್ಚೆ ನಡೆಸಿದ್ದೇವೆ. ಕಾಲಕಾಲಕ್ಕೆ, ನೀವು ಕೂಡ, ನಿಜವಾದ ಸ್ನೇಹಿತರಾಗಿ, ಎಲ್ಲದರ ಬಗ್ಗೆ ನಮಗೆ ಮಾಹಿತಿ ನೀಡುತ್ತಿದ್ದೀರಿ. ನಂಬಿಕೆ ಒಂದು ದೊಡ್ಡ ಶಕ್ತಿ ಎಂದು ನಾನು ನಂಬುತ್ತೇನೆ, ನಾನು ಈ ವಿಷಯವನ್ನು ನಿಮ್ಮೊಂದಿಗೆ ಹಲವು ಬಾರಿ ಚರ್ಚಿಸಿದ್ದೇನೆ. ಅದನ್ನು ಪ್ರಪಂಚದ ಮುಂದೆ ಇರಿಸಿದ್ದೇನೆ ಎಂದಿದ್ದಾರೆ.

ರಾಷ್ಟ್ರಗಳ ಕಲ್ಯಾಣವು ಶಾಂತಿಯ ಹಾದಿಯಲ್ಲಿದೆ. ಒಟ್ಟಾಗಿ, ನಾವು ಜಗತ್ತನ್ನು ಆ ಹಾದಿಯತ್ತ ಕೊಂಡೊಯ್ಯುತ್ತೇವೆ. ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಪ್ರಯತ್ನಗಳೊಂದಿಗೆ, ಜಗತ್ತು ಮತ್ತೊಮ್ಮೆ ಶಾಂತಿಯ ದಿಕ್ಕಿಗೆ ಮರಳುತ್ತದೆ ಎಂದು ನನಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

ಪುಟಿನ್‌ ಅವರ ಈ ಭೇಟಿಯು ಐತಿಹಾಸಿಕವಾಗಿದೆ. ಉಕ್ರೇನ್‌ ಬಿಕ್ಕಟ್ಟಿನ ಬಗ್ಗೆ ನಾವು ನಿರಂತರವಾಗಿ ಚರ್ಚಿಸುತ್ತಿದ್ದೇವೆ. ರಷ್ಯಾ ಶಾಂತಿ ಮಾರ್ಗ ಕಂಡುಕೊಳ್ಳಬೇಕಿದೆ. ಏಕೆಂದರೆ ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ವಿಶ್ವಕ್ಕೆ ಪ್ರಯೋಜನವಾಗುತ್ತದೆ. ಶಾಂತಿಗಾಗಿ ನಾವು ಎಲ್ಲಾ ಪ್ರಯತ್ನಗಳನ್ನ ಮಾಡುತ್ತೇವೆ. ಉಕ್ರೇನ್-ರಷ್ಯಾ ಸಂಘರ್ಷ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ ಎಂದು ಪುನರ್ ಉಚ್ಛರಿಸಿದರು.

ಇದೇ ವೇಳೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನ ಶ್ಲಾಘಿಸಿದರು.

ಇದಕ್ಕೂ ಮುನ್ನ ಭಾರತ ಪ್ರವಾಸದಲ್ಲಿರುವ ಪುಟಿನ್‌ ಅವರು ರಾಷ್ಟ್ರಪತಿ ಭವನಕ್ಕೆ ಆಗಮಿಸುತ್ತಿದ್ದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದರು.

ಅದ್ಧೂರಿ ಸಂಗೀತದ ಮೂಲಕ ರೆಡ್‌ ಕಾರ್ಪೆಟ್‌ ಹಾಸಿ ಪುಟಿನ್‌ಗೆ ಸ್ವಾಗತ ಕೋರಲಾಯಿತು. ಅಲ್ಲದೇ, ಸೇನಾಪಡೆ ಸಿಬ್ಬಂದಿ 21 ಗನ್‌ ಸೆಲ್ಯೂಟ್‌, ಮಿಲಿಟರಿ ಶಿಸ್ತು ಮತ್ತು ಸಕಲ ಗೌರವ ಸಲ್ಲಿಸಿದವು.

ಈ ನಡುವೆ ಮಾತನಾಡಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು, ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಅವರ ಪ್ರಯತ್ನಗಳನ್ನು ಶ್ಲಾಘಿಸಿದರು. ನನ್ನನ್ನು ಭಾರತಕ್ಕೆ ಆಹ್ವಾನಿಸಿದ್ದಕ್ಕೆ ತುಂಬಾ ಧನ್ಯವಾದಗಳು. ಉಕ್ರೇನ್‌ನಲ್ಲಿನ ಪರಿಸ್ಥಿತಿ ಕುರಿತು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲು ಸಿದ್ಧರಿದ್ದೇವೆ, ಶಾಂತಿ ಸ್ಥಾಪನೆಗಾಗಿ ಅಮೆರಿಕಾ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಶಾಂತಿ ಸ್ಥಾಪಿಸಲು ಹರಿಹಾರ ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಿರುವುದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. 

ರಷ್ಯಾ ಮತ್ತು ಭಾರತದ ನಡುವಿನ ಸಂಬಂಧವು ನಂಬಿಕೆಯನ್ನ ಆಧರಿಸಿದೆ. ನಾವು ಶಾಂತಿಯ ಮಾರ್ಗದಲ್ಲಿ ಪ್ರಯಾಣಿಸಿದರೆ ಮಾತ್ರ ಅದು ವಿಶ್ವಕ್ಕೆ ಪ್ರಯೋಜನವಾಗುತ್ತದೆ, ನಿಮ್ಮ ಪ್ರಯತ್ನವನ್ನು ಪ್ರಶಂಸಿಸುತ್ತೇವೆಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...