Homeಮುಖಪುಟಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ ‘ಮದರ್ ಮೇರಿ ಕಮ್ಸ್ ಟು ಮಿ’ ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು ಪ್ರಚಾರ ಮಾಡಿಲ್ಲ ಅಥವಾ ಜಾಹೀರಾತು ಮಾಡಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು, “ನಿಜವಾದ ಸಾರ್ವಜನಿಕ ಕಾಳಜಿಯ ವಿಷಯಕ್ಕಿಂತ ಸ್ವಯಂ ಪ್ರಚಾರವನ್ನು ಗಳಿಸುವ ಪ್ರಯತ್ನ’ ಎಂದು ಪರಿಗಣಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು, ಪುಸ್ತಕ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂದೆ ವಜಾಗೊಳಿಸಿದ್ದ ಕೇರಳ ಹೈಕೋರ್ಟ್ ಆದೇಶಕ್ಕೆ ಸವಾಲನ್ನು ಪರಿಗಣಿಸಿತು. ಪುಸ್ತಕದ ಮುಖಪುಟ ಚಿತ್ರವು ಅದನ್ನು ಸ್ವಇಚ್ಛೆಯಿಂದ ಖರೀದಿಸಿದ ಓದುಗರಿಗೆ ಮಾತ್ರ ಸೀಮಿತವಾಗಿರುವುದರಿಂದ ಮತ್ತು ಸಾರ್ವಜನಿಕ ಪ್ರಚಾರದ ಯಾವುದೇ ಅಂಶವನ್ನು ಹೊಂದಿರದ ಕಾರಣ, ಹೈಕೋರ್ಟ್‌ನ ಹಿಂದಿನ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ಯಾವುದೇ ಆಧಾರವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಆಗಸ್ಟ್ 28 ರಂದು ಪುಸ್ತಕ ಬಿಡುಗಡೆಯಾದ ನಂತರ, ವಕೀಲರೊಬ್ಬರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿ, ಮುಖಪುಟದ ಫೋಟೋ 2003 ರ ಸಿಗರೇಟ್, ಇತರ ತಂಬಾಕು ಉತ್ಪನ್ನಗಳ ಕಾಯ್ದೆ ಮತ್ತು 2008 ರ ನಿಯಮಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿ, ಧೂಮಪಾನದ ಚಿತ್ರಣಗಳು ಗೋಚರಿಸುವ ಆರೋಗ್ಯ ಎಚ್ಚರಿಕೆಗಳನ್ನು ಹೊಂದಿರಬೇಕು ಎಂದು ಅರ್ಜಿ ಸಲ್ಲಿಸುವ ಮೂಲಕ ವಿವಾದ ಪ್ರಾರಂಭವಾಯಿತು.

ಮುಖಪುಟದಲ್ಲಿ, ತಂಬಾಕು ಬಳಕೆಯ ಕುರತ ಎಚ್ಚರಿಕೆಗಳ ಅನುಪಸ್ಥಿತಿಯು ಆ ಉತ್ಪನ್ನಗಳ ಪರೋಕ್ಷ ಜಾಹೀರಾತಿಗೆ ಸಮನಾಗಿರುತ್ತದೆ. ಆದ್ದರಿಂದ, ಧೂಮಪಾನ ಸಂಬಂಧಿತ ಪ್ರಚಾರವನ್ನು ತಡೆಯಲು ಉದ್ದೇಶಿಸಲಾದ ಶಾಸನಬದ್ಧ ಚೌಕಟ್ಟನ್ನು ಉಲ್ಲಂಘಿಸುತ್ತದೆ ಎಂದು ಅವರು ವಾದಿಸಿದರು.

ಅರ್ಜಿದಾರರು, ‘ಪೆಂಗ್ವಿನ್ ಇಂಡಿಯಾ’ದಿಂದ ಹಿಂಬದಿಯ ಮುಖಪುಟದಲ್ಲಿ ಮುದ್ರಿಸಲಾದ ಹಕ್ಕು ನಿರಾಕರಣೆಯ ಉಲ್ಲೇಖ ಸಂಬಂಧಿತ ಸಂಗತಿಗಳನ್ನು ನಿರ್ಲಕ್ಷ್ಯಿಸಿದ್ದರಿಂದ, ಸಾರ್ವಜನಿಕ ಹಿತಾಸಕ್ತಿಗಿಂತ ವೈಯಕ್ತಿಕ ಪ್ರಚಾರದಿಂದ ಈ ಅರ್ಜಿಯು ಪ್ರೇರಿತವಾಗಿದೆ ಎಂದು ಗಮನಿಸಿ, ಅಕ್ಟೋಬರ್ 13 ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತು.

ಅರುಂತಿ ರಾಯ್ ಅವರು ಪ್ರಸಿದ್ಧ ಸಾಹಿತಿಯಾಗಿದ್ದು, ಅವರ ಬರವಣಿಗೆ ಅಥವಾ ಪ್ರಕಾಶಕರ ನಡವಳಿಕೆಯು ಧೂಮಪಾನವನ್ನು ಪ್ರೋತ್ಸಾಹಿಸುವ ಯಾವುದೇ ಪ್ರಯತ್ನವನ್ನು ಸೂಚಿಸುವುದಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಸಾರ್ವಜನಿಕರ ಮೇಲೆ ಪ್ರಭಾವ ಬೀರುವ ಅಥವಾ ಹೊಸ ಧೂಮಪಾನಿಗಳನ್ನು ಆಕರ್ಷಿಸುವ ದೊಡ್ಡ ಪ್ರಮಾಣದ ಹೊರಾಂಗಣ ಜಾಹೀರಾತುಗಳ ಮೂಲಕ ಪುಸ್ತಕವನ್ನು ಮಾರಾಟ ಮಾಡಲಾಗುತ್ತಿಲ್ಲ ಎಂದು ಒತ್ತಿ ಹೇಳಿದೆ. ಏಕೆಂದರೆ, ಪುಸ್ತಕದ ಮುಖಪುಟವನ್ನು ಅದರ ವಿಷಯ ಮತ್ತು ಲೇಖಕರ ಖ್ಯಾತಿಯ ಆಧಾರದ ಮೇಲೆ ಖರೀದಿಸಲು ಆಯ್ಕೆ ಮಾಡಿದವರು ಮಾತ್ರ ವೀಕ್ಷಿಸಬಹುದು ಎಂದು ಹೇಳಿದೆ.

ಪಿಐಎಲ್‌ನಲ್ಲಿ ಯಾವುದೇ ಸತ್ವವಿಲ್ಲ, ಹೈಕೋರ್ಟ್ ಅದನ್ನು ವಜಾಗೊಳಿಸುವಲ್ಲಿ ಸರಿಯಾಗಿ ಕಾರ್ಯನಿರ್ವಹಿಸಿದೆ ಎಂದು ತೀರ್ಮಾನಿಸಿದ ಸುಪ್ರೀಂ ಕೋರ್ಟ್, ನಾವು ಮಧ್ಯಪ್ರವೇಶಿಸಲು ಯಾವುದೇ ಕಾರಣವಿಲ್ಲ ಎಂದು ಕಂಡುಕೊಂಡಿತು. ಹೈಕೋರ್ಟ್‌ನ ಆದೇಶವನ್ನು ಉಳಿಸಿಕೊಳ್ಳಲು ಅವಕಾಶ ಮಾಡಿಕೊಟ್ಟಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...