Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...