Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...