Homeಮುಖಪುಟರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

- Advertisement -
- Advertisement -

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ. 

ಕಿರುಕುಳದಿಂದ ಪಲಾಯನ ಮಾಡಿದ ರೋಹಿಂಗ್ಯಾಗಳನ್ನು ನುಸುಳುಕೋರರೊಂದಿಗೆ ಸಮೀಕರಿಸುವುದು ಅನುಚಿತ ಎಂದು ಹೇಳಿರುವ ಅವರು ವ್ಯಕ್ತಿಯ ಮೂಲವನ್ನು ಲೆಕ್ಕಿಸದೆ ಎಲ್ಲರಿಗೂ ಘನತೆ ಮತ್ತು ನ್ಯಾಯದ ಆಧಾರದ ಮೇಲೆ ಸಾಂವಿಧಾನಿಕ ನೈತಿಕತೆಗೆ ಬದ್ಧತೆಯನ್ನು ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ. 

ಕಸ್ಟಡಿಯಲ್ಲಿದ್ದ ಐವರು ರೋಹಿಂಗ್ಯಾಗಳು ದೆಹಲಿಯಿಂದ ನಾಪತ್ತೆಯಾಗಿದ್ದಾರೆ ಎಂಬ ಆರೋಪದ ಕುರಿತ ಅರ್ಜಿಯ ವಿಚಾರಣೆ ನಡೆಸಿದ್ದ ಸಿಜೆಐ ಸೂರ್ಯಕಾಂತ್ (ಡಿ.2, 2025 ರಂದು) ಅವರು, ‘ನಿರಾಶ್ರಿತರಿಗೆ ಕಾನೂನುಬದ್ಧ ಸ್ಥಾನಮಾನವಿಲ್ಲದಿದ್ದರೆ ಆ ವ್ಯಕ್ತಿಯನ್ನು ಇಲ್ಲಿಯೇ ಇರಿಸಿಕೊಳ್ಳಲು ನಮಗೆ ಬಾಧ್ಯತೆ ಇದೆಯೇ?’ ಎಂದು ಪ್ರಶ್ನಿಸಿದ್ದರು. ಈ ವೇಳೆ ಭಾರತದಲ್ಲಿ ರೋಹಿಂಗ್ಯಾ ವಲಸಿಗರನ್ನು ನಿಭಾಯಿಸುವ ವಿಧಾನದ ಸುತ್ತಲಿನ ಸಾಂವಿಧಾನಿಕ ಮತ್ತು ಮಾನವೀಯ ಉದ್ವಿಗ್ನತೆಯ ತೀಕ್ಷ್ಣ ಚರ್ಚೆಯಲ್ಲಿ, “ಸರ್ಕಾರವು ರೋಹಿಂಗ್ಯಾಗಳನ್ನು ನಿರಾಶ್ರಿತರು ಎಂದು ಘೋಷಿಸಿದೆಯೇ? ಅಕ್ರಮವಾಗಿ ಗಡಿ ದಾಟಿದ ವ್ಯಕ್ತಿಗಳು ಭಾರತೀಯ ಕಾನೂನಿನಡಿಯಲ್ಲಿ ಸಂಪೂರ್ಣ ಕಾರ್ಯವಿಧಾನದ ರಕ್ಷಣೆಯನ್ನು ಕೋರಬಹುದೇ” ಎಂದು ಪ್ರಶ್ನಿಸಿದ್ದರು.

“ರೋಹಿಂಗ್ಯಾಗಳು ಭಾರತದಲ್ಲಿ ಉಳಿಯಲು ಕಾನೂನು ಸ್ಥಾನಮಾನವಿಲ್ಲದಿದ್ದರೆ, ಅವರು ಅತಿಕ್ರಮಣಕಾರರಾಗಿದ್ದರೆ, ನಮಗೆ ಉತ್ತರ ಭಾರತದ ಭಾಗದಲ್ಲಿ ಬಹಳ ಸೂಕ್ಷ್ಮ ಗಡಿ ಇದೆ. ಯಾರಾದರೂ ಅತಿಕ್ರಮಣಕಾರ ಬಂದರೆ, ‘ನಿಮಗೆ ಎಲ್ಲಾ ಸೌಲಭ್ಯಗಳನ್ನು ನೀಡಲು ನಾವು ಬಯಸುತ್ತೇವೆ’ ಎಂದು ಹೇಳುವ ಮೂಲಕ ನಾವು ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುತ್ತೇವೆಯೇ?” ಎಂದು ಕೇಳಿದ್ದಲ್ಲದೆ, “ಅವರನ್ನು ವಾಪಸ್ ಕಳುಹಿಸುವುದರಲ್ಲಿ ಸಮಸ್ಯೆ ಏನು?” ಎಂದು ಪ್ರಶ್ನಿಸಿದ್ದರು. ನ್ಯಾಯಮೂರ್ತಿಗಳ ಈ ನಡೆಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು, ವ್ಯಕ್ತಿಗತ ಘನತೆ ಮತ್ತು ನೈತಿಕತೆಗೆ ತಮ್ಮ ಬದ್ಧತೆ ಪುನರುಚ್ಚರಿಸುವಂತೆ ಸಿಜೆಐ ಅವರನ್ನು ಒತ್ತಾಯಿಸಿದ್ದಾರೆ.

ಪತ್ರದಲ್ಲಿ, ಸಿಜೆಐ ಸೂರ್ಯಕಾಂತ್ ಅವರು ಮಾಡಿರುವ ಆರೋಪ ಮತ್ತು ನೀಡಿರುವ ಹೇಳಿಕೆಗಳು ರೋಹಿಂಗ್ಯಾ ಸಮುದಾಯದ ಹಕ್ಕುಗಳಿಗೆ ವಿರೋಧವಾಗಿದೆ. ಇದು ನಮ್ಮಲ್ಲಿ ಅತ್ಯಂತ ದುರ್ಬಲರ ಹಕ್ಕುಗಳನ್ನು ರಕ್ಷಿಸುವ ವಿಷಯದಲ್ಲಿ ನ್ಯಾಯಾಂಗದ ಮೇಲಿನ ಜನತೆಯ ನಂಬಿಕೆ ಮತ್ತು ವಿಶ್ವಾಸಕ್ಕೆ ಧಕ್ಕೆ ತರುತ್ತದೆ ಎಂಬ ಆತಂಕವಿದೆ ಎಂದಿದ್ದಾರೆ. 

ಪತ್ರದಲ್ಲಿ, “ನ್ಯಾಯಾಲಯದಲ್ಲಿ ನೀಡುವ ಹೇಳಿಕೆ ಮತ್ತು ನ್ಯಾಯಾಲಯದ ತೀರ್ಪುಗಳಲ್ಲಿ ಜನರ ‘ಮೂಲ, ಜಾತಿ, ಧರ್ಮ ಯಾವುದೇ ಭೇದವಿಲ್ಲದೇ’ ಎಲ್ಲರಿಗೂ ಮಾನವ ಗೌರವ ಮತ್ತು ನ್ಯಾಯಾಧಾರಿತ ಸಾಂವಿಧಾನಿಕ ನೈತಿಕತೆಗೆ ತಮ್ಮ ಬದ್ಧತೆಯನ್ನು ಪುನಶ್ಚೇತನಗೊಳಿಸಿ, ಅದನ್ನು ಪುನರುಚ್ಚರಿಸಿ ಎಂದು ಕೋರಿಕೊಂಡಿದ್ದಾರೆ. ಜೊತೆಗೆ, “ಸುಪ್ರೀಂ ಕೋರ್ಟ್‌ನ ಮಹತ್ವ ಮತ್ತು ನಿಮ್ಮ ಪದವಿಯ ಮಹತ್ವವನ್ನು ಕೇವಲ ತೀರ್ಪುಗಳ ಸಂಖ್ಯೆಯಿಂದ ಅಥವಾ ಆಡಳಿತಾತ್ಮಕ ಕ್ರಮಗಳಿಂದ ಅಳೆಯಲಾಗುವುದಿಲ್ಲ; ಬದಲಿಗೆ ಆ ತೀರ್ಪುಗಳನ್ನು ನೀಡುವ ಮತ್ತು ಪರಿಗಣಿಸುವ ಮಾನವೀಯತೆಯಿಂದ ಅಳೆಯಲಾಗುತ್ತದೆ” ಎಂದಿದ್ದಾರೆ. 

ರೋಹಿಂಗ್ಯಾ ಜನರನ್ನು ನುಸುಳುಕೋರರು ಎಂದು ಕರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, “ನ್ಯಾಯಾಂಗದ ಅಧಿಕಾರವು ಸಾಂವಿಧಾನಿಕ ನೈತಿಕತೆ, ಕರುಣೆ ಮತ್ತು ಮಾನವ ಗೌರವದ ರಕ್ಷಣೆಯ ತತ್ವಗಳ ಮೇಲೆ ನಿರ್ಮಿತವಾಗಿದೆ. ಹಿಂಸೆ ಮತ್ತು ಆತಂಕದಿಂದ ಬೇರೆ ದೇಶಕ್ಕೆ ಓಡಿಬಂದವರನ್ನು ಅವರ ಗೌರವಕ್ಕೆ ವಿರೋಧವಾಗಿ ಶತ್ರುತ್ವದ ಭಾಷೆಯಲ್ಲಿ ತಿರಸ್ಕರಿಸಿದಾಗ, ಅದು ನಮ್ಮ ಸಂವಿಧಾನದ ಮೂಲಭೂತ ಮೌಲ್ಯಗಳನ್ನು ದುರ್ಬಲಗೊಳಿಸುತ್ತದೆ. ದುರ್ಬಲರಿಗೆ ಆಶ್ರಯವಾಗಿರುವ ನ್ಯಾಯಾಲಯಗಳ ಮೇಲಿನ ಜನತೆಯ ನಂಬಿಕೆಯನ್ನು ಕುಂದಿಸುತ್ತದೆ. ಅಂತಹ ಹೇಳಿಕೆಗಳು ಪೀಠದ ಪೂರ್ವಾಗ್ರಹದ ಸಂದೇಹಕ್ಕೆ ಸಾಕಷ್ಟು ಆಧಾರವನ್ನು ಒದಗಿಸುತ್ತವೆ” ಎಂದಿದ್ದಾರೆ. ಈ ಮುಕ್ತ ಪತ್ರದಲ್ಲಿ 85ಕ್ಕೂ ಹೆಚ್ಚು ಹಿರಿಯ ನ್ಯಾಯವಾದಿಗಳು,  ವಕೀಲರು ಮತ್ತು ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು ತಮ್ಮ ಸಹಿ ಮಾಡಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...