Homeಮುಖಪುಟಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

- Advertisement -
- Advertisement -

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು ಸಕಾಲವಾಗಿದ್ದು, ರಾಜ್ಯ ಸರ್ಕಾರವು ಅಖಂಡ ಕರ್ನಾಟಕದ ಭಾಗವಾಗಿದ್ದ ಎಲ್ಲ ಪ್ರದೇಶಗಳೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದುವಲ್ಲಿ ವಿಶೇಷ ಕ್ರಿಯಾ ಯೋಜನೆಯನ್ನೇ ರೂಪಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಕಾಸರಗೋಡಿನಿಂದ ಬೆಂಗಳೂರಿಗೆ ಆಗಮಿಸಿದ್ದ ಗಣ್ಯರ ನಿಯೋಗವನ್ನು ಭೇಟಿ ಮಾಡಿ ಮನವಿ ಸ್ವೀಕರಿಸಿದ ಅವರು, ಕರ್ನಾಟಕ ರಾಜ್ಯವು ಇದೇ ಮೊದಲ ಬಾರಿಗೆ ಗಡಿ ಭಾಗಗಳ ಸಮಸ್ಯೆಗಳನ್ನು ಅವಲೋಕಿಸಿ ಶಾಶ್ವತ ಪರಿಹಾರವನ್ನು ಕಲ್ಪಿಸುವ ಸಂಬಂಧ ಗಡಿ ಉಸ್ತುವಾರಿ ಸಚಿವರನ್ನೇ ನೇಮಿಸಿದ್ದು, ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿರಿಸಿದೆ ಎಂದರು. ಗಡಿ ಉಸ್ತುವಾರಿ ಸಚಿವರು ಕೇವಲ ಗಡಿ ಭಾಗಗಳನ್ನು ಮಾತ್ರ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಗ್ರಹಿಸದೆ ಕಾಸರಗೋಡು, ಸಾಂಗ್ಲಿ, ಸೊಲ್ಲಾಪುರದಂತಹ ಅಚ್ಚ ಕನ್ನಡ ಪ್ರದೇಶಗಳಲ್ಲಿ ವಾಸಿಸುವ ಕನ್ನಡಿಗರ ಸಮಗ್ರ ಹಿತಕ್ಕೆ ಮುಂದಾದಲ್ಲಿ ಅಖಂಡ ಕರ್ನಾಟಕ ತನ್ನ ಸಾಂಸ್ಕೃತಿಕ ಅಸ್ತಿತ್ವವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ ಎಂದ ಅವರು, ರಾಜ್ಯ ಸರ್ಕಾರವು ಇದನ್ನು ಕೇವಲ ಪರಿಹಾರ ಕಾಣದ ಗಡಿ ಸಮಸ್ಯೆ ಎಂದು ಭಾವಿಸಬಾರದೆಂದರು.

ಕಾಸರಗೋಡಿನ ಕನ್ನಡಿಗರು ಕನ್ನಡಕ್ಕೆ ಮತ್ತು ಕರ್ನಾಟಕ ಸಂಸ್ಕೃತಿಗೆ ದುಡಿದ ಗಡಿನಾಡು ಪ್ರತಿಭೆಗಳಿಗೆ ಸೂಕ್ತ ಪ್ರಶಸ್ತಿ ನೀಡಬೇಕು, ಕಾಸರಗೋಡಿನ ಸಾಂಸ್ಕೃತಿಕ ಸ್ಮಾರಕಗಳ ನಿರ್ಮಾಣ ಮತ್ತು ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು, ಕಾಸರಗೋಡಿನಲ್ಲಿ ಕನ್ನಡ ಚಲನಚಿತ್ರಗಳು ನಿಯತವಾಗಿ ಪ್ರದರ್ಶನವಾಗಬೇಕು, ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳ ಅಭಿವೃದ್ಧಿಗಾಗಿ ಕರ್ನಾಟಕ ಸರ್ಕಾರ ಅನುದಾನ ನೀಡಬೇಕು, ಕಾಸರಗೋಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳನ್ನು ಕರ್ನಾಟಕದ ವಿದ್ಯಾರ್ಥಿಗಳಂತೆಯೇ ಸಮಾನವಾಗಿ ಪರಿಗಣಿಸಬೇಕೆಂಬ ಹಲವು ಅಂಶಗಳುಳ್ಳ ಮನವಿಯನ್ನು ಕಾಸರಗೋಡಿನ ನಿಯೋಗವು ತಮಗೆ ಸಲ್ಲಿಸಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ, ಗಡಿ ಸಚಿವರಿಗೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಗೆ ಸಲ್ಲಿಸಿ ಮುಂಬರುವ ಆಯವ್ಯಯದಲ್ಲಿ ಹೆಚ್ಚಿನ ಹಣ ಮೀಸಲಿಡಲು ಆಗ್ರಹಿಸಲಾಗುವುದು ಎಂದು ಬಿಳಿಮಲೆ ಭರವಸೆ ನೀಡಿದರು. 

ನಂತರ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವರಾದ ಶಿವರಾಜ್ ತಂಗಡಗಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಮತ್ತು  ಮಾನ್ಯ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳನ್ನು ಬಿಳಿಮಲೆಯವರ ನೇತೃತ್ವದಲ್ಲಿ ಭೇಟಿ ಮಾಡಿದ ನಿಯೋಗ ಕಾಸರಗೋಡಿನ ಕನ್ನಡಿಗರ ಬೇಡಿಕೆಗಳನ್ನು ಪರಿಗಣಿಸಲು ಮನವಿ ಮಾಡಿತು.

ನಿಯೋಗದಲ್ಲಿ ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸೋಮಣ್ಣ ಬೇವಿನಮರದ, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ  ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗೌರವ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ, ಕಾಸರಗೋಡಿನ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ನಿವೃತ್ತ ಪ್ರಾಧ್ಯಾಪಕಿ ಡಾ. ಪ್ರಮೀಳ ಮಾಧವ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಡಾ. ಸಂತೋಷ ಹಾನಗಲ್ಲ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ರದ್ದುಗೊಳಿಸಿದ ಇಂಡಿಗೋ

ಶುಕ್ರವಾರ ದೆಹಲಿ ವಿಮಾನ ನಿಲ್ದಾಣದಿಂದ ಎಲ್ಲಾ ದೇಶೀಯ ವಿಮಾನಗಳನ್ನು ಇಂಡಿಗೋ ರದ್ದುಗೊಳಿಸಿದೆ. ಶುಕ್ರವಾರ ಹಲವಾರು ವಿಮಾನ ನಿಲ್ದಾಣಗಳಲ್ಲಿ 400 ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿದುಬಂದಿದೆ.  ಶುಕ್ರವಾರ (ಡಿಸೆಂಬರ್ 5, 2025) ಮಧ್ಯರಾತ್ರಿಯವರೆಗೆ ಎಲ್ಲಾ...