Homeಕರ್ನಾಟಕ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ 'ಹೋರಾಟ ಸಮಿತಿ'

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

- Advertisement -
- Advertisement -

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ.

​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು ರೈತರು ಆತಂಕಗೊಂಡಿದ್ದರು. ಮುಖ್ಯಮಂತ್ರಿಗಳ ಘೋಷಣೆಗೆ ವಿರುದ್ಧವಾಗಿ, 13 ಹಳ್ಳಿಗಳ ಪೈಕಿ ಎರಡು ಹಳ್ಳಿಗಳ ಭೂಮಿಗೆ ಬೆಲೆ ನಿಗದಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಅವರ ಲೆಕ್ಕಾಚಾರ ಫಲ ಕೊಡದಿದ್ದಾಗ, ಶಾಶ್ವತ ವಿಶೇಷ ಕೃಷಿ ವಲಯ ಘೋಷಣೆಯ ವದಂತಿಯನ್ನೂ ತೇಲಿಬಿಡಲಾಗಿತ್ತು.

​ಈ ಎಲ್ಲ ಬೆಳವಣಿಗೆಗಳ ನಡುವೆಯೇ, ನವೆಂಬರ್ 26 ರ ಬೃಹತ್ ‘ಬೆಂಗಳೂರು ಚಲೋ’ ಸಂದರ್ಭದಲ್ಲಿ, ಸಂಯುಕ್ತ ಹೋರಾಟದ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಮಾತುಕತೆಯಂತೆ, ಡಿ. 4 ರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿನೋಟಿಫಿಕೇಶನ್‌ಗೆ (ಭೂಸ್ವಾಧೀನ ಕೈಬಿಡಲು) ಸಮ್ಮತಿ ಸೂಚಿಸಿದೆ.

ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಸುದೀರ್ಘ ಹೋರಾಟದ ದಾರಿ ಸುಲಭವಾಗಿರಲಿಲ್ಲ. ಹೆಜ್ಜೆ ಹೆಜ್ಜೆಗೂ ಎದುರಾದ ತಿರುವುಗಳು, ಸರ್ಕಾರಗಳ ನಿರ್ಲಕ್ಷ್ಯ, ಕುತಂತ್ರಗಳು, ವಿರೋಧಿಗಳ ಬೆದರಿಕೆಗಳನ್ನೆಲ್ಲಾ ಮೀರಿ ಕೊನೆಗೂ ರೈತರು ಗೆದ್ದಿದ್ದಾರೆ.

ರೈತರ ಜೊತೆ ನಿಂತ ಜನಸಮುದಾಯಗಳಿಗೆ ಧನ್ಯವಾದ ತಿಳಿಸಿದ ಹೋರಾಟ ಸಮಿತಿ

​ರೈತರ ಹೋರಾಟದ ಕೊನೆಯ ದಿನಗಳಲ್ಲಿ ಇಡೀ ರಾಜ್ಯದ ಜನತೆ ದೇವನಹಳ್ಳಿ ರೈತರ ಜೊತೆಗೆ ನಿಂತರು. ದೇವನಹಳ್ಳಿ ಚಲೋ ನಂತರ, ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಕಲಾವಿದರು, ಮಠಾಧೀಶರು, ಪ್ರಜ್ಞಾವಂತ ನಾಗರಿಕರು ಒಟ್ಟಾಗಿ ಬಂದು, ರೈತರ ಉಳಿವಿಗಾಗಿ ಜೊತೆ ನಿಂತಿದ್ದನ್ನು ಇಲ್ಲಿ ಸ್ಮರಿಸುತ್ತೇವೆ ಎಂದು ರೈತರು ಅಭಿಪ್ರಾಯಪಟ್ಟರು.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್‌, “ಭೂಸ್ವಾಧೀನ ಕೈಬಿಟ್ಟಿರುವ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು. ಈ ರೈತಪರ ನಿಲುವನ್ನು ಸಮಿತಿಯು ಸ್ವಾಗತಿಸುತ್ತದೆ. ಈ ಗೆಲುವಿನ ಹಿಂದೆ ಒಟ್ಟಾಗಿ ಹಗಲಿರುಳೆನ್ನದೆ ದುಡಿದ ರೈತರ ಶ್ರಮವಿದೆ. ಜೊತೆಗೆ ವಿವಿಧ ಜನಪರ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ನಟರು ಸೇರಿದಂತೆ ಎಲ್ಲ ಜನಸಮುದಾಯಗಳ ಬೆಂಬಲ ದೊರೆತದ್ದು ಮತ್ತಷ್ಟು ಗೆಲುವಾಗಲು ಕಾರಣವಾಗಿದೆ. ಆದ್ದರಿಂದ ಅವರೆಲ್ಲರಿಗೂ ನಮ್ಮ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಇಲ್ಲಿ ಮಾತ್ರವಲ್ಲ, ತಮ್ಮ ಭೂಮಿಯನ್ನು ಪ್ರೀತಿಸುವ, ಭೂತಾಯಿಯನ್ನು ನಂಬಿ ಬದುಕಲು ಬಯಸುವ ಎಲ್ಲರಿಗೂ ಭೂಮಿ ಸಿಗಬೇಕು. ಈ ಎಲ್ಲ ಜನಸಮುದಾಯಗಳ ಜೊತೆ ನಾವಿರುತ್ತೇವೆ” ಎಂದರು.

​ಮುಖಂಡರಾದ ಮಾರೇಗೌಡ ಮಾತನಾಡಿ, “ನಮ್ಮ ಭೂಮಿ ಉಳಿದಿರುವ ಈ ಸಂತೋಷವನ್ನು, ನಮಗೆ ಬೆಂಬಲಿಸಿದ ಎಲ್ಲರಿಗೂ, ಜೊತೆಗೆ ನಿಂತ ಸಂಘಟನೆಗಳು, ಹೋರಾಟದ ಸಹಚರರು ಹಾಗೂ ನಾಡಿನ ಜನರೊಂದಿಗೆ ಹಂಚಿಕೊಳ್ಳಲು ಮತ್ತು ಅವರನ್ನು ಅಭಿನಂದಿಸಲು ನಾವು ಬಯಸುತ್ತೇವೆ. ಇದರ ಜೊತೆಗೆ ಈ ರೈತಪರ ನಿರ್ಣಯಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು.

​ಪತ್ರಿಕಾಗೋಷ್ಠಿಯಲ್ಲಿ, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ, ವೆಂಕಟರಮಣಪ್ಪ, ಪಿಳ್ಳಣ್ಣ, ಮುನಿಕೃಷ್ಣಪ್ಪ, ನಂದೀಶ್, ಕೃಷ್ಣಪ್ಪ, ಮರಿಯಣ್ಣ, ಮೋಹನ್, ವೆಂಕಟೇಶ್, ಪಿಳ್ಳರಾಜು, ಗೋಪಿನಾಥ್, ಲಗುಮಣ್ಣ, ಮಂಜುನಾಥ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...

ವಿಧಾನಸಭೆ ಭಾಷಣದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸುವ ಸಾಲುಗಳು ಕೈಬಿಟ್ಟ ಕೇರಳ ರಾಜ್ಯಪಾಲ : ಸಿಎಂ ಪಿಣರಾಯಿ ವಿಜಯನ್ ಆರೋಪ

ತಮಿಳುನಾಡಿನ ಬಳಿಕ ಕೇರಳ ವಿಧಾನಸಭೆಯಲ್ಲೂ ಸರ್ಕಾರ ಮತ್ತು ರಾಜ್ಯಪಾಲರ ನಡುವೆ ಮಂಗಳವಾರ (ಜ.20) ಜಟಾಪಟಿ ನಡೆದಿದೆ. ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣದಲ್ಲಿನ ಕೇಂದ್ರ ಸರ್ಕಾರವನ್ನು ಟೀಕಿಸುವ ಕೆಲ ಸಾಲುಗಳನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್...

ಶಬರಿಮಲೆ ಚಿನ್ನ ಕಳವು ಪ್ರಕರಣ: ಕೇರಳ, ಕರ್ನಾಟಕ, ತಮಿಳುನಾಡಿನ 21 ಸ್ಥಳಗಳಲ್ಲಿ ಇಡಿ ದಾಳಿ

ಶಬರಿಮಲೆ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಮಂಗಳವಾರ ಮೂರು ರಾಜ್ಯಗಳಲ್ಲಿ ಶೋಧ ನಡೆಸಿದೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೊ ಪ್ರಕರಣ: ‘ಯಾವುದೇ ಇಲಾಖೆಯೂ ಇಂತಹ ಘಟನೆಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ’: ಡಾ. ಜಿ. ಪರಮೇಶ್ವರ್

ಬೆಂಗಳೂರು: ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವಾಗಲೇ ಮಹಿಳೆಯೊಂದಿಗೆ ಅಸಭ್ಯ ವರ್ತನೆ ನಡೆಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ, ಪಕ್ಷ ಮುನ್ನಡೆಸುವ ಜವಾಬ್ದಾರಿ ವಹಿಸಿಕೊಂಡ ಅತ್ಯಂತ ಕಿರಿಯ ನಾಯಕ 

ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರೀಯ ಅಧ್ಯಕ್ಷರಾಗಿ 45 ವರ್ಷದ ನಿತಿನ್ ನಬಿನ್ 2026 ಜನವರಿ 20ರ, ಮಂಗಳವಾರ ಔಪಚಾರಿಕವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಸ್ತುತ ಕೇಂದ್ರ ಸಚಿವರಾಗಿರುವ ಜೆ.ಪಿ. ನಡ್ಡಾ ಅವರ ಸ್ಥಾನದಲ್ಲಿ...