Homeಕರ್ನಾಟಕ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ 'ಹೋರಾಟ ಸಮಿತಿ'

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

- Advertisement -
- Advertisement -

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ.

​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು ರೈತರು ಆತಂಕಗೊಂಡಿದ್ದರು. ಮುಖ್ಯಮಂತ್ರಿಗಳ ಘೋಷಣೆಗೆ ವಿರುದ್ಧವಾಗಿ, 13 ಹಳ್ಳಿಗಳ ಪೈಕಿ ಎರಡು ಹಳ್ಳಿಗಳ ಭೂಮಿಗೆ ಬೆಲೆ ನಿಗದಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಅವರ ಲೆಕ್ಕಾಚಾರ ಫಲ ಕೊಡದಿದ್ದಾಗ, ಶಾಶ್ವತ ವಿಶೇಷ ಕೃಷಿ ವಲಯ ಘೋಷಣೆಯ ವದಂತಿಯನ್ನೂ ತೇಲಿಬಿಡಲಾಗಿತ್ತು.

​ಈ ಎಲ್ಲ ಬೆಳವಣಿಗೆಗಳ ನಡುವೆಯೇ, ನವೆಂಬರ್ 26 ರ ಬೃಹತ್ ‘ಬೆಂಗಳೂರು ಚಲೋ’ ಸಂದರ್ಭದಲ್ಲಿ, ಸಂಯುಕ್ತ ಹೋರಾಟದ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಮಾತುಕತೆಯಂತೆ, ಡಿ. 4 ರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿನೋಟಿಫಿಕೇಶನ್‌ಗೆ (ಭೂಸ್ವಾಧೀನ ಕೈಬಿಡಲು) ಸಮ್ಮತಿ ಸೂಚಿಸಿದೆ.

ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಸುದೀರ್ಘ ಹೋರಾಟದ ದಾರಿ ಸುಲಭವಾಗಿರಲಿಲ್ಲ. ಹೆಜ್ಜೆ ಹೆಜ್ಜೆಗೂ ಎದುರಾದ ತಿರುವುಗಳು, ಸರ್ಕಾರಗಳ ನಿರ್ಲಕ್ಷ್ಯ, ಕುತಂತ್ರಗಳು, ವಿರೋಧಿಗಳ ಬೆದರಿಕೆಗಳನ್ನೆಲ್ಲಾ ಮೀರಿ ಕೊನೆಗೂ ರೈತರು ಗೆದ್ದಿದ್ದಾರೆ.

ರೈತರ ಜೊತೆ ನಿಂತ ಜನಸಮುದಾಯಗಳಿಗೆ ಧನ್ಯವಾದ ತಿಳಿಸಿದ ಹೋರಾಟ ಸಮಿತಿ

​ರೈತರ ಹೋರಾಟದ ಕೊನೆಯ ದಿನಗಳಲ್ಲಿ ಇಡೀ ರಾಜ್ಯದ ಜನತೆ ದೇವನಹಳ್ಳಿ ರೈತರ ಜೊತೆಗೆ ನಿಂತರು. ದೇವನಹಳ್ಳಿ ಚಲೋ ನಂತರ, ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಕಲಾವಿದರು, ಮಠಾಧೀಶರು, ಪ್ರಜ್ಞಾವಂತ ನಾಗರಿಕರು ಒಟ್ಟಾಗಿ ಬಂದು, ರೈತರ ಉಳಿವಿಗಾಗಿ ಜೊತೆ ನಿಂತಿದ್ದನ್ನು ಇಲ್ಲಿ ಸ್ಮರಿಸುತ್ತೇವೆ ಎಂದು ರೈತರು ಅಭಿಪ್ರಾಯಪಟ್ಟರು.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್‌, “ಭೂಸ್ವಾಧೀನ ಕೈಬಿಟ್ಟಿರುವ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು. ಈ ರೈತಪರ ನಿಲುವನ್ನು ಸಮಿತಿಯು ಸ್ವಾಗತಿಸುತ್ತದೆ. ಈ ಗೆಲುವಿನ ಹಿಂದೆ ಒಟ್ಟಾಗಿ ಹಗಲಿರುಳೆನ್ನದೆ ದುಡಿದ ರೈತರ ಶ್ರಮವಿದೆ. ಜೊತೆಗೆ ವಿವಿಧ ಜನಪರ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ನಟರು ಸೇರಿದಂತೆ ಎಲ್ಲ ಜನಸಮುದಾಯಗಳ ಬೆಂಬಲ ದೊರೆತದ್ದು ಮತ್ತಷ್ಟು ಗೆಲುವಾಗಲು ಕಾರಣವಾಗಿದೆ. ಆದ್ದರಿಂದ ಅವರೆಲ್ಲರಿಗೂ ನಮ್ಮ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಇಲ್ಲಿ ಮಾತ್ರವಲ್ಲ, ತಮ್ಮ ಭೂಮಿಯನ್ನು ಪ್ರೀತಿಸುವ, ಭೂತಾಯಿಯನ್ನು ನಂಬಿ ಬದುಕಲು ಬಯಸುವ ಎಲ್ಲರಿಗೂ ಭೂಮಿ ಸಿಗಬೇಕು. ಈ ಎಲ್ಲ ಜನಸಮುದಾಯಗಳ ಜೊತೆ ನಾವಿರುತ್ತೇವೆ” ಎಂದರು.

​ಮುಖಂಡರಾದ ಮಾರೇಗೌಡ ಮಾತನಾಡಿ, “ನಮ್ಮ ಭೂಮಿ ಉಳಿದಿರುವ ಈ ಸಂತೋಷವನ್ನು, ನಮಗೆ ಬೆಂಬಲಿಸಿದ ಎಲ್ಲರಿಗೂ, ಜೊತೆಗೆ ನಿಂತ ಸಂಘಟನೆಗಳು, ಹೋರಾಟದ ಸಹಚರರು ಹಾಗೂ ನಾಡಿನ ಜನರೊಂದಿಗೆ ಹಂಚಿಕೊಳ್ಳಲು ಮತ್ತು ಅವರನ್ನು ಅಭಿನಂದಿಸಲು ನಾವು ಬಯಸುತ್ತೇವೆ. ಇದರ ಜೊತೆಗೆ ಈ ರೈತಪರ ನಿರ್ಣಯಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು.

​ಪತ್ರಿಕಾಗೋಷ್ಠಿಯಲ್ಲಿ, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ, ವೆಂಕಟರಮಣಪ್ಪ, ಪಿಳ್ಳಣ್ಣ, ಮುನಿಕೃಷ್ಣಪ್ಪ, ನಂದೀಶ್, ಕೃಷ್ಣಪ್ಪ, ಮರಿಯಣ್ಣ, ಮೋಹನ್, ವೆಂಕಟೇಶ್, ಪಿಳ್ಳರಾಜು, ಗೋಪಿನಾಥ್, ಲಗುಮಣ್ಣ, ಮಂಜುನಾಥ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...