Homeಕರ್ನಾಟಕ​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ 'ಹೋರಾಟ ಸಮಿತಿ'

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

- Advertisement -
- Advertisement -

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ ಮತ್ತು ಒಗ್ಗಟ್ಟಿನ ಫಲವಾಗಿ, ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಹೋರಾಟಕ್ಕೆ ಅಂತಿಮ ಜಯ ಲಭಿಸಿದೆ.

​ಸಂಪೂರ್ಣ ಭೂಸ್ವಾಧೀನ ಪ್ರಕ್ರಿಯೆಯನ್ನೇ ಕೈಬಿಡುವವುದಾಗಿ ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ಘೋಷಣೆ ಮಾಡಿದರು. ಆದರೆ, ಅದರ ನಂತರವೂ ಕೆಲವು ನಕಾರಾತ್ಮಕ ಬೆಳವಣಿಗೆಗಳು ನಡೆದು ರೈತರು ಆತಂಕಗೊಂಡಿದ್ದರು. ಮುಖ್ಯಮಂತ್ರಿಗಳ ಘೋಷಣೆಗೆ ವಿರುದ್ಧವಾಗಿ, 13 ಹಳ್ಳಿಗಳ ಪೈಕಿ ಎರಡು ಹಳ್ಳಿಗಳ ಭೂಮಿಗೆ ಬೆಲೆ ನಿಗದಿ ಸಭೆಯನ್ನು ಕರೆಯಲಾಗಿತ್ತು. ಈ ಸಭೆಗೆ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಅವರ ಲೆಕ್ಕಾಚಾರ ಫಲ ಕೊಡದಿದ್ದಾಗ, ಶಾಶ್ವತ ವಿಶೇಷ ಕೃಷಿ ವಲಯ ಘೋಷಣೆಯ ವದಂತಿಯನ್ನೂ ತೇಲಿಬಿಡಲಾಗಿತ್ತು.

​ಈ ಎಲ್ಲ ಬೆಳವಣಿಗೆಗಳ ನಡುವೆಯೇ, ನವೆಂಬರ್ 26 ರ ಬೃಹತ್ ‘ಬೆಂಗಳೂರು ಚಲೋ’ ಸಂದರ್ಭದಲ್ಲಿ, ಸಂಯುಕ್ತ ಹೋರಾಟದ ಮುಖಂಡರ ಜೊತೆಗೆ ಮುಖ್ಯಮಂತ್ರಿಗಳ ಜೊತೆ ನಡೆದ ಮಾತುಕತೆಯಂತೆ, ಡಿ. 4 ರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿನೋಟಿಫಿಕೇಶನ್‌ಗೆ (ಭೂಸ್ವಾಧೀನ ಕೈಬಿಡಲು) ಸಮ್ಮತಿ ಸೂಚಿಸಿದೆ.

ಸುಮಾರು ನಾಲ್ಕು ವರ್ಷಗಳ ಕಾಲ ನಡೆದ ಈ ಸುದೀರ್ಘ ಹೋರಾಟದ ದಾರಿ ಸುಲಭವಾಗಿರಲಿಲ್ಲ. ಹೆಜ್ಜೆ ಹೆಜ್ಜೆಗೂ ಎದುರಾದ ತಿರುವುಗಳು, ಸರ್ಕಾರಗಳ ನಿರ್ಲಕ್ಷ್ಯ, ಕುತಂತ್ರಗಳು, ವಿರೋಧಿಗಳ ಬೆದರಿಕೆಗಳನ್ನೆಲ್ಲಾ ಮೀರಿ ಕೊನೆಗೂ ರೈತರು ಗೆದ್ದಿದ್ದಾರೆ.

ರೈತರ ಜೊತೆ ನಿಂತ ಜನಸಮುದಾಯಗಳಿಗೆ ಧನ್ಯವಾದ ತಿಳಿಸಿದ ಹೋರಾಟ ಸಮಿತಿ

​ರೈತರ ಹೋರಾಟದ ಕೊನೆಯ ದಿನಗಳಲ್ಲಿ ಇಡೀ ರಾಜ್ಯದ ಜನತೆ ದೇವನಹಳ್ಳಿ ರೈತರ ಜೊತೆಗೆ ನಿಂತರು. ದೇವನಹಳ್ಳಿ ಚಲೋ ನಂತರ, ಎಲ್ಲ ರೈತ, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು ಸೇರಿದಂತೆ ರಾಜ್ಯದ ಜನಪರ ಸಂಘಟನೆಗಳು, ಪ್ರಗತಿಪರ ಚಿಂತಕರು, ಸಾಹಿತಿಗಳು, ಕಲಾವಿದರು, ಮಠಾಧೀಶರು, ಪ್ರಜ್ಞಾವಂತ ನಾಗರಿಕರು ಒಟ್ಟಾಗಿ ಬಂದು, ರೈತರ ಉಳಿವಿಗಾಗಿ ಜೊತೆ ನಿಂತಿದ್ದನ್ನು ಇಲ್ಲಿ ಸ್ಮರಿಸುತ್ತೇವೆ ಎಂದು ರೈತರು ಅಭಿಪ್ರಾಯಪಟ್ಟರು.

​ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರರಾದ ಕಾರಳ್ಳಿ ಶ್ರೀನಿವಾಸ್‌, “ಭೂಸ್ವಾಧೀನ ಕೈಬಿಟ್ಟಿರುವ ಮುಖ್ಯಮಂತ್ರಿಗಳ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು. ಈ ರೈತಪರ ನಿಲುವನ್ನು ಸಮಿತಿಯು ಸ್ವಾಗತಿಸುತ್ತದೆ. ಈ ಗೆಲುವಿನ ಹಿಂದೆ ಒಟ್ಟಾಗಿ ಹಗಲಿರುಳೆನ್ನದೆ ದುಡಿದ ರೈತರ ಶ್ರಮವಿದೆ. ಜೊತೆಗೆ ವಿವಿಧ ಜನಪರ ಸಂಘಟನೆಗಳು, ಪ್ರಗತಿಪರರು, ಸಾಹಿತಿಗಳು, ನಟರು ಸೇರಿದಂತೆ ಎಲ್ಲ ಜನಸಮುದಾಯಗಳ ಬೆಂಬಲ ದೊರೆತದ್ದು ಮತ್ತಷ್ಟು ಗೆಲುವಾಗಲು ಕಾರಣವಾಗಿದೆ. ಆದ್ದರಿಂದ ಅವರೆಲ್ಲರಿಗೂ ನಮ್ಮ ಸಮಿತಿಯು ಕೃತಜ್ಞತೆಗಳನ್ನು ಸಲ್ಲಿಸುತ್ತದೆ. ಇಲ್ಲಿ ಮಾತ್ರವಲ್ಲ, ತಮ್ಮ ಭೂಮಿಯನ್ನು ಪ್ರೀತಿಸುವ, ಭೂತಾಯಿಯನ್ನು ನಂಬಿ ಬದುಕಲು ಬಯಸುವ ಎಲ್ಲರಿಗೂ ಭೂಮಿ ಸಿಗಬೇಕು. ಈ ಎಲ್ಲ ಜನಸಮುದಾಯಗಳ ಜೊತೆ ನಾವಿರುತ್ತೇವೆ” ಎಂದರು.

​ಮುಖಂಡರಾದ ಮಾರೇಗೌಡ ಮಾತನಾಡಿ, “ನಮ್ಮ ಭೂಮಿ ಉಳಿದಿರುವ ಈ ಸಂತೋಷವನ್ನು, ನಮಗೆ ಬೆಂಬಲಿಸಿದ ಎಲ್ಲರಿಗೂ, ಜೊತೆಗೆ ನಿಂತ ಸಂಘಟನೆಗಳು, ಹೋರಾಟದ ಸಹಚರರು ಹಾಗೂ ನಾಡಿನ ಜನರೊಂದಿಗೆ ಹಂಚಿಕೊಳ್ಳಲು ಮತ್ತು ಅವರನ್ನು ಅಭಿನಂದಿಸಲು ನಾವು ಬಯಸುತ್ತೇವೆ. ಇದರ ಜೊತೆಗೆ ಈ ರೈತಪರ ನಿರ್ಣಯಕ್ಕೆ ಪರೋಕ್ಷವಾಗಿ ಮತ್ತು ಪ್ರತ್ಯಕ್ಷವಾಗಿ ಕಾರಣರಾದ ಜನಪ್ರತಿನಿಧಿಗಳು, ಅಧಿಕಾರಿಗಳು ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದರು.

​ಪತ್ರಿಕಾಗೋಷ್ಠಿಯಲ್ಲಿ, ನಲ್ಲಪ್ಪನಹಳ್ಳಿ ನಂಜಪ್ಪ, ಅಶ್ವತ್ಥಪ್ಪ, ತಿಮ್ಮರಾಯಪ್ಪ, ವೆಂಕಟರಮಣಪ್ಪ, ಪಿಳ್ಳಣ್ಣ, ಮುನಿಕೃಷ್ಣಪ್ಪ, ನಂದೀಶ್, ಕೃಷ್ಣಪ್ಪ, ಮರಿಯಣ್ಣ, ಮೋಹನ್, ವೆಂಕಟೇಶ್, ಪಿಳ್ಳರಾಜು, ಗೋಪಿನಾಥ್, ಲಗುಮಣ್ಣ, ಮಂಜುನಾಥ್ ಮುಂತಾದವರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...