Homeಮುಖಪುಟಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ಏಕಸ್ವಾಮ್ಯದ ಮುಂದೆ ತಲೆ ಬಾಗಿದ ಸರ್ಕಾರ?

- Advertisement -
- Advertisement -

ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ತೀವ್ರ ಪರದಾಡಿದ್ದರು.

ಈ ಬೆನ್ನಲ್ಲೇ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ (ಡಿಸೆಂಬರ್ 5) ವಿಮಾನಯಾನ ನಿಯಂತ್ರಕ ಡಿಜಿಸಿಎಯ ಪರಿಷ್ಕೃತ ವಿಮಾನ ಕರ್ತವ್ಯ ಸಮಯ ಮಿತಿಗಳು (ಎಫ್‌ಡಿಟಿಎಲ್) ಮಾನದಂಡಗಳನ್ನು ತಕ್ಷಣ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಇಂಡಿಗೋ ಸೇವೆಗಳನ್ನು ಮೂರು ದಿನಗಳಲ್ಲಿ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗುವುದು ಮತ್ತು ಶನಿವಾರದ ವೇಳೆಗೆ ವೇಳಾಪಟ್ಟಿ ಸ್ಥಿರವಾಗಲಿದೆ ಎಂದು ನಾಯ್ಡು ಭರವಸೆ ನೀಡಿದ್ದಾರೆ.

ಆದಾಗ್ಯೂ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಎಲ್ಲಾ ವಿಮಾನ ಸೇವೆಗಳು ಸಾಮಾನ್ಯ ಸ್ಥಿತಿಗೆ ಮರಳಲು ಡಿಸೆಂಬರ್ 10-15ರವರೆಗೆ ಸಮಯ ಬೇಕು ಎಂದು ವಿಡಿಯೋ ಸಂದೇಶದಲ್ಲಿ ಹೇಳುವ ಮೂಲಕ ಸಮಯಸೂಚಿಯನ್ನು ವಿರೋಧಿಸಿದ್ದಾರೆ. ಹಾರಾಟದ ವೇಳಾಪಟ್ಟಿಗಳು ಸಂಪೂರ್ಣ ಚೇತರಿಕೆ ಕಾಣಲು ಫೆಬ್ರವರಿ 1, 2026ರವರೆಗೆ ಸಮಯ ಬೇಕಾಗಬಹುದು ಎಂದು ಈ ಹಿಂದೆ ಡಿಜಿಸಿಎಗೆ ತಿಳಿಸಿತ್ತು.

ಸಚಿವಾಲಯ, ಡಿಜಿಸಿಎ, ಎಎಐ ಮತ್ತು ಇಂಡಿಗೋ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆಯ ನಂತರ, ನಾಯ್ಡು ಅವರು ವಿಮಾನ ವ್ಯತ್ಯಯದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದಾರೆ. ಡಿಜಿಸಿಎ ಜಂಟಿ ಮಹಾನಿರ್ದೇಶಕ ಸಂಜಯ್ ಕೆ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣಾ ನಿರೀಕ್ಷಕ (ಎಸ್‌ಎಫ್‌ಒಐ) ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡ ನಾಲ್ವರು ಸದಸ್ಯರ ಡಿಜಿಸಿಎ ಸಮಿತಿಯು ಎರಡು ವಾರಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ಕೇಳಲಾಗಿದೆ.

ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ನಿಯಂತ್ರಕರು ಆರೋಪ ಮಾಡಿದ್ದಾರೆ.

ಶುಕ್ರವಾರವೂ ವಿಮಾನ ಸೇವೆಗಳಲ್ಲಿ ವ್ಯತ್ಯಯ ಮುಂದುವರೆದಿತ್ತು. ದೆಹಲಿಯ ಐಜಿಐಎ ಟರ್ಮಿನಲ್‌ಗಳಲ್ಲಿ ಆಕ್ರೋಶಗೊಂಡ ಪ್ರಯಾಣಿಕರು ಇಂಡಿಗೋ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು, ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳ ಹಾರಾಟ ರದ್ದಾಗಿತ್ತು. ಚೆನ್ನೈನಲ್ಲಿ ಇಂಡಿಗೋದ ದೇಶೀಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಖಾಸಗಿ ಸಂಸ್ಥೆ ಇಂಡಿಗೋ ಕಡೆಯಿಂದ ಉಂಟಾದ ಸಮಸ್ಯೆಗೆ ಸಂಸ್ಥೆಯ ವಿರುದ್ದ ಕ್ರಮ ಕೈಗೊಳ್ಳುವ ಬದಲು, ಕೇಂದ್ರ ಸರ್ಕಾರ ಜನರ ಸುರಕ್ಷತಾ ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಇಂಡಿಗೋದ ಏಕಸ್ವಾಮ್ಯಕ್ಕೆ ಸರ್ಕಾರ ತಲೆಬಾಗಿದೆ ಎಂದಿದ್ದಾರೆ.

ಈ ಆರೋಪಕ್ಕೆ, ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ವಿಮಾನಯಾನ ನಿಯಂತ್ರಕರು ಹೇಳಿರುವುದು ಪುಷ್ಠಿ ನೀಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...