Homeಮುಖಪುಟಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ವಿಮಾನ ಸೇವೆಯಲ್ಲಿ ವ್ಯತ್ಯಯ : ಪೈಲಟ್‌ಗಳಿಗೆ ವಾರದ ವಿಶ್ರಾಂತಿ ನಿಯಮ ಹಿಂಪಡೆದ ಡಿಜಿಸಿಎ

ಇಂಡಿಗೋ ಏಕಸ್ವಾಮ್ಯದ ಮುಂದೆ ತಲೆ ಬಾಗಿದ ಸರ್ಕಾರ?

- Advertisement -
- Advertisement -

ಡಿಸೆಂಬರ್ 4 ಗುರುವಾರ ದೇಶದಾದ್ಯಂತ 1,000ಕ್ಕೂ ಹೆಚ್ಚು ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದ್ದು ಮತ್ತು ದೆಹಲಿಯಿಂದ ಎಲ್ಲಾ 235 ದೇಶೀಯ ನಿರ್ಗಮನಗಳು 24 ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಪರಿಣಾಮ ಬೆಂಗಳೂರು ಸೇರಿದಂತೆ ದೇಶದ ಬಹುತೇಕ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ತೀವ್ರ ಪರದಾಡಿದ್ದರು.

ಈ ಬೆನ್ನಲ್ಲೇ, ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ (ಡಿಸೆಂಬರ್ 5) ವಿಮಾನಯಾನ ನಿಯಂತ್ರಕ ಡಿಜಿಸಿಎಯ ಪರಿಷ್ಕೃತ ವಿಮಾನ ಕರ್ತವ್ಯ ಸಮಯ ಮಿತಿಗಳು (ಎಫ್‌ಡಿಟಿಎಲ್) ಮಾನದಂಡಗಳನ್ನು ತಕ್ಷಣ ಸ್ಥಗಿತಗೊಳಿಸುವುದಾಗಿ ಘೋಷಿಸಿದ್ದಾರೆ.

ಇಂಡಿಗೋ ಸೇವೆಗಳನ್ನು ಮೂರು ದಿನಗಳಲ್ಲಿ ಸಂಪೂರ್ಣವಾಗಿ ಪುನಃಸ್ಥಾಪಿಸಲಾಗುವುದು ಮತ್ತು ಶನಿವಾರದ ವೇಳೆಗೆ ವೇಳಾಪಟ್ಟಿ ಸ್ಥಿರವಾಗಲಿದೆ ಎಂದು ನಾಯ್ಡು ಭರವಸೆ ನೀಡಿದ್ದಾರೆ.

ಆದಾಗ್ಯೂ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಅವರು ಎಲ್ಲಾ ವಿಮಾನ ಸೇವೆಗಳು ಸಾಮಾನ್ಯ ಸ್ಥಿತಿಗೆ ಮರಳಲು ಡಿಸೆಂಬರ್ 10-15ರವರೆಗೆ ಸಮಯ ಬೇಕು ಎಂದು ವಿಡಿಯೋ ಸಂದೇಶದಲ್ಲಿ ಹೇಳುವ ಮೂಲಕ ಸಮಯಸೂಚಿಯನ್ನು ವಿರೋಧಿಸಿದ್ದಾರೆ. ಹಾರಾಟದ ವೇಳಾಪಟ್ಟಿಗಳು ಸಂಪೂರ್ಣ ಚೇತರಿಕೆ ಕಾಣಲು ಫೆಬ್ರವರಿ 1, 2026ರವರೆಗೆ ಸಮಯ ಬೇಕಾಗಬಹುದು ಎಂದು ಈ ಹಿಂದೆ ಡಿಜಿಸಿಎಗೆ ತಿಳಿಸಿತ್ತು.

ಸಚಿವಾಲಯ, ಡಿಜಿಸಿಎ, ಎಎಐ ಮತ್ತು ಇಂಡಿಗೋ ಅಧಿಕಾರಿಗಳೊಂದಿಗೆ ತುರ್ತು ಪರಿಶೀಲನಾ ಸಭೆಯ ನಂತರ, ನಾಯ್ಡು ಅವರು ವಿಮಾನ ವ್ಯತ್ಯಯದ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಘೋಷಿಸಿದ್ದಾರೆ. ಡಿಜಿಸಿಎ ಜಂಟಿ ಮಹಾನಿರ್ದೇಶಕ ಸಂಜಯ್ ಕೆ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣಾ ನಿರೀಕ್ಷಕ (ಎಸ್‌ಎಫ್‌ಒಐ) ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡ ನಾಲ್ವರು ಸದಸ್ಯರ ಡಿಜಿಸಿಎ ಸಮಿತಿಯು ಎರಡು ವಾರಗಳಲ್ಲಿ ತನ್ನ ವರದಿಯನ್ನು ಸಲ್ಲಿಸುವಂತೆ ಕೇಳಲಾಗಿದೆ.

ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ನಿಯಂತ್ರಕರು ಆರೋಪ ಮಾಡಿದ್ದಾರೆ.

ಶುಕ್ರವಾರವೂ ವಿಮಾನ ಸೇವೆಗಳಲ್ಲಿ ವ್ಯತ್ಯಯ ಮುಂದುವರೆದಿತ್ತು. ದೆಹಲಿಯ ಐಜಿಐಎ ಟರ್ಮಿನಲ್‌ಗಳಲ್ಲಿ ಆಕ್ರೋಶಗೊಂಡ ಪ್ರಯಾಣಿಕರು ಇಂಡಿಗೋ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು, ಹೈದರಾಬಾದ್‌ನಲ್ಲಿ 90ಕ್ಕೂ ವಿಮಾನಗಳ ಹಾರಾಟ ರದ್ದಾಗಿತ್ತು. ಚೆನ್ನೈನಲ್ಲಿ ಇಂಡಿಗೋದ ದೇಶೀಯ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಖಾಸಗಿ ಸಂಸ್ಥೆ ಇಂಡಿಗೋ ಕಡೆಯಿಂದ ಉಂಟಾದ ಸಮಸ್ಯೆಗೆ ಸಂಸ್ಥೆಯ ವಿರುದ್ದ ಕ್ರಮ ಕೈಗೊಳ್ಳುವ ಬದಲು, ಕೇಂದ್ರ ಸರ್ಕಾರ ಜನರ ಸುರಕ್ಷತಾ ನಿಯಮಗಳಲ್ಲಿ ರಾಜಿ ಮಾಡಿಕೊಂಡಿದೆ ಎಂದು ಜನರು ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ಇಂಡಿಗೋದ ಏಕಸ್ವಾಮ್ಯಕ್ಕೆ ಸರ್ಕಾರ ತಲೆಬಾಗಿದೆ ಎಂದಿದ್ದಾರೆ.

ಈ ಆರೋಪಕ್ಕೆ, ಹೊಸ ರೋಸ್ಟರಿಂಗ್ (ಸಿಬ್ಬಂದಿ ಕರ್ತವ್ಯ ಸಮಯ ನಿಯಮಗಳು) ನಿಯಮಗಳಿಗೆ ಸಿದ್ಧವಾಗಿರುವಂತೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಿದರೂ ಸಹ, ಇಂಡಿಗೋ ಆ ಎಚ್ಚರಿಕೆಗಳನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದೆ ಎಂದು ವಿಮಾನಯಾನ ನಿಯಂತ್ರಕರು ಹೇಳಿರುವುದು ಪುಷ್ಠಿ ನೀಡುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು...

ಸ್ಥಳದಲ್ಲೇ ದಂಡ ಪಾವತಿಸುವಂತೆ ಸಂಚಾರ ಪೊಲೀಸರು ಒತ್ತಾಯಿಸುವಂತಿಲ್ಲ: ತೆಲಂಗಾಣ ಹೈಕೋರ್ಟ್

ಸಂಚಾರ ನಿಯಮ ಉಲ್ಲಂಘಿಸುವವರ ಬ್ಯಾಂಕ್ ಖಾತೆಗಳಿಂದ ಸ್ವಯಂಚಾಲಿತವಾಗಿ ದಂಡ ಕಡಿತಗೊಳಿಸಬೇಕೆಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚಿಸಿದ ಕೆಲವು ದಿನಗಳ ನಂತರ ಮಹತ್ವದ ತೀರ್ಪು ನೀಡಿರುವ ತೆಲಂಗಾಣ ಹೈಕೋರ್ಟ್, ಪೊಲೀಸರು ನಾಗರಿಕರನ್ನು ರಸ್ತೆಯಲ್ಲಿ ನಿಲ್ಲಿಸಿ...

ಎಸ್‌ಸಿ/ಎಸ್‌ಟಿ ಶಾಲೆಗಳ ನವೀಕರಣಕ್ಕೆ ಹಣ ಮಂಜೂರು ಮಾಡದಂತೆ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್ 

ಮಧುರೈ: ತಮಿಳುನಾಡಿನ ಸುಮಾರು 170 ಎಸ್‌ಸಿ/ಎಸ್‌ಟಿ ಶಾಲೆ ಮತ್ತು ಹಾಸ್ಟೆಲ್ ಕಟ್ಟಡಗಳ ದುರಸ್ತಿ ಮತ್ತು ನಿರ್ಮಾಣ ಕಾರ್ಯಗಳಿಗೆ ತಮಿಳುನಾಡು ಆದಿ ದ್ರಾವಿಡರ್ ವಸತಿ ಅಭಿವೃದ್ಧಿ ನಿಗಮ (ಟಿಎಎಚ್‌ಡಿಸಿಒ) 50 ಕೋಟಿ ರೂ.ಗಳನ್ನು ಖರ್ಚು...

ಕೇಂದ್ರ ಸರ್ಕಾರಿ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳನ್ನು ರಾಜ್ಯ ಸಂಸ್ಥೆ ತನಿಖೆ ಮಾಡಬಹುದು : ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರಿ ನೌಕರರು ಮಾಡುವ ಭ್ರಷ್ಟಾಚಾರ ತಡೆ ಕಾಯ್ದೆಯಡಿಯ ಶಿಕ್ಷಾರ್ಹ ಅಪರಾಧಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ರಾಜ್ಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಲು ಮತ್ತು ಆರೋಪಪಟ್ಟಿ ಸಲ್ಲಿಸಲು ಸಮರ್ಥರು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಕಾರ್ಯಚರಣೆ ಆರಂಭಿಸಿದ ಪಂಜಾಬ್ ಸರ್ಕಾರ

ಮಾದಕ ವಸ್ತುಗಳ ವಿರುದ್ಧದ ತನ್ನ ಕಾರ್ಯಾಚರಣೆಯಿಂದ ಸ್ಫೂರ್ತಿ ಪಡೆದು, ಪಂಜಾಬ್ ಸರ್ಕಾರ ಮಂಗಳವಾರ ಗ್ಯಾಂಗ್‌ಸ್ಟರ್‌ಗಳ ವಿರುದ್ಧ ರಾಜ್ಯಾದ್ಯಂತ ಅಭಿಯಾನ ಆರಂಭಿಸಿದ್ದು, ಶಸ್ತ್ರಾಸ್ತ್ರ ಪೂರೈಕೆ ಸರಪಳಿಗಳು, ಲಾಜಿಸ್ಟಿಕ್ಸ್, ಅಡಗುತಾಣಗಳು ಮತ್ತು ಸಂವಹನ ಜಾಲಗಳು ಸೇರಿದಂತೆ...

‘ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ‘ನನ್ನ ಹೆಸರೇ’ ಆಸರೆ’: ಪ್ರಿಯಾಂಕ್ ಖರ್ಗೆ ಆಕ್ರೋಶ 

ಬೆಂಗಳೂರು: ಮುಳುಗುವವನಿಗೆ ಹುಲ್ಲು ಕಡ್ಡಿಯ ಆಸರೆ ಎನ್ನುವಂತೆ, ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ "ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು...

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ರದ್ದುಗೊಳಿಸಲು ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ : ತಮಿಳುನಾಡು ಸಿಎಂ ಸ್ಟಾಲಿನ್

ವಿಧಾನಸಭೆ ಅಧಿವೇಶನದಲ್ಲಿ ರಾಜ್ಯಪಾಲರು ವಾರ್ಷಿಕ ಭಾಷಣ ಮಾಡುವ ಸಂಪ್ರದಾಯವನ್ನು ರದ್ದುಗೊಳಿಸುವ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯಿಸುವುದಾಗಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಘೋಷಿಸಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್‌.ಎನ್‌ ರವಿ ನಡುವೆ ಜಟಾಪಟಿ ನಡೆದು,...

ಅಸ್ಸಾಂ| ದನ ಕಳ್ಳತನದ ಶಂಕೆಯಿಂದ ಗುಂಪು ದಾಳಿ; ಓರ್ವ ಸಾವು-ನಾಲ್ವರ ಸ್ಥಿತಿ ಗಂಭೀರ

ದನ ಕಳ್ಳತನದ ಶಂಕೆಯ ಮೇಲೆ ಗುಂಪೊಂದು ದಾಳಿ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿ, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ (ಜ.19) ಅಸ್ಸಾಂನ ಕೊಕ್ರಜಾರ್‌ನಲ್ಲಿ ನಡೆದಿದೆ. ಬಲಿಪಶುಗಳು, ರಸ್ತೆ ನಿರ್ಮಾಣ ಯೋಜನೆಯೊಮದರಲ್ಲಿ...

ಕರ್ನಾಟಕ: ಐದು ವರ್ಷಗಳಲ್ಲಿ ಎಸ್‌ಸಿ/ಎಸ್‌ಟಿಗಳ ಮೇಲಿನ ಅಪರಾಧಗಳು ಶೇ. 37.7 ರಷ್ಟು ಏರಿಕೆ; ಬೆಂಗಳೂರಿನದೇ ಅಗ್ರಸ್ಥಾನ

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನುಗಳಿದ್ದರೂ, ಈ ಸಮುದಾಯಗಳ ಮೇಲಿನ ಅಪರಾಧಗಳು ಕಳೆದ ಐದು ವರ್ಷಗಳಲ್ಲಿ ಶೇ. 37.74 ರಷ್ಟು ಹೆಚ್ಚಾಗಿದ್ದು,...

‘ನಿತಿನ್ ನಬಿನ್ ನನ್ನ ಬಾಸ್, ನಾನು ಕೆಲಸಗಾರ..’; ಬಿಜೆಪಿ ನೂತನ ಮುಖ್ಯಸ್ಥರನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಅತ್ಯಂತ ಕಿರಿಯ ವಯಸ್ಸಿನ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದರು. ಪಕ್ಷದ ಪರಂಪರೆಯನ್ನು ಮುಂದುವರಿಸುವ 'ಸಹಸ್ರಮಾನದ' ವ್ಯಕ್ತಿ ಎಂದು ಕರೆದರು. "ಪಕ್ಷದ...