Homeಕರ್ನಾಟಕಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪಾದಯಾತ್ರೆ; ಸಿದ್ದರಾಮನಹುಂಡಿಯಲ್ಲಿ ಹೋರಾಟಗಾರರ ಬಂಧನ

- Advertisement -
- Advertisement -

ಪರಿಶಿಷ್ಟ ಜಾತಿ (ಎಸ್‌ಸಿ) ಸಮಗ್ರ ಒಳಮೀಸಲಾತಿ ಜಾರಿಗೆ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಆಗ್ರಹಿಸಿ, ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಪೊಲೀಸರು ಹತ್ತಿಕ್ಕಿದ್ದಾರೆ. ಇಂದು ಬೆಳಗ್ಗೆ ಆರಂಭವಾದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಹೋರಾಟಗಾರರನ್ನು ಬಂಧಿಸಿದ್ದಾರೆ.

ಈ ಕುರಿತು ಮಾತನಾಡಿದ ಒಳಮೀಸಲಾತಿ ಹಿರಿಯ ಹೋರಾಟಗಾರ ಎಸ್‌.ಮಾರೆಪ್ಪ, “ದುರುದ್ದೇಶದಿಂದ ಪೊಲೀಸರು ಪಾದಯಾತ್ರೆಗೆ ಅನುಮತಿ ನಿರಾಕರಿಸಿ ಈಗ ನಮ್ಮನ್ನು ಬಂಧಿಸಿದ್ದಾರೆ. ನಮ್ಮ ಸಮುದಾಯದ ಜನರ ಸಮಸ್ಯೆ ಕುರಿತು ಚರ್ಚಿಸಲು ನಮ್ಮದೇ ಸಮುದಾಯದ ನಾಯಕರ ಬಳಿಗೆ ಹೋಗುತ್ತಿರುವಾಗ ಬಂಧಿಸಿರುವುದು ಮೊದಲು. ಈಗ ನಾವು ಯಾರನ್ನು ಕೇಳಬೇಕು? ಈ ರೀತಿ ನಡೆದಿರುವುದು ಕರ್ನಾಟಕದ ಚರಿತ್ರಿಯಲ್ಲೇ ಮೊದಲು. ಸಿದ್ದರಾಮಯ್ಯ ಅವರ ಸರ್ಕಾರ ಹೀಗೆಲ್ಲಾ ಮಾಡುತ್ತಿರುವುದು ಸರಿಯಲ್ಲ” ಎಂದು ಆಕ್ರೋಶ ಹೊರಹಾಕಿದರು.

“ಒಳಮೀಸಲಾತಿ ಪ್ರಕ್ರಿಯೆ ಜಾರಿಗೆ ಉದ್ದೇಶಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅವರ ಈ ವಿಳಂಬ ಧೋರಣೆಗೆ ಪೂರಕವಾಗಿ ಪೊಲೀಸರು ಕೂಡ ಕೆಲಸ ಮಾಡುತ್ತಿದ್ದು, ನಮ್ಮನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ. ವಿವಿಧ ಜಿಲ್ಲೆಗಳಿಂದ ಬಂದಿರುವ ಒಳಮೀಸಲಾತಿ ಹೋರಾಟಗಾರರು ಸಿದ್ದರಾಮನಹುಂಡಿಗೆ ನೇರವಾಗಿ ತೆರಳಿ ಪಾದಯಾತ್ರೆ ಆರಂಭಿಸಬೇಕು. ರಾಜ್ಯದ ಜನರು, ಸರ್ಕಾರ ಮತ್ತು ಪೊಲೀಸರ ಈ ನಡೆಯನ್ನು ಖಂಡಿಸಬೇಕು” ಎಂದು ಒಳಮೀಸಲಾತಿ ಹೋರಾಟಗಾರ ಶಿವರಾಜ್ ಅಕ್ಕರಕಿ ಹೇಳಿದರು.

“ಮಾನ್ಯ ಮುಖ್ಯಮಂತ್ರಿಗಳೆ.. ಸಚಿವರಾದ ಎಚ್‌.ಸಿ. ಮಹದೇವಪ್ಪ ಅವರೇ.. ನಿಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದವರು ನಾವು; ಕೋಮುವಾದಿಗಳನ್ನು ಸೋಲಿಸಿದ್ದು ನಾವು. ರಾಜ್ಯದಲ್ಲಿ ಶಾಂತಿ-ನೆಮ್ಮದಿ ಇರಬೇಕು ಎಂದು ಬಯಸಿದವರು. ನ್ಯಾಯಯುತವಾಗಿ ನಡೆಯುತ್ತಿರುವ ನಮ್ಮ ಹೋರಾಟವನ್ನು ಹತ್ತಿಕ್ಕಿ, ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ. ಸಮಾಜ ಕಲ್ಯಾಣ ಇಲಾಖೆಯಲ್ಲಿರುವ ಇಡೀ ಆಡಳಿತ ಯಂತ್ರದಲ್ಲಿ ಮೀಸಲಾತಿ ಉದ್ದೇಶವನ್ನೇ ಬುಡಮೇಲು ಮಾಡುವ ಯತ್ನ ನಡೆಯುತ್ತಿದೆ. ನಮ್ಮ ಹೋರಾಟ ಸರ್ಕಾರ ಅಥವಾ ಸಿದ್ದರಾಮಯ್ಯನವರ ವಿರುದ್ಧ ಅಲ್ಲ. ಏಕೆಂದರೆ, ಕೋಮುವಾದಿಗಳು ಅಧಿಕಾರಕ್ಕೆ ಬರಬಾರದು ಎಂದು ಬಯಸಿದವರು ನಾವು. ನಮ್ಮದು ಶಾಂತಿಯುತ ಪಾದಯಾತ್ರೆ. ಆದರೆ, ನಮ್ಮನ್ನು ಪೊಲೀಸರು ಬಂಧಿಸಿ ಕರೆದೊಯ್ಯತ್ತಿದ್ದಾರೆ. ಬೇಕಿದ್ದರೆ ನಮ್ಮನ್ನು ಬಂಧಿಸಿ ಜೈಲಿನಲ್ಲಿಡಿ ಅದಕ್ಕಾಗಿ ನಾವು ತಯಾರಿದ್ದೇವೆ. ಆದರೆ ಒಳಮೀಸಲಾತಿ ವಿಚಾರದಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗಬೇಕು” ಎಂದು ಹಿರಿಯ ಹೋರಾಟಗಾರ ಕರಿಯಪ್ಪ ಗುಡಿಮನಿ ಬೇಸರ ಆಗ್ರಹಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...