Homeಮುಖಪುಟ'ಲವ್ ಜಿಹಾದ್' ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು ‘ಲವ್ ಜಿಹಾದ್’ ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್ 2) ಐದು ಸುದ್ದಿ ವಾಹಿನಿಗಳಿಗೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ.

ಎನ್‌ಸಿಇಆರ್‌ಟಿಯ 3ನೇ ತರಗತಿಯ ಪರಿಸರ ಅಧ್ಯಯನದ ಹಳೆಯ ಅಧ್ಯಾಯವಾದ ‘ಚಿಟ್ಟಿ ಆಯಿ ಹೈ’ ನಲ್ಲಿ ಕಾಲ್ಪನಿಕ ಪತ್ರವೊಂದನ್ನು ತಪ್ಪಾಗಿ ನಿರೂಪಿಸಿರುವ ಬಗ್ಗೆ ದೂರು ದಾಖಲಾಗಿತ್ತು. ರೀನಾ ಎಂಬ ಪಾತ್ರಧಾರಿ ಅಹ್ಮದ್ ಎಂಬ ಮತ್ತೊಂದು ಪಾತ್ರಕ್ಕೆ ಬರೆದ ಪತ್ರವನ್ನು ದೂರದರ್ಶನ ವಾಹಿನಿಗಳು ಲವ್ ಜಿಹಾದ್ ಪಿತೂರಿಯ ಪುರಾವೆಯಾಗಿ ತಪ್ಪಾಗಿ ಬಿಂಬಿಸಿವೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇಂಡಿಯಾ ಟಿವಿ, ನ್ಯೂಸ್ 18 ಎಂಪಿ/ಛತ್ತೀಸ್‌ಗಢ, ಝೀ ಎಂಪಿ/ಛತ್ತೀಸ್‌ಗಢ, ಜೀ ನ್ಯೂಸ್ ಮತ್ತು ಎಬಿಪಿ ನ್ಯೂಸ್‌ನಲ್ಲಿ ಪ್ರಸಾರ ಮಾಡಲಾಗಿದ್ದ ಕಾರ್ಯಕ್ರಮಗಳ ವಿರುದ್ಧ ಇಂದ್ರಜೀತ್ ಘೋರ್ಪಡೆ ಮತ್ತು ಉತ್ಕರ್ಷ್ ಮಿಶ್ರಾ ಎಂಬವರು ದೂರು ನೀಡಿದ್ದರು.

ಪಠ್ಯಪುಸ್ತಕದಲ್ಲಿ ಕೇವಲ ಒಬ್ಬ ಹುಡುಗಿ ಬೇರೆ ಧರ್ಮದ ಹುಡುಗನಿಗೆ ಪತ್ರ ಬರೆದಿದ್ದಾರೆ ಎಂಬ ಕಾರಣಕ್ಕಾಗಿ ಅದನ್ನು ಲವ್ ಜಿಹಾದ್ ಎಂದು ಪ್ರಚಾರ ಮಾಡಿ ವಿಡಿಯೋಗಳನ್ನು ಹಾಕುವುದು ಸರಿಯಲ್ಲ ಎಂದು ಎನ್‌ಬಿಡಿಎಸ್‌ಎ ಡಿಸೆಂಬರ್ 2ರಂದು ನೀಡಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದ್ದರಿಂದ ಅಂತಹ ವಿಡಿಯೋಗಳನ್ನು ತೆಗೆದುಹಾಕಬೇಕಲು ಸೂಚಿಸಿದೆ ಎಂದು scroll.in ವರದಿ ಮಾಡಿದೆ.

ಎನ್‌ಬಿಡಿಎ ಅಧ್ಯಕ್ಷರಾದ ನಿವೃತ್ತ ನ್ಯಾಯಮೂರ್ತಿ ಎ.ಕೆ. ಸಿಕ್ರಿ ಅವರು, “ಭಾರತವು ಜಾತ್ಯತೀತ ರಾಷ್ಟ್ರವಾಗಿದೆ, ಇದು ಸಂವಿಧಾನದ ಆದೇಶವೂ ಹೌದು. ಆದ್ದರಿಂದ ಪ್ರಸಾರಕರು (ಚಾನೆಲ್‌ಗಳು) ಎನ್‌ಸಿಇಆರ್‌ಟಿ ಪುಸ್ತಕದ ಒಂದು ಅಧ್ಯಾಯದಲ್ಲಿ ಇರುವ ವಿಷಯವನ್ನು ನಿಜವಾದ ಅರ್ಥದಿಂದ ಬೇರೆ ರೀತಿಗೆ ತಂದು, ಪಕ್ಷಪಾತಿಯಾಗಿರುವಂತೆ ತೋರಿಸಿದರೆ, ಅದು ನಿಯಮಗಳಿಗೆ ವಿರುದ್ಧವಾಗುತ್ತದೆ ಎಂದು ಆದೇಶ ಪ್ರತಿಯಲ್ಲಿ ಹೇಳಿರುವುದಾಗಿ ವರದಿ ತಿಳಿಸಿದೆ.

ಕಪೋಲಕಲ್ಪಿತ ಲವ್ ಜಿಹಾದ್ ವಿಷಯಗಳನ್ನು ಪ್ರಸಾರ ಮಾಡಿದ್ದಕ್ಕಾಗಿ ಈ ಹಿಂದೆ ಟೀಕೆಗೆ ಗುರಿಯಾಗಿದ್ದರೂ, ವೈಯಕ್ತಿಕ ಅಭಿಪ್ರಾಯ ಆಧಾರಿತ, ಜನರನ್ನು ವಿಭಜಿಸುವ ಮತ್ತು ಗಮನ ಸೆಳೆಯಲು ಕೆಲವು ಗುಂಪುಗಳು ರಚಿಸಿದ ವಿಷಯವನ್ನು ಮುಖ್ಯ ಸುದ್ದಿಯಾಗಿ ಚಾನೆಲ್‌ಗಳು ತೋರಿಸಿವೆ ಎಂದು ದೂರುದಾರರು ಆರೋಪಿಸಿದ್ದರು.

ಚಾನೆಲ್‌ಗಳು ಆ ವಿಷಯವನ್ನು (ಲವ್ ಜಿಹಾದ್) ಪ್ರಚಾರ ಮಾಡುವವರಿಗೆ ಅವಕಾಶ ಕೊಟ್ಟಿದ್ದು ಮಾತ್ರವಲ್ಲ, ಕೆಲವು ನಿರೂಪಕರು ಕೂಡ ಪರೋಕ್ಷ ಸಂಕೇತಗಳು (dog-whistling) ಮತ್ತು ಪರದೆಯಲ್ಲಿನ ಬರಹಗಳ ಮೂಲಕ ಆ ಹೇಳಿಕೆಗಳನ್ನು ಬೆಂಬಲಿಸುವ ರೀತಿಯಲ್ಲಿ ವರ್ತಿಸಿದ್ದಾರೆ ಎಂದು ಹೇಳಿದ್ದರು.

“ನ್ಯೂಸ್18 ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ನ ಕಾರ್ಯಕ್ರಮದಲ್ಲಿ ಸಂಪೂರ್ಣ ಚರ್ಚೆ ಭಾಗೇಶ್ವರಧಾಮದ ಧೀರೆಂದ್ರ ಶಾಸ್ತ್ರಿಯವರ ಮಾತುಗಳನ್ನೇ ಕೇಂದ್ರವಾಗಿಸಿಕೊಂಡಿತ್ತು. ಅವರು ಲವ್ ಜಿಹಾದ್ ಮೂಲಕ ಮುಸ್ಲಿಂ ಜನಸಂಖ್ಯೆ ಹೆಚ್ಚಿಸಲು ಪ್ರಯತ್ನಿಸಲಾಗುತ್ತಿದೆ ಮತ್ತು ಇದರಿಂದ ಹಿಂದೂ ಮಹಿಳೆಯರು ಅಪಾಯಕ್ಕೆ ಒಳಗಾಗುತ್ತಿದ್ದಾರೆ ಎಂದು ಹೇಳಿದ್ದರು”

“ಕಾರ್ಯಕ್ರಮ ಟಿಕ್ಕರ್‌ಗಳು, ಗ್ರಾಫಿಕ್‌ಗಳು ಮತ್ತು ದೃಶ್ಯಗಳ ಮೂಲಕ ಶಾಸ್ತ್ರಿಯವರ ಮಾತುಗಳನ್ನು ಇನ್ನೂ ಗಟ್ಟಿ ಮಾಡಿತ್ತು, ಆದರೆ ಆ ಹೇಳಿಕೆಗಳು ತಪ್ಪು ಕಲಹ ಉಂಟುಮಾಡುವಂತಿವೆಯೇ ಎಂದು ಯಾವುದೇ ಪ್ರಶ್ನೆ ಅಥವಾ ಪರಿಶೀಲನೆ ಮಾಡಿಲ್ಲ”

“ಝೀ ನ್ಯೂಸ್ ಹಾಗೂ ಝೀ ಮಧ್ಯಪ್ರದೇಶ/ಛತ್ತೀಸ್‌ಗಢ ಚಾನೆಲ್‌ಗಳು ಶಿಕ್ಷಕರ ಮಾತುಗಳನ್ನು ಪ್ರಸಾರ ಮಾಡಿದರೂ, ಕಾರ್ಯಕ್ರಮದ ಒಟ್ಟು ರೂಪ ಮತ್ತು ವಿಷಯವು ಆ ಅಧ್ಯಾಯದಲ್ಲಿ ಏನೋ ಅನುಮಾನಾಸ್ಪದ ವಿಷಯ ಇದೆ ಎಂದು ಜನರಿಗೆ ಭಾಸವಾಗುವಂತೆ ಮಾಡಿತ್ತು”

“ವರದಿಗಾರರು ಆ ಅಧ್ಯಾಯವನ್ನು ಯಾಕೆ ಸೇರಿಸಲಾಗಿದೆ ಎಂಬುದನ್ನು ನೇರವಾಗಿ ಪ್ರಶ್ನಿಸಿ, ರೀನಾ ಮತ್ತು ಅಹಮದ್ ಎಂಬ ಹೆಸರಿನ ಪಾತ್ರಗಳಿರುವ ಪತ್ರವನ್ನು ಸೇರಿಸಿರುವುದೇ ಸಮಸ್ಯೆ ಎಂಬಂತೆ ತೋರಿಸಿದ್ದಾರೆ. ಕಾರ್ಯಕ್ರಮದಲ್ಲಿ ವರದಿಗಾರನ ವರ್ತನೆ, ಮಾತು ಹಾಗೂ ತೋರಿಸಿರುವ ದೃಶ್ಯಗಳು, ಆ ಅಧ್ಯಾಯವನ್ನು ಅವನು ಒಪ್ಪುತ್ತಿಲ್ಲ ಮತ್ತು ಅದಕ್ಕೆ ವಿರೋಧಿಯಾಗಿ ನಿಲ್ಲುತ್ತಿದ್ದಾನೆ ಎಂಬ ಸಂದೇಶ ನೀಡಿವೆ” ಎಂದು ದೂರುದಾರರು ಆರೋಪಿಸಿದ್ದರು.

ಇಂಡಿಯಾ ಟಿವಿಯಲ್ಲಿ, ಪಠ್ಯಪುಸ್ತಕಕ್ಕೆ ‘ಕಪ್ಪು ಬಣ್ಣ ಬಳಿಯುವ’ ವ್ಯಕ್ತಿಯ ಪ್ರತಿಕ್ರಿಯೆಯೂ ಸೇರಿದಂತೆ ತೀವ್ರ ಅತಿರೇಕಗಳನ್ನು ತೋರಿಸಿದೆ. ಚಾನೆಲ್ ಅದನ್ನು ತಪ್ಪು ಎಂದು ಹೇಳಿಲ್ಲ. ಇದರಿಂದ ಆತನ ವರ್ತನೆಗೆ ಮತ್ತಷ್ಟು ಪ್ರೋತ್ಸಾಹ ಸಿಕ್ಕಂತಾಗಿದೆ ಎಂದು ಘೋರ್ಪಡೆ ಮತ್ತು ಮಿಶ್ರಾ ಹೇಳಿದ್ದರು.

ಬಹುತೇಕ ಎಲ್ಲಾ ಚಾನೆಲ್‌ಗಳು ಹೇಳಿಕೆಗಳನ್ನು ತಟಸ್ಥವಾಗಿ ಪರಿಶೀಲಿಸದೆ, ವಿಮರ್ಶಾತ್ಮಕ ಪ್ರಶ್ನೆಗಳು ಕೇಳದೆ ಪ್ರಸಾರ ಮಾಡುತ್ತಿದ್ದವು. ಆದರೆ ನ್ಯೂಸ್18 ಎಂ.ಪಿ/ಛತ್ತೀಸ್‌ಗಢ ಮತ್ತು ಎಬಿಪಿ ನ್ಯೂಸ್ ಮಾತ್ರ ಶಾಸ್ತ್ರಿಯವರ ಆರೋಪಗಳನ್ನು ಪ್ರಶ್ನಿಸುವ ಅಥವಾ ಅವುಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದವು ಎಂದಿದ್ದರು.

ಯಾವುದೇ ಚಾನೆಲ್‌ಗಳು ಎನ್‌ಸಿಇಆರ್‌ಟಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿಲ್ಲ ಎಂದು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...