HomeUncategorizedಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

- Advertisement -
- Advertisement -

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅಯೋಧ್ಯೆ ಪೊಲೀಸ್ ವರಿಷ್ಠಾಧಿಕಾರಿಚಕ್ರಪಾಣಿ ತ್ರಿಪಾಠಿ, “ಜಿಲ್ಲೆಯಾದ್ಯಂತ ವಿವಿಧ ತಂಗುವಿಕೆ ಕೇಂದ್ರಗಳನ್ನು ಮಾಡಲಾಗಿದೆ, ಹೋಟೆಲ್‌ಗಳು ಸಂದರ್ಶಕರ ದಾಖಲೆಗಳನ್ನು ಸೂಕ್ತವಾಗಿ ದಾಖಲಿಸಬೇಕು” ಎಂದು ವಿನಂತಿಸಿದ್ದಾರೆ.

“ವಿವಿಧ ಸ್ಥಳಗಳಲ್ಲಿ ತಪಾಸಣೆ ವ್ಯವಸ್ಥೆ ಇದೆ… ಎಲ್ಲಾ ಹೋಟೆಲ್‌ಗಳು ಮತ್ತು ಧರ್ಮಶಾಲೆಗಳು ಅಲ್ಲಿ ತಂಗುವ ಸಂದರ್ಶಕರ ದಾಖಲೆಗಳನ್ನು ನಿರ್ವಹಿಸಲು ನಾವು ವಿನಂತಿಸಿದ್ದೇವೆ, ಅದನ್ನು ನಮ್ಮ ಅಧಿಕಾರಿಗಳು ಪರಿಶೀಲಿಸುತ್ತಾರೆ. ವಾಹನಗಳನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದೆ. ನಮ್ಮ ತಂಡಗಳು ಘಾಟ್‌ಗಳು ಮತ್ತು ಇತರ ಪ್ರದೇಶಗಳಲ್ಲಿಯೂ ಗಸ್ತು ತಿರುಗುತ್ತಿವೆ… ಭದ್ರತಾ ತಪಾಸಣೆ ಮತ್ತು ಕಣ್ಗಾವಲು ಹಾಗೂ ಜನಸಂದಣಿ ನಿರ್ವಹಣೆಗಾಗಿ ಪ್ರತ್ಯೇಕ ತಂಡಗಳಿವೆ” ಎಂದು ಅಧಿಕಾರಿ ಹೇಳಿದರು.

ಬಾಬರಿ ಮಸೀದಿ ಧ್ವಂಸಕ್ಕೆ 33ನೇ ವರ್ಷಾಚರಣೆಯಂದು ವಾರಣಾಸಿಯ ಶ್ರೀ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿಯೂ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ವಾರಣಾಸಿಯ ಉಪ ಪೊಲೀಸ್ ಆಯುಕ್ತ (ಅಪರಾಧ) ಸರವಣನ್ ತಗಮಾನಿ ಅವರು, ನಗರದಾದ್ಯಂತ ಸಂಪೂರ್ಣ ತಪಾಸಣೆ ನಡೆಸಲಾಗುತ್ತಿದೆ ಮತ್ತು ಭದ್ರತಾ ಸಿಬ್ಬಂದಿ ತೀವ್ರ ಜಾಗರೂಕರಾಗಿದ್ದಾರೆ ಎಂದು ತಿಳಿಸಿದರು.

“ವಾರಣಾಸಿ ಕಮಿಷನರೇಟ್‌ನ ಎಲ್ಲ ವಲಯದಲ್ಲಿರುವ ಎಲ್ಲರೂ ತೀವ್ರ ಜಾಗರೂಕರಾಗಿದ್ದಾರೆ… ವಾರಣಾಸಿ ನಗರ, ವಾರಣಾಸಿ ಜಂಕ್ಷನ್ ಮತ್ತು ಬನಾರಸ್ ರೈಲು ನಿಲ್ದಾಣಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಎಲ್ಲ 84 ಘಾಟ್‌ಗಳಲ್ಲಿ ಗಸ್ತು ತಿರುಗುವಿಕೆಯನ್ನು ನಿಯೋಜಿಸಲಾಗಿದೆ. ಅಸ್ಸಿ ಘಾಟ್, ನಮೋ ಘಾಟ್ ಮತ್ತು ದಶಾಶ್ವಮೇಧ ಘಾಟ್‌ಗಳಲ್ಲಿ ಸಂಜೆ ಆರತಿ ಸಮಯದಲ್ಲಿ ವಿಶೇಷ ಕಣ್ಗಾವಲು ನಡೆಸಲಾಗುತ್ತದೆ” ಎಂದು ಅಧಿಕಾರಿ ಹೇಳಿದರು.

“ಬಾಂಬ್ ಸ್ಕ್ವಾಡ್ ಮತ್ತು ಶ್ವಾನ ದಳವು ಆರ್‌ಪಿಎಫ್ ಮತ್ತು ಜಿಆರ್‌ಪಿ ಜೊತೆಗೆ ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಪರಿಶೀಲನೆ ನಡೆಸುತ್ತಿದೆ. ಬಸ್ ನಿಲ್ದಾಣಗಳಲ್ಲಿಯೂ ತಪಾಸಣೆ ನಡೆಯುತ್ತಿದೆ. ಕಾಶಿ ವಿಶ್ವನಾಥ ದೇವಸ್ಥಾನ, ಕಾಳ ಭೈರವ ದೇವಸ್ಥಾನ ಮತ್ತು ಸಂಕಟಮೋಚನ ಹನುಮಾನ್ ದೇವಸ್ಥಾನದಲ್ಲಿ ವಿಶೇಷ ಭದ್ರತೆಯನ್ನು ನಿಯೋಜಿಸಲಾಗಿದೆ” ಎಂದು ಅವರು ಹೇಳಿದರು.

ಬಾಬ್ರಿ ಮಸೀದಿ ಧ್ವಂಸ

ಡಿಸೆಂಬರ್ 6, 1992 ರಂದು ಅಯೋಧ್ಯೆಯಲ್ಲಿ ‘ಕರ ಸೇವಕರ’ ದೊಡ್ಡ ಗುಂಪಿನಿಂದ ಬಾಬರಿ ಮಸೀದಿ ಕೆಡವಲಾಯಿತು. ಬಾಂಬ್ರಿ ಮಸೀದಿ ಧ್ವಂಸದ ಬಳಿಕ ಅಯೋಧ್ಯೆಯ ಅನೇಕ ಮುಸ್ಲಿಂ ನಿವಾಸಗಳನ್ನು ದೋಚಿದ ನಂತರ ಸುಟ್ಟುಹಾಕಲಾಯಿತು. ದೇಶದ ವಿವಿಧ ಭಾಗಗಳಲ್ಲಿ ಗಲಭೆಗಳು ಭುಗಿಲೆದ್ದವು, ಇದರ ಪರಿಣಾಮವಾಗಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...