Homeಮುಖಪುಟರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

- Advertisement -
- Advertisement -

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಶನಿವಾರ (ಡಿಸೆಂಬರ್ 6) ಪತ್ರ ಬರೆದಿದ್ದಾರೆ.

ವಿಮಾನ ಪ್ರಯಾಣಿಕರ ಸುರಕ್ಷತೆಗಾಗಿ ತಂದ ನಿಯಮವನ್ನು ವಿಮಾನಯಾನ ಸಂಸ್ಥೆಗಳು ತಮ್ಮ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡವರು, ಜನರಿಗೆ ಅತಿ ಹೆಚ್ಚು ದರ ವಿಧಿಸಿದವು. ಆ ನಂತರ ನಿಯಮವೇ ವಿಫಲವಾದಾಗ ಅದನ್ನು ರದ್ದುಗೊಳಿಸಿ ಸರ್ಕಾರ ಮತ್ತು ವಿಮಾನಯಾನ ನಿಯಂತ್ರಣ ಪ್ರಾಧಿಕಾರಗಳು ತಮ್ಮ ದೊಡ್ಡ ತಪ್ಪನ್ನು ಮುಚ್ಚಿಹಾಕಿದವು ಎಂಬುದು ಜಾನ್ ಬ್ರಿಟ್ಟಾಸ್ ಅವರ ಮುಖ್ಯ ಆರೋಪವಾಗಿದೆ.

“ದೇಶದ ಅತಿ ದೊಡ್ಡ ವಿಮಾನಯಾನ ಕಂಪನಿಯಾದ ಇಂಡಿಗೋ (ಇದು ದೇಶೀಯ ಮಾರುಕಟ್ಟೆಯಲ್ಲಿ 63-65% ಪಾಲನ್ನು ಹೊಂದಿದೆ) ಇದ್ದಕ್ಕಿದ್ದಂತೆ ಸಾವಿರಾರು ವಿಮಾನಗಳನ್ನು ರದ್ದುಗೊಳಿಸಿದ್ದರಿಂದ ಅಥವಾ ತಡಮಾಡಿದ್ದರಿಂದ ದೇಶದಾದ್ಯಂತ ವಿಮಾನ ಪ್ರಯಾಣ ವ್ಯವಸ್ಥೆ ಸಂಪೂರ್ಣವಾಗಿ ತತ್ತರಿಸಿ ಹೋಯಿತು”

“ಒಂದೇ ಖಾಸಗಿ ಕಂಪನಿಗೆ ಇಷ್ಟೊಂದು ದೊಡ್ಡ ಮಾರುಕಟ್ಟೆ ಪ್ರಾಬಲ್ಯ (monopoly) ಇರುವುದರಿಂದ, ಆ ಒಂದು ಕಂಪನಿಯ ವೈಫಲ್ಯವೇ ಒಟ್ಟಾರೆಯಾಗಿ ದೇಶದ ವಿಮಾನಯಾನ ವ್ಯವಸ್ಥೆಯ ವೈಫಲ್ಯವಾಗಿ ಪರಿಣಮಿಸಿತು”

“ಇದರಿಂದ ಸಾವಿರಾರು ಪ್ರಯಾಣಿಕರು ವಿಮಾನ ನಿಲ್ದಾಣದಲ್ಲೇ ನೆಲದಲ್ಲಿ ಮಲಗುವ ಪರಿಸ್ಥಿತಿ ಉಂಟಾಯಿತು. ತೀವ್ರ ಆನಾರೋಗ್ಯದಿಂದ ಇದ್ದ ತಮ್ಮ ಸಂಬಂಧಿಕರನ್ನು ತುರ್ತಾಗಿ ನೋಡಲು ಹೊರಟವರು, ಮೃತ ಸಂಬಂಧಿಕರ ಮುಖವನ್ನು ಕೊನೆಯದಾಗಿ ಕಾಣಲು ತೆರಳುತ್ತಿದ್ದವರು, ಆಪ್ತರ ಮದುವೆಯಲ್ಲಿ ಪಾಲ್ಗೊಳ್ಳಲು ಹೊರಟವರು, ಉದ್ಯೋಗ ಸಂದರ್ಶನಕ್ಕೆ ಹಾಜರಾಗಲು ಅಥವಾ ಕೆಲಸದ ಮೊದಲ ದಿನ ಕಚೇರಿಗೆ ತೆರಳಲು ಹೊರವರು ಸೇರಿದಂತೆ ಸಾವಿರಾರು ಜನರು ಸಂಕಷ್ಟಗಳನ್ನು ಎದುರಿಸಿದರು. ಹಾಗಾಗಿ, ವಿಮಾನಯಾನ ಬಿಕ್ಕಟ್ಟಿನಿಂದ ಉಂಟಾದ ಮಾನವೀಯ ನೋವು ಮತ್ತು ಆರ್ಥಿಕ ನಷ್ಟ ಎರಡೂ ಎಂದಿಗೂ ಕಂಡಿರದಷ್ಟು ದೊಡ್ಡದು ಮತ್ತು ಸಾಕ್ಷ್ಯಕ್ಕೆ ನಿಲುಕದ್ದು” ಎಂದು ಜಾನ್ ಬ್ರಿಟ್ಟಾಸ್ ಪ್ರಧಾನಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈ ಒತ್ತಡವನ್ನು ಮೊದಲೇ ಊಹಿಸಬಹುದಾಗಿದ್ದರೂ, ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದ ನಂತರ, ಮೊದಲು ಕಟ್ಟುನಿಟ್ಟಾಗಿ ಜಾರಿಗೊಳಿಸಿದ್ದ ಸುರಕ್ಷಾ ನಿಯಮಗಳನ್ನೇ ತುರ್ತಾಗಿ ದುರ್ಬಲಗೊಳಿಸಲಾಯಿತು ಅಥವಾ ಹಿಂತೆಗೆದುಕೊಳ್ಳಲಾಯಿತು. ಇದು ಗಂಭೀರವಾದ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ: ಪ್ರಯಾಣಿಕರ ಸುರಕ್ಷತೆಯನ್ನು ಕೇವಲ ವ್ಯಾಪಾರಿ ಲಾಭ ಮತ್ತು ಸೌಲಭ್ಯಕ್ಕಾಗಿ ತ್ಯಾಗ ಮಾಡಲಾಯಿತೇ? ಎಂದು ಬ್ರಿಟ್ಟಾಸ್ ಪ್ರಶ್ನಿಸಿದ್ದಾರೆ.

ವಿಮಾನಯಾನವನ್ನು ನೋಡಿಕೊಳ್ಳುವ ಸರ್ಕಾರದ ನಿಯಂತ್ರಣ ಸಂಸ್ಥೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿಲ್ಲ. ಎರಡು ದೊಡ್ಡ ವಿಮಾನ ಕಂಪನಿಗಳು ಬಹುತೇಕ ಎಲ್ಲಾ ವಿಮಾನ ಸೇವೆಗಳನ್ನು ತಮ್ಮ ಕಬಳಿಕೆಯಲ್ಲಿ ಇಟ್ಟುಕೊಂಡಿವೆ, ಇದರಿಂದ ಇತರ ಕಂಪನಿಗಳಿಗೆ ಸ್ಪರ್ಧೆ ಮಾಡುವ ಅವಕಾಶ ಕಡಿಮೆಯಾಗುತ್ತಿದೆ.

ಅದೇ ಸಮಯದಲ್ಲಿ, ಹಲವಾರು ಪ್ರಮುಖ ವಿಮಾನ ನಿಲ್ದಾಣಗಳನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗಿ, ಅವುಗಳನ್ನು ವ್ಯವಹಾರದಂತೆ ನಡೆಸಲಾಗುತ್ತಿದೆ. ಇದರ ಪರಿಣಾಮವಾಗಿ ಹೊಸ ವಿಮಾನ ನಿಲ್ದಾಣಗಳು ಅಥವಾ ಚಿಕ್ಕ ಪ್ರಾದೇಶಿಕ ವಿಮಾನ ನಿಲ್ದಾಣಗಳಿಗೆ ಬೆಳೆಯಲು ಅವಕಾಶ ಸಿಗುತ್ತಿಲ್ಲ.

“ಇದಲ್ಲದೆ, ವಿಮಾನಗಳ ಸುರಕ್ಷತಾ ನಿಯಮಗಳನ್ನು ಕೂಡ ಸಡಿಲಗೊಳಿಸಲಾಗುತ್ತಿದೆ. ವಿಮಾನಯಾನ ಕಂಪನಿಗಳು ಜನರಿಂದ ಹೆಚ್ಚು ಹಣ ವಸೂಲಿ ಮಾಡಿ ಲಾಭ ಪಡೆಯುತ್ತಿದ್ದರೂ, ಸರ್ಕಾರ ಇದನ್ನು ತಡೆಯಲು ಕ್ರಮಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಅಧಿಕಾರವೂ ಇದೆ, ಸಂಸತ್ ಸಮಿತಿಯ ಸಲಹೆಯೂ ಇದೆ. ಆದರೂ, ಅವರು ಸರಿಯಾದ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ” ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಆರೋಪಿಸಿದ್ದಾರೆ.

“ವಿಮಾನಯಾನ ಕ್ಷೇತ್ರದಲ್ಲಿ ಪ್ರಸ್ತುತ ಇರುವ ಸಮಸ್ಯೆಗಳು ತುಂಬಾ ಗಂಭೀರವಾದದ್ದು, ಅದನ್ನು ಆಂತರಿಕ ಪರಿಶೀಲನೆಗಳು ಅಥವಾ ಸಲಹಾ ಪತ್ರಗಳ ಮೂಲಕ ಸರಿಪಡಿಸುವುದು ಸಾಧ್ಯವಿಲ್ಲ. ಸರ್ಕಾರದ ಮೇಲಿನ ಜನರ ನಂಬಿಕೆ ಉಳಿಯಬೇಕಾದರೆ, ಸಂಪೂರ್ಣವಾಗಿ ಸ್ವತಂತ್ರ, ಪಾರದರ್ಶಕ ಮತ್ತು ನಿಗದಿತ ಅವಧಿಯಲ್ಲಿ ಮುಗಿಯುವ ದೊಡ್ಡ ತನಿಖೆಯನ್ನು ಆರಂಭಿಸಬೇಕು. ಈ ತನಿಖೆಗೆ ನಿಯಂತ್ರಣ ಇಲಾಖೆಯ ದಾಖಲೆಗಳು, ವಿಮಾನಯಾಣ ಕಂಪನಿಗಳು ಎಷ್ಟು ಸಿದ್ಧವಾಗಿದ್ದವು ಎಂಬ ಮಾಹಿತಿಗಳು, ಹಾಗೂ ಟಿಕೆಟ್ ದರ ಏರಿಕೆಯ ವಿವರಗಳು ಎಲ್ಲವೂ ಲಭ್ಯವಾಗಬೇಕು. ಈ ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ಪರಿಶೀಲಿಸಲು ಒಂದು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ನ್ಯಾಯಾಂಗ ತನಿಖಾ ಆಯೋಗವನ್ನು ರಚಿಸಬೇಕು. ಜೊತೆಗೆ, ದೊಡ್ಡ ಪ್ರಮಾಣದ ವಿಳಂಬಗಳು ಅಥವಾ ಸೇವಾ ವ್ಯತ್ಯಯಗಳು ಸಂಭವಿಸಿದಾಗ ಪ್ರಯಾಣಿಕರಿಗೆ ಸ್ವಯಂ ಪರಿಹಾರ, ನ್ಯಾಯಯುತ ಸೇವೆ ಮತ್ತು ಪಾರದರ್ಶಕ ಟಿಕೆಟ್ ದರ ದೊರಕುವಂತೆ ಮಾಡಲು ‘ಪ್ರಯಾಣಿಕರ ಹಕ್ಕುಗಳ ಕಾಯ್ದೆ’ಯನ್ನು ತಕ್ಷಣ ಜಾರಿಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸಂಸದ ಜಾನ್ ಬ್ರಿಟ್ಟಾಸ್ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...