Homeಅಂತರಾಷ್ಟ್ರೀಯಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

- Advertisement -
- Advertisement -

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ.

ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್ ಆಫ್ ದಿ ನೇಟಿವಿಟಿಯ ಹೊರಗೆ ಕ್ರಿಸ್‌ಮಸ್ ಮರವನ್ನು ಬೆಳಗಿಸಲಾಗಿದೆ. ಗಾಝಾದ ನರಮೇಧದ ನೋವಿನಿಂದ ಕಳೆದ ಎರಡು ವರ್ಷಗಳಲ್ಲಿ ಮಂಕಾಗಿದ್ದ ಜನರ ಮನಸ್ಸಿನಲ್ಲಿ, ಆ ಬೆಳಕು ಈ ಕೊಂಚ ಭರವಸೆ ಮತ್ತು ಸಮೃದ್ಧಿಯ ಕಿರಣವನ್ನು ಮೂಡಿಸಿದೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ.

ಈ ಬಾರಿ ಕ್ರಿಸ್‌ಮಸ್‌ ಮರವನ್ನು ಬೆಳಗಿದ್ದರೂ, ಜನರಿಲ್ಲಿ ಈ ಹಿಂದಿನ ಸಂಭ್ರಮ ಇಲ್ಲ. ಜನರು ಕುಣಿದು ಕುಪ್ಪಳಿಸುವ ಮೂಲಕ ಹಬ್ಬದ ಸಂಭ್ರವನ್ನು ಅನುಭವಿಸುತ್ತಿದ್ದರು. ಆದರೆ, ಈ ಬಾರಿ ಕೇವಲ ಶಾಂತಿಯುತ ಪ್ರಾರ್ಥನೆಯಲ್ಲಿ ಮಾತ್ರ ತೊಡಗಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

ಗಾಝಾ ಮತ್ತು ಪಶ್ಚಿಮ ದಂಡೆಯಲ್ಲಿ ಇಸ್ರೇಲ್ ನಡೆಸಿದ ಸತತ ಎರಡು ವರ್ಷಗಳ ನರಮೇಧ ಮತ್ತು ಈಗಲೂ ಪಶ್ಚಿಮ ದಂಡೆಯಲ್ಲಿ ನಡೆಸುತ್ತಿರುವ ದೌರ್ಜನ್ಯದಿಂದ ಬೆಥ್ಲೆಹೆಮ್‌ಗೆ ಭೇಟಿ ನೀಡುವ ಜನರ ಸಂಖ್ಯೆ ಕಡಿಮೆಯಾಗಿದೆ. ಇದು ಅಲ್ಲಿನ ಪ್ರವಾಸೋದ್ಯಮದ ಮೇಲೆ ದೊಡ್ಡ ಪರಿಣಾಮ ಬೀರಿದೆ. ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದು ವರದಿ ಹೇಳಿದೆ.

ನಿರುದ್ಯೋಗವು ಶೇಕಡ 34ರಷ್ಟಿದೆ ಮತ್ತು ಬಡತನ ರೇಖೆಯ ಕೆಳಗೆ ವಾಸಿಸುವವರ ಸಂಖ್ಯೆ ಹೆಚ್ಚಾಗಿದೆ. ಶೇಕಡ 40ಕ್ಕೂ ಹೆಚ್ಚು ಜನರು ಜೀವಿಸಲು ಕಷ್ಟಪಡುತ್ತಿದ್ದಾರೆ ಎಂದು ಅಲ್‌-ಜಝೀರಾ ವರದಿ ತಿಳಿಸಿದೆ.

“ಕ್ರಿಸ್‌ಮಸ್ ಹೇಗಿರಬೇಕು ಎಂಬ ಸಂದೇಶವನ್ನು ನಾವು ಜಗತ್ತಿಗೆ ಸಾರುತ್ತೇವೆ. ಈ ವರ್ಷ, ಕ್ರಿಸ್‌ಮಸ್ ಶಾಂತಿಯುತವಾಗಿದ್ದರೆ, ಅದು ಇಡೀ ಜಗತ್ತಿಗೆ ಒಳ್ಳೆಯ ಸಂದೇಶವನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಸ್ಥಳೀಯ ಆಭರಣ ವಿನ್ಯಾಸಕಿ ನಾಡಿಯಾ ಹಜ್‌ಬೌನ್ ಹೇಳಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಾಝಾದಲ್ಲಿ ಇಸ್ರೇಲ್ ನರಮೇಧ ನಡೆಸುತ್ತಿದ್ದ ಹಿನ್ನೆಲೆ, ಕಳೆದ ಎರಡು ವರ್ಷಗಳ ಕಾಲ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್ ಸಂಭ್ರಮಾಚರಣೆ ಕಳೆಗುಂದಿತ್ತು. ನಮ್ಮ ಸಹೋದರರು ಸಾಯುತ್ತಿರುವಾಗ ನಾವು ಹೇಗೆ ಸಂಭ್ರಮಪಡಲಿ ಎಂದು ಮಾನವೀಯ ಮನಸ್ಸುಳ್ಳು ಬೆಥ್ಲೆಹೆಮ್‌ನ ಜನರು ಪ್ರಶ್ನಿಸಿದ್ದರು. ಬೀದಿಗಿಳಿದು ಇಸ್ರೇಲ್‌ನ ಆಕ್ರಮಣವನ್ನು ಪ್ರತಿಭಟಿಸಿದ್ದರು.

ಕ್ಯಾಥೋಲಿಕ್ ಪಂಗಡದ ಪರಮೋಚ್ಚ ನಾಯಕರಾಗಿದ್ದ ದಿವಂಗತ ಪೋಪ್ ಫ್ರಾನ್ಸಿಸ್ ಅವರು ಇಸ್ರೇಲ್ ಆಕ್ರಮಣವನ್ನು ತೀವ್ರವಾಗಿ ಖಂಡಿಸಿದ್ದರು. ಗಾಝಾ ಜನತೆಯ ಜೊತೆ ನಿಲ್ಲುವಂತೆ ಜಾಗತಿಕ ಕ್ರೈಸ್ತ ಸಮುದಾಯಕ್ಕೆ ಕರೆ ಕೊಟ್ಟಿದ್ದರು. ಕದನ ವಿರಾಮಕ್ಕೆ ಆಗ್ರಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...