Homeಮುಖಪುಟಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

- Advertisement -
- Advertisement -

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ ‘ಗಂಭೀರ ತಪ್ಪು’ ಮಾಡಿದ್ದಾರೆ ಎಂದು ಹೇಳಿದೆ.

ವಿಶ್ವವಿದ್ಯಾನಿಲಯದ ವೃತ್ತಿ ಅಭಿವೃದ್ಧಿ ಕೇಂದ್ರದಲ್ಲಿ (ಸಿಡಿಸಿ) ಕೆಲಸ ಮಾಡುತ್ತಿದ್ದ ಲೋರಾ ಅವರು, ಕಳೆದ ಮೇ ತಿಂಗಳಲ್ಲಿ ಭಾರತೀಯ ಸೇನೆ ಅಪರೇಷನ್ ಸಿಂಧೂರ್ ಕೈಗೊಂಡಾಗ ಶಾಂತಿಗಾಗಿ ಕರೆ ನೀಡುವ ಸರಣಿ ವಾಟ್ಸಾಪ್ ಸ್ಟೇಟಸ್‌ಗಳನ್ನು ಪೋಸ್ಟ್ ಮಾಡಿದ್ದರು. ಆ ಬಳಿಕ ವಿದ್ಯಾರ್ಥಿಗಳು ಅವರನ್ನು ಅಪಹಾಸ್ಯ ಮಾಡಲು ಶುರು ಮಾಡಿದ್ದರು ಎಂದು ಆರೋಪಿಸಲಾಗಿದೆ.

“ನಮಗೆ ದೊರೆತ ಲೋರಾ ಅವರ ವಜಾ ಆದೇಶದಲ್ಲಿ, ಎಸ್‌ಆರ್‌ಎಂಐಎಸ್‌ಟಿಯ ಸಹಾಯಕ ಪ್ರಾಧ್ಯಾಪಕಿ ಎಂಬ ಹೆಸರಿನಲ್ಲಿ ಲೋರಾ ಸಶಸ್ತ್ರ ಪಡೆಗಳನ್ನು ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದಾರೆ. ಆದ್ದರಿಂದ, ಅವರು ಸಂಸ್ಥೆಯಲ್ಲಿ ತಮ್ಮ ಕೆಲಸ ಮುಂದುವರಿಸಲು ಅನರ್ಹರಾಗಿದ್ದಾರೆ ಮತ್ತು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂಬುವುದಾಗಿ ಹೇಳಲಾಗಿದೆ” ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ಲೋರಾ ಅವರ ಪೋಸ್ಟ್ ಕುರಿತು ಆಂತರಿಕ ವಿಚಾರಣಾ ಸಮಿತಿಯನ್ನು ಎಸ್‌ಆರ್‌ಎಂಐಎಸ್‌ಟಿಯ ವಿದ್ಯಾರ್ಥಿ ವ್ಯವಹಾರಗಳ ನಿರ್ದೇಶಕಿ ಡಾ. ನಿಶಾ ಅಶೋಕನ್ ಅವರ ನೇತೃತ್ವದಲ್ಲಿ ರಚಿಸಲಾಗಿತ್ತು. ವಿದ್ಯಾರ್ಥಿ ವ್ಯವಹಾರಗಳ ಉಪನಿರ್ದೇಶಕ ಡಾ. ಪ್ರಿನ್ಸ್ ಕಲ್ಯಾಣಸುಂದರಂ ಸಮಿತಿಯ ನಿರೂಪಕ ಅಧಿಕಾರಿಯಾಗಿದ್ದರು.

ಜುಲೈ 15ರಿಂದ ಸೆಪ್ಟೆಂಬರ್ 26 ರವರೆಗೆ ಕಟ್ಟಂಕುಲತ್ತೂರ್ ಎಸ್‌ಆರ್‌ಎಂ ಕ್ಯಾಂಪಸ್‌ನಲ್ಲಿ ವಿಚಾರಣೆ ನಡೆದಿದೆ. ಸಮಿತಿಯು ಅಕ್ಟೋಬರ್ 30ರಂದು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ತನ್ನ ವರದಿಯನ್ನು ಸಲ್ಲಿಸಿದೆ.

ದಲಿತ ಕ್ರಿಶ್ಚಿಯನ್ ಆಗಿರುವ ಲೋರಾ ಅವರ ವಾಟ್ಸಾಪ್ ಸ್ಟೇಟಸ್, ಫೋನ್ ನಂಬರ್ ಮತ್ತು ಫೋಟೋ ಬಲಪಂಥೀಯ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಿಗೆ ಸೋರಿಕೆಯಾದ ನಂತರ, ಅವರನ್ನು ಮೇ 8ರಂದು ಮೊದಲು ಅಮಾನತುಗೊಳಿಸಲಾಗಿತ್ತು.

ಲೋರಾ ಅವರಿಗೆ ಆನ್‌ಲೈನ್ ನಿಂದನೆ, ಬೆದರಿಕೆ ಫೋನ್ ಕರೆಗಳು ಮತ್ತು ಕೊಲೆ ಬೆದರಿಕೆಗಳು ಬಂದಿವೆ. ಅವರಿಗೆ ರಾಷ್ಟ್ರವಿರೋಧಿ ಎಂದು ಹಣೆಪಟ್ಟಿ ಕಟ್ಟಲಾಗಿದೆ ಮತ್ತು ಭಾರತೀಯ ಸೇನೆಯ ವಿರುದ್ಧ ಮಾತನಾಡಿದ ಆರೋಪ ಹೊರಿಸಲಾಗಿದೆ. ಇದಲ್ಲದೆ, ತನ್ನನ್ನು ತಾನು ರಕ್ಷಿಸಿಕೊಳ್ಳಲು ಚೆನ್ನೈನಲ್ಲಿರುವ ಮನೆಯನ್ನು ಖಾಲಿ ಮಾಡಿ ಸ್ವಂತ ಊರು ಕಲ್ಲಕುರಿಚಿಗೆ ಹಿಂತಿರುಗುವಂತೆ ಒತ್ತಾಯಿಸಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

ಮೇ 7, 2025ರಂದು ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಇದ್ದಾಗ, ಲೋರಾ ಅವರು ಯುದ್ದೋನ್ಮಾದವನ್ನು ತೀವ್ರವಾಗಿ ವಿರೋಧಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಯುದ್ಧದಲ್ಲಿ ಮನುಷ್ಯರು ಸಾಯುತ್ತಾರೆ, ಕುಟುಂಬಗಳು ಒಡೆಯುತ್ತವೆ, ಆ ಮಾನವೀಯ ನಷ್ಟವನ್ನು ಮರೆಯಬೇಡಿ ಎಂದು ಜನರಿಗೆ ಮನವಿ ಮಾಡಿದ್ದರು. ಯುದ್ಧ ಪ್ರಚಾರ ಹೇಗೆ ಜನರನ್ನು ಮೋಸ ಮಾಡುತ್ತದೆ ಎಂಬುದನ್ನು ಹೇಳುವ ಜಾರ್ಜ್ ಆರ್ವೆಲ್ ಅವರ ಪ್ರಸಿದ್ಧ ಉಲ್ಲೇಖವನ್ನು ಅವರು ಹಂಚಿಕೊಂಡಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಭಾರತೀಯ ಸೇನಾಧಿಕಾರಿಗಳ ಹೆಸರಿನಲ್ಲಿ ಮಾಡಿದ ನಕಲಿ ಖಾತೆಗಳನ್ನು ಗುರುತಿಸಿ, ಇವು ನಕಲಿ ಖಾತೆಗಳು, ಇವುಗಳ ಪೋಸ್ಟ್‌ಗಳನ್ನು ಶೇರ್ ಮಾಡಬೇಡಿ, ಯುದ್ಧದ ಉನ್ಮಾದವನ್ನು ಹೆಚ್ಚಿಸಬೇಡಿ ಎಂದು ಎಲ್ಲರಿಗೂ ಎಚ್ಚರಿಕೆ ನೀಡಿದ್ದರು. ಸತ್ಯ-ಅಸತ್ಯವನ್ನು ಪರಿಶೀಲಿಸಿ (ಫ್ಯಾಕ್ಟ್-ಚೆಕ್) ಸರಿಯಾದ ಮಾಹಿತಿಯನ್ನು ಮಾತ್ರ ಹರಡಿ ಎಂದು ಎಂದು ಕೋರಿದ್ದರು ಎನ್ನಲಾಗಿದೆ.

ಲೋರಾ ಅವರು ಒಟ್ಟು 12 ಸಂದೇಶಗಳನ್ನು ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇವೆಲ್ಲವೂ ಯುದ್ಧದ ವಿರುದ್ಧ ಮತ್ತು ಶಾಂತಿಯ ಪರವಾಗಿದ್ದವು. ಆದರೆ, ಅವುಗಳಲ್ಲಿ ಕೇವಲ ಎರಡು ಸಂದೇಶಗಳು ಮಾತ್ರ ಸಾರ್ವಜನಿಕವಾಗಿ (ಸ್ಕ್ರೀನ್‌ಶಾಟ್ ಆಗಿ) ಹರಿದಾಡಿದ್ದವು. ಒಂದು ಸಂದೇಶದಲ್ಲಿ ಆರ್ಥಿಕ ಸ್ಥಗಿತದಿಂದ ಹಿಡಿದು ಜೀವಹಾನಿಯವರೆಗೆ ಯುದ್ಧದ ನಿಜ ಜೀವನದ ಪರಿಣಾಮಗಳನ್ನು ಪಟ್ಟಿ ಮಾಡಿದ್ದರು. ಮತ್ತು ಇನ್ನೊಂದು ಸಂದೇಶದಲ್ಲಿ ಯುದ್ದದಲ್ಲಿ ನಾಗರಿಕರ ಹತ್ಯೆಯನ್ನು ಟೀಕಿಸಿದ್ದರು. ಅದನ್ನು ಧೈರ್ಯಕ್ಕಿಂತ ಹೇಡಿತನ ಎಂದು ಕರೆದಿದ್ದರು.

ಆಂತರಿಕ ವಿಚಾರಣೆಯ ಸಮಯದಲ್ಲಿ ಲೋರಾ ವಿರುದ್ಧ 5 ಆರೋಪಗಳನ್ನು ಹೊರಿಸಲಾಗಿದೆ ಮತ್ತು ಜೂನ್ 16ರಂದು ಅವರ ವಿರುದ್ಧ ಚಾರ್ಜ್ ಮೆಮೊ ಹೊರಡಿಸಲಾಗಿತ್ತು. ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಭಾರತದ ಸಶಸ್ತ್ರ ಪಡೆಗಳ ವಿರುದ್ಧ ಪೋಸ್ಟ್ ಹಾಕಿದ್ದಾರೆ ಎಂದು ಚಾರ್ಜ್ ಮೆಮೊದಲ್ಲಿ ಆರೋಪಿಸಲಾಗಿತ್ತು. ರಾಷ್ಟ್ರೀಯ ಹಿತಾಸಕ್ತಿಗಳಿಗೆ ವಿರುದ್ಧವಾಗಿ ವರ್ತಿಸಿದ್ದಾರೆ ಮತ್ತು ದೇಶಭಕ್ತಿಯ ಕೊರತೆಯನ್ನು ಹೊಂದಿದ್ದಾರೆ ಎಂಬ ಆರೋಪವನ್ನೂ ಅವರ ಮೇಲೆ ಹೊರಿಸಲಾಗಿತ್ತು.

ಲೋರಾ ಅವರ ಕೃತ್ಯವು ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾದ ಕ್ರಮವಾಗಿದೆ ಮತ್ತು ಸಂಸ್ಥೆಯ ಸೌಹಾರ್ದಯುತ ವಾತಾವರಣ ಮತ್ತು ಸುಗಮ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತದೆ. ಅಲ್ಲದೆ, ಸಂಸ್ಥೆಯ ಖ್ಯಾತಿಗೆ ಹಾನಿಕಾರಕ ಕಾನೂನು ಪರಿಣಾಮಗಳನ್ನು ಆಹ್ವಾನಿಸುತ್ತದೆ ಮತ್ತು ಇದು ದೊಡ್ಡ ದುಷ್ಕೃತ್ಯವಾಗಿದೆ. ಇದಲ್ಲದೆ, ಅವರು ‘ಕ್ರಿಮಿನಲ್’ ಆಗಿರುವ ಸಮಾಜವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆಂದು ಆರೋಪ ಹೊರಿಸಲಾಗಿದೆ. ಇದನ್ನು ಸಮಿತಿಯು ‘ಪ್ರಮುಖ ದುಷ್ಕೃತ್ಯ’ ಎಂದು ಪರಿಗಣಿಸಿದೆ.

ಲೋರಾ ಅವರು ಈ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ. ನಾನು ರಾಷ್ಟ್ರ ವಿರೋಧಿ ಸ್ಟೇಟಸ್ ಹಾಕಿಲ್ಲ, ಅವುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿಶ್ವವಿದ್ಯಾನಿಲಯಕ್ಕೆ ತಾನು ಅಪಖ್ಯಾತಿ ತಂದಿದ್ದೇನೆ ಎಂಬ ಆರೋಪವನ್ನು ತಳ್ಳಿ ಹಾಕಿದ್ದು, ನನ್ನ ಪೋಸ್ಟ್‌ಗಳಲ್ಲಿ ನಾನು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕಿ ಎಂದು ಗುರುತಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನಾನು ಸ್ಟೇಟಸ್ ಪೋಸ್ಟ್ ಮಾಡಿದ ವಾಟ್ಸಾಪ್ ಸಂಖ್ಯೆ ವೈಯಕ್ತಿಕವಾಗಿದ್ದು, ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿಲ್ಲ ಎಂದು ಹೇಳಿದ್ದಾರೆ. ನನ್ನ ಹೇಳಿಕೆಗಳನ್ನು ಅಥವಾ ಸ್ಟೇಟಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿಲ್ಲ, ಬದಲಿಗೆ ತಾತ್ಕಾಲಿಕ ಸ್ವರೂಪದ ವೈಯಕ್ತಿಕ ವಾಟ್ಸಾಪ್ ಸ್ಟೇಟಸ್ ಪೋಸ್ಟ್ ಮಾಡಿದ್ದೆ ಎಂದು ತಿಳಿಸಿದ್ದಾರೆ.

ಲೋರಾ ಅವರ ವಿರುದ್ಧ ಹೊರಿಸಲಾಗಿದ್ದ ಒಟ್ಟು 5 ಆರೋಪಗಳೂ ಸಾಬೀತಾಗಿವೆ. ಎಲ್ಲಾ ಆರೋಪಗಳಿಗೂ ಒಂದೇ ರೀತಿಯ ತೀರ್ಪು ನೀಡಲಾಗಿದೆ ಎಂದು ಆಂತರಿಕ ತನಿಖಾ ಸಮಿತಿ ಹೇಳಿದೆ.

ಈ ಪ್ರಕರಣದಲ್ಲಿ ಮೇಲ್ಮನವಿ ಪ್ರಾಧಿಕಾರವಾಗಿರುವ ಉಪಕುಲಪತಿಗಳಿಗೆ ಮೇಲ್ಮನವಿ ಸಲ್ಲಿಸಲು ಎಸ್‌ಆರ್‌ಎಂ ವಿಶ್ವವಿದ್ಯಾಲಯವು ಲೋರಾ ಅವರಿಗೆ 30 ದಿನಗಳ ಕಾಲಾವಕಾಶ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...