Homeಮುಖಪುಟಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

- Advertisement -
- Advertisement -

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ ಭಾವಚಿತ್ರದ ಪಾದಗಳನ್ನು ಮುಟ್ಟುವಂತೆ ಒತ್ತಾಯಿಸಿದ್ದಾರೆ.

ವಿವಾದಿತ ವೀಡಿಯೊ ವೈರಲ್ ಆದ ಬಳಿಕ, ಕಾಲೇಜಿನಲ್ಲಿ ಬಹುಧರ್ಮೀಯ ನಿಯೋಗದ ರಚನೆಗೆ ಕಾರಣವಾಯಿತು. ಯಾವುದೇ ತರಗತಿಗೆ ಅಡ್ಡಿಪಡಿಸದೆ ಪ್ರಾರ್ಥನೆ ಸಲ್ಲಿಸಿದರೂ ವಿದ್ಯಾರ್ಥಿಗಳು ಮಾನಸಿಕವಾಗಿ ತೊಂದರೆಗೊಳಗಾಗಿದ್ದರಿಂದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.

ಥಾಣೆಯ ಕಲ್ಯಾಣ್ ಪೂರ್ವದ ಐಡಿಯಲ್ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನವೆಂಬರ್ 21 ರಂದು ಘಟನೆ ನಡೆದಿದೆ. ವಿದ್ಯಾರ್ಥಿಗಳ ಪ್ರಾರ್ಥನೆಗಾಗಿ ಖಾಲಿ ತರಗತಿಯನ್ನು ಬಳಸಲು ಅನುಮತಿಸಲಾಗಿತ್ತು. ಆದರೆ, ಸಹ ವಿದ್ಯಾರ್ಥಿಯೊಬ್ಬರು ಪ್ರಾರ್ಥನೆ ಮಾಡುವುದನ್ನು ರೆಕಾರ್ಡ್ ಮಾಡಿ, ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಿದ್ದಾನೆ. ಇದರಿಂದಾಗಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗದಳ ಕಾರ್ಯಕರ್ತರು ಕ್ಯಾಂಪಸ್‌ಗೆ ಪ್ರವೇಶಿಸಿ ವಿದ್ಯಾರ್ಥಿಗಳನ್ನು ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ. ಶೈಕ್ಷಣಿಕ ಚಟುವಟಿಕೆಯ ಮೇಲೆ ಯಾವುದೇ ಪರಿಣಾಮ ಬೀರದಿದ್ದರೂ ಸಹ ವಿವಾದ ಸೃಷ್ಟಿಸಿದ್ದಾರೆ ಎಂದು ‘ಮಕ್ತೂಬ್ ಮೀಡಿಯಾ’ ವರದಿ ಮಾಡಿದೆ.

ಶೈಕ್ಷಣಿಕ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಈ ಘಟನೆಯಿಂದಾಗಿ, ಸಾಮಾಜಿಕ ಕಾರ್ಯಕರ್ತ ದುರ್ಗೇಶ್ ಗಾಯಕ್ವಾಡ್, ಸಮೀರ್ ಖುರೇಷಿ, ಮೊಯಿನ್ ಡಾನ್, ಸಾಲಿಮ್ ಶೇಖ್, ಆನಂದ್ ಕುಮಾರ್, ಅಶ್ಫಾಕ್ ಶೇಖ್, ಜಮೀರ್ ಖಾನ್, ಅಲ್ತಮಾಶ್ ಕಾರ್ಟೆ ಮತ್ತು ಶೆಹಜಾದ್ ಸಾಗರ್ ಅವರು ನವೆಂಬರ್ 27 ರಂದು ಕಾಲೇಜು ಆಡಳಿತಾಧಿಕಾರಿಗಳನ್ನು ಭೇಟಿ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ವಿದ್ಯಾರ್ಥಿಗಳನ್ನು ಬೆದರಿಸಿದವರ ವಿರುದ್ಧ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್‌) ಸಲ್ಲಿಸಲು, ವೀಡಿಯೊ ರೆಕಾರ್ಡಿಂಗ್ ಮತ್ತು ಪ್ರಸಾರಕ್ಕೆ ಕಾರಣವಾದ ವಿದ್ಯಾರ್ಥಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಒತ್ತಾಯಿಸಿ, ಬಾಧಿತ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮತ್ತು ಎಲ್ಲಾ ಧರ್ಮದ ವಿದ್ಯಾರ್ಥಿಗಳು ಭಯವಿಲ್ಲದೆ ಧಾರ್ಮಿಕ ಆಚರಣೆಗೆ ಸ್ಥಳ ನಿಗದಿಪಡಿಸುವಂತೆ ಒತ್ತಾಯಿಸುವ ಮೂಲಕ ಗುಂಪು ಮನವಿ ಪತ್ರ ಸಲ್ಲಿಸಿತು.

ಸಂತ್ರಸ್ತ ವಿದ್ಯಾರ್ಥಿಗಳಿಗೆ ಮಾತನಾಡಲು ಇಷ್ಟವಿಲ್ಲದ ಕಾರಣ, ಭಾವನಾತ್ಮಕವಾಗಿ ತೊಂದರೆಗೀಡಾದ ಕಾರಣ ಅವರನ್ನು ಭೇಟಿ ಮಾಡುವಲ್ಲಿ ತೊಂದರೆಯಾಗಿದೆ ಎಂದು ನಿಯೋಗ ಹೇಳಿಕೊಂಡಿದೆ. ಆದರೆ ಸ್ಟೂಡೆಂಟ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾದ ಸಾಲಿಮ್ ಶೇಖ್, ಈ ಘರ್ಷಣೆಯನ್ನು ನಾಗರಿಕರ ಧಾರ್ಮಿಕ ಮತ್ತು ಪ್ರಜಾಪ್ರಭುತ್ವ ಹಕ್ಕುಗಳ ಮೇಲಿನ ದಾಳಿ ಎಂದು ಬಣ್ಣಿಸಿದರು. ಭದ್ರತೆಯನ್ನು ಬಲಪಡಿಸುವ ಜೊತೆಗೆ ಮುಂದೆ ಈ ರೀತಿಯ ಘಟನೆಗಳನ್ನು ತಡೆಯಲು ಕ್ರಮ ತಗೆದುಕೊಳ್ಳಬೇಕು ಎಂದು ಕಾಲೇಜು ಮತ್ತು ಅಧಿಕಾರಿಗಳನ್ನು ಒತ್ತಾಯಿಸಿದರು.

ಕಾಲೇಜು ಅಧಿಕಾರಿಗಳು ಭದ್ರತೆಯಲ್ಲಿನ ಲೋಪಗಳನ್ನು ಒಪ್ಪಿಕೊಂಡರು. ಹೆಚ್ಚಿದ ಗಸ್ತು, ಸಿಸಿಟಿವಿ ಪರೀಕ್ಷೆ ಮತ್ತು ಸಾಮರಸ್ಯ ವರ್ಧನೆಯ ಪ್ರಯತ್ನಗಳ ಮೂಲಕ ಸುಧಾರಣೆಗಳನ್ನು ಭರವಸೆ ನೀಡಿದರು. ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ನೀಡಲು ಸಹ ಬದ್ಧರಾಗಿದ್ದೇವೆ. ಆದರೆ ಪೊಲೀಸ್ ದೂರು ದಾಖಲಿಸುವ ಬಗ್ಗೆ ಕಾನೂನು ಸಮಾಲೋಚನೆಗಳು ನಡೆಯುತ್ತಿವೆ ಎಂದು ದೃಢಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್...

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...