Homeಕರ್ನಾಟಕಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

- Advertisement -
- Advertisement -

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು.

ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಎಷ್ಟು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ, ಎಷ್ಟು ವಾಹನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಎಷ್ಟು ಜನರ ಮೇಲೆ ಮೊಕದ್ದಮ್ಮೆ ದಾಖಲಿಸಲಾಗಿದೆ ಎಂದು ಸಿ.ಟಿ ರವಿ ಕೇಳಿದರು.

ಮುಂದುವರಿದು, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಪ್ರಕರಣಗಳ ತನಿಖೆಗೆ ಸರ್ಕಾರ ಆದೇಶ ನೀಡಿದೆಯೇ? ಈ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಹೂಡಿರುವ ಪ್ರಕರಣಗಳು ಯಾವುವು? ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ ಕೈಗೊಂಡಿರುವ ಕ್ರಮ ಏನು? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, 2025-26ರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 485 ಮೊಕದ್ದಮೆಗಳನ್ನು ಹೂಡಲಾಗಿದೆ, 461 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, 570 ಜನರನ್ನು ಬಂಧಿಸಲಾಗಿದೆ. 29,603 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದೇವೆ ಮತ್ತು 314 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಯಾದಗಿರಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕೊಪ್ಪಳ ಗೋದಾಮಿನ ಪ್ರಕರಣದಲ್ಲಿ ಸುಮಾರು 330 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ಬಾಗಲಕೋಟೆಯಲ್ಲಿ ಎಫ್‌ಐರ್ ದಾಖಲಿಸಲಾಗಿದೆ. ಅಲ್ಲಿನ ಪ್ರಕರಣದಲ್ಲಿ ಒಬ್ಬ ಪತ್ರಕರ್ತನ ಕೊಲೆಯಾಗಿದೆ. ಬಸವರಾಜ್ ರಾಮಪ್ಪ ಖಾನಗೊಂಡ ಎಂಬವರು ಟಿವಿಎಸ್‌ ಸ್ಕೂಟರ್‌ನಲ್ಲಿ ತೆರಳುವಾಗ ಅಪಘಾತವೆಸಗಿ ಕೊಲೆ ಮಾಡಲಾಗಿದೆ. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ ಎಂದು ಹೇಳಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲ, ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ 1995ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಿ.ಟಿ ರವಿ, ಸಿಂಗಾಪುರದಲ್ಲಿ ಇದೇ ಪಾಲಿಶ್ ಮಾಡಿದ ಅಕ್ಕಿಯನ್ನು 25 ಕೆ.ಜಿಗೆ 8 ಸಾವಿರ ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದುಬೈನಲ್ಲಿ 15 ಕೆ.ಜಿ ಅಕ್ಕಿಯನ್ನು 1,500 ರೂಪಾಯಿಗೆ ಮಾರಾಲಾಗುತ್ತಿದೆ ಎಂಬ ಮಾಹಿತಿಯಿದೆ. ಹಾಗಾಗಿ, ಬಡವರಿಗೆ ಅನ್ನಭಾಗ್ಯ ಎಂದು ಕೊಡಲಾಗುತ್ತಿರುವ ಅಕ್ಕಿ ಬಡವರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ. ಗೋದಾಮುಗಳಿಗೆ ಬರುವ ಮುಂಚೆಯೇ ಕ್ವಿಂಟಾಲ್‌ಗಟ್ಟಲೆ ಅಕ್ಕಿ ಮಾಯವಾಗುತ್ತಿದೆ. ನೂರಾರು ಪ್ರಕರಣಗಳು ದಾಖಲಾಗಿರುವುದರಿಂದ. ಇದರ ಹಿಂದೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಜಾಲ ಇರಬಹುದು. ಹಾಗಾಗಿ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಕುರಿತು ಸರ್ಕಾರ ಚಿಂತಿಸಿದೆಯಾ? ಈ ಅಕ್ರಮ ತಡೆಯಲು ಕಠಿಣ ಕ್ರಮವನ್ನು ಕೈಗೊಳ್ಳುವ ಬಗ್ಗೆ ಯೋಚಿಸಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಅಗತ್ಯ ವಸ್ತುಗಳ ಕಾಯ್ದೆ ಅಡಿ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಇಲಾಖೆಯ ಉಪ ಆಯುಕ್ತರಿಗೆ ಇದೆ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿಯೇ ಅಕ್ರಮಗಳ ಬಗ್ಗೆ ಇಷ್ಟೊಂದು ತನಿಖೆ ನಡೆದು ಮಾಹಿತಿಯನ್ನು ಒದಗಿಸಿದ್ದೇವೆ. ಬಾಗಲಕೋಟೆಯ ಕೊಲೆ ಪ್ರಕರಣ ಸಂಬಂಧ ಮೂರ್ನಾಲು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.

ಎಸ್‌ಐಟಿ ರಚಿಸುವ ಅವಶ್ಯಕತೆ ಇಲ್ಲ. ಪ್ರಸ್ತುತ ಇರುವ ಕಾನೂನಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಅವಕಾಶವಿದೆ. ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...