Homeಕರ್ನಾಟಕಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

- Advertisement -
- Advertisement -

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ ಮಾಹಿತಿ ನೀಡಿದರು.

ಸೋಮವಾರ (ಡಿಸೆಂಬರ್ 8) ವಿಧಾನಪರಿಷತ್‌ನಲ್ಲಿ ಬಿಜೆಪಿ ಸದಸ್ಯ ಸಿ.ಟಿ ರವಿ ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಪಿಎಲ್ ಪಡಿತರ ಚೀಟಿದಾರರಿಗೆ ವಿತರಿಸುವ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಣೆ ಮಾಡಿ ಹೊರ ದೇಶಗಳಿಗೆ, ರಾಜ್ಯಗಳಿಗೆ ಮಾರಾಟ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ?. ಈ ಸಂಬಂಧ ದಾಖಲಾದ ಪ್ರಕರಣದಲ್ಲಿ ಎಷ್ಟು ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ, ಎಷ್ಟು ವಾಹನಗಳನ್ನು ಜಪ್ತಿ ಮಾಡಲಾಗಿದೆ ಮತ್ತು ಎಷ್ಟು ಜನರ ಮೇಲೆ ಮೊಕದ್ದಮ್ಮೆ ದಾಖಲಿಸಲಾಗಿದೆ ಎಂದು ಸಿ.ಟಿ ರವಿ ಕೇಳಿದರು.

ಮುಂದುವರಿದು, ಅನ್ನಭಾಗ್ಯದ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಪ್ರಕರಣಗಳ ತನಿಖೆಗೆ ಸರ್ಕಾರ ಆದೇಶ ನೀಡಿದೆಯೇ? ಈ ಪ್ರಕರಣಗಳಲ್ಲಿ ಎಷ್ಟು ಜನರನ್ನು ಬಂಧಿಸಲಾಗಿದೆ? ಹೂಡಿರುವ ಪ್ರಕರಣಗಳು ಯಾವುವು? ಅಕ್ರಮದಲ್ಲಿ ಶಾಮೀಲಾಗಿರುವ ಅಧಿಕಾರಿಗಳ ವಿರುದ್ದ ಕೈಗೊಂಡಿರುವ ಕ್ರಮ ಏನು? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, 2025-26ರಲ್ಲಿ ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 485 ಮೊಕದ್ದಮೆಗಳನ್ನು ಹೂಡಲಾಗಿದೆ, 461 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ, 570 ಜನರನ್ನು ಬಂಧಿಸಲಾಗಿದೆ. 29,603 ಕ್ವಿಂಟಾಲ್ ಅಕ್ಕಿ ವಶಪಡಿಸಿಕೊಂಡಿದ್ದೇವೆ ಮತ್ತು 314 ವಾಹನಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

ಯಾದಗಿರಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಕೊಪ್ಪಳ ಗೋದಾಮಿನ ಪ್ರಕರಣದಲ್ಲಿ ಸುಮಾರು 330 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ. ಬಾಗಲಕೋಟೆಯಲ್ಲಿ ಎಫ್‌ಐರ್ ದಾಖಲಿಸಲಾಗಿದೆ. ಅಲ್ಲಿನ ಪ್ರಕರಣದಲ್ಲಿ ಒಬ್ಬ ಪತ್ರಕರ್ತನ ಕೊಲೆಯಾಗಿದೆ. ಬಸವರಾಜ್ ರಾಮಪ್ಪ ಖಾನಗೊಂಡ ಎಂಬವರು ಟಿವಿಎಸ್‌ ಸ್ಕೂಟರ್‌ನಲ್ಲಿ ತೆರಳುವಾಗ ಅಪಘಾತವೆಸಗಿ ಕೊಲೆ ಮಾಡಲಾಗಿದೆ. ಈ ಕುರಿತು ಅವರ ಪತ್ನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ. ಅದು ಈಗ ವಿಚಾರಣೆಯ ಹಂತದಲ್ಲಿದೆ ಎಂದು ಹೇಳಿದರು.

ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾಲ, ಕಾಲಕ್ಕೆ ಮೇಲ್ವಿಚಾರಣೆ ಮಾಡುವಂತೆ ನಿರ್ದೇಶನ ನೀಡಿ, ತಪ್ಪಿತಸ್ಥರ ವಿರುದ್ದ ಅಗತ್ಯ ವಸ್ತುಗಳ ಕಾಯ್ದೆ 1995ರ ಅಡಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಮುನಿಯಪ್ಪ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಸಿ.ಟಿ ರವಿ, ಸಿಂಗಾಪುರದಲ್ಲಿ ಇದೇ ಪಾಲಿಶ್ ಮಾಡಿದ ಅಕ್ಕಿಯನ್ನು 25 ಕೆ.ಜಿಗೆ 8 ಸಾವಿರ ರೂಪಾಯಿಯಂತೆ ಮಾರಾಟ ಮಾಡಲಾಗುತ್ತಿದೆ. ದುಬೈನಲ್ಲಿ 15 ಕೆ.ಜಿ ಅಕ್ಕಿಯನ್ನು 1,500 ರೂಪಾಯಿಗೆ ಮಾರಾಲಾಗುತ್ತಿದೆ ಎಂಬ ಮಾಹಿತಿಯಿದೆ. ಹಾಗಾಗಿ, ಬಡವರಿಗೆ ಅನ್ನಭಾಗ್ಯ ಎಂದು ಕೊಡಲಾಗುತ್ತಿರುವ ಅಕ್ಕಿ ಬಡವರಿಗೆ ಸಿಗುತ್ತಿಲ್ಲ ಎಂದು ಹೇಳಿದರು.

ಇದರಲ್ಲಿ ಅಧಿಕಾರಿಗಳು ಶಾಮಿಲಾಗಿದ್ದಾರೆ. ಗೋದಾಮುಗಳಿಗೆ ಬರುವ ಮುಂಚೆಯೇ ಕ್ವಿಂಟಾಲ್‌ಗಟ್ಟಲೆ ಅಕ್ಕಿ ಮಾಯವಾಗುತ್ತಿದೆ. ನೂರಾರು ಪ್ರಕರಣಗಳು ದಾಖಲಾಗಿರುವುದರಿಂದ. ಇದರ ಹಿಂದೆ ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಇದರ ಜಾಲ ಇರಬಹುದು. ಹಾಗಾಗಿ, ಈ ಬಗ್ಗೆ ಎಸ್‌ಐಟಿ ತನಿಖೆ ನಡೆಸುವ ಕುರಿತು ಸರ್ಕಾರ ಚಿಂತಿಸಿದೆಯಾ? ಈ ಅಕ್ರಮ ತಡೆಯಲು ಕಠಿಣ ಕ್ರಮವನ್ನು ಕೈಗೊಳ್ಳುವ ಬಗ್ಗೆ ಯೋಚಿಸಿದೆಯಾ? ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮುನಿಯಪ್ಪ, ಅಗತ್ಯ ವಸ್ತುಗಳ ಕಾಯ್ದೆ ಅಡಿ ಎಲ್ಲಾ ಕ್ರಮ ಕೈಗೊಳ್ಳುವ ಅಧಿಕಾರ ಆಹಾರ ಇಲಾಖೆಯ ಉಪ ಆಯುಕ್ತರಿಗೆ ಇದೆ. ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಹಾಗಾಗಿಯೇ ಅಕ್ರಮಗಳ ಬಗ್ಗೆ ಇಷ್ಟೊಂದು ತನಿಖೆ ನಡೆದು ಮಾಹಿತಿಯನ್ನು ಒದಗಿಸಿದ್ದೇವೆ. ಬಾಗಲಕೋಟೆಯ ಕೊಲೆ ಪ್ರಕರಣ ಸಂಬಂಧ ಮೂರ್ನಾಲು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದರು.

ಎಸ್‌ಐಟಿ ರಚಿಸುವ ಅವಶ್ಯಕತೆ ಇಲ್ಲ. ಪ್ರಸ್ತುತ ಇರುವ ಕಾನೂನಿನಲ್ಲಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳುವ ಅವಕಾಶವಿದೆ. ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಮ್ಮುಖದಲ್ಲಿ 10 ನಕ್ಸಲರು ಶರಣಾಗತಿ: ಮುಖ್ಯವಾಹಿನಿಗೆ ಬಂದವರಿಗೆ ಸಂವಿಧಾನ ಪ್ರತಿ ನೀಡಿದ ಸಿಎಂ

ಡಿಸೆಂಬರ್ 7 ರಂದು, ನಾಲ್ವರು ಮಹಿಳೆಯರು ಸೇರಿದಂತೆ ಹತ್ತು ಮಂದಿ ನಕ್ಸಲರು ಬಾಲಘಾಟ್ ಜಿಲ್ಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರ ನೇತೃತ್ವದಲ್ಲಿ ಮುಖ್ಯವಾಹಿನಿಗೆ ಬಂದರು. ಶರಣಾಗತಿಯಾದ ನಕ್ಸಲರ ಬಳಿ ಇದ್ದ,...

‘ಸಿಎಂ ಹುದ್ದೆಗೆ 500 ಕೋಟಿ’ : ಚರ್ಚೆಗೆ ಕಾರಣವಾದ ನವಜೋತ್ ಕೌರ್ ಹೇಳಿಕೆ; ಕಾಂಗ್ರೆಸ್‌ ಮೇಲೆ ಮುಗಿಬಿದ್ದ ಎಎಪಿ, ಬಿಜೆಪಿ

"ಐನೂರು ಕೋಟಿ ರೂಪಾಯಿಯ ಸೂಟ್ ಕೇಸ್ ಕೊಡುವವರು ಸಿಎಂ ಆಗುತ್ತಾರೆ" ಎಂಬ ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್ ಕೌರ್ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡುವಂತೆ ಪಂಜಾಬ್‌ನ...

ಡಿಕೆಶಿ ಅವಕಾಶ ಕೇಳಿದ್ರು, ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಸಮ್ಮತಿಸಿಲ್ಲ: ಯತೀಂದ್ರ ಸಿದ್ದರಾಮಯ್ಯ

ಸಿದ್ದರಾಮಯ್ಯ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂಬ ವಿಶ್ವಾಸ ವೈಯಕ್ತಿಕವಾಗಿ ನನಗಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಡಿಕೆಶಿ ಅವಕಾಶ ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಹೈಕಮಾಂಡ್...

ಇಂಡಿಗೋ ಬಿಕ್ಕಟ್ಟು : ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ಇಂಡಿಗೋ ವಿಮಾನ ಬಿಕ್ಕಟ್ಟಿಗೆ ಸಂಬಂಧಿಸಿದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ (ಡಿಸೆಂಬರ್ 8) ನಿರಾಕರಿಸಿದೆ. ಈ ವಿಷಯದ ಬಗ್ಗೆ ಭಾರತ ಸರ್ಕಾರ ಈಗಾಗಲೇ ಗಮನ ಹರಿಸಿ ಕ್ರಮ ಕೈಗೊಂಡಿದೆ....

ಮಂಡ್ಯದಲ್ಲಿ ಭೀಕರ ಅಪಘಾತ: ಸೇತುವೆಯಿಂದ ಕೆಳಗೆ ಬಿದ್ದ ಕಾರು: ಒಂದೇ ಕುಟುಂಬದ ಮೂವರು ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದು, ಬಳಿಕ ಹಳ್ಳಕ್ಕೆ ಬಿದ್ದಿದ್ದು, ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ತಿಟ್ಟನಹೊಸಹಳ್ಳಿ ಮತ್ತು ಎ.ನಾಗತಿಹಳ್ಳಿ...

ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಅಸಿಂಧು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದಿಂದ 2023ರಲ್ಲಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಈ ಸಂಬಂಧ ಪ್ರತಿಕ್ರಿಯಿಸುವಂತೆ ಸಿದ್ದರಾಮಯ್ಯ ಅವರಿಗೆ ಸೂಚಿಸಿ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಮಲಯಾಳಂ ನಟ ದಿಲೀಪ್ ಖುಲಾಸೆ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎರ್ನಾಕುಲಂನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಸೋಮವಾರ (ಡಿಸೆಂಬರ್ 8) ಖುಲಾಸೆಗೊಳಿಸಿದೆ. ನ್ಯಾಯಮೂರ್ತಿ ಹನಿ ಎಂ....

ಇಂದಿನಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಚರ್ಚೆಯ ನಡುವೆ ಇಂದಿನಿಂದ (ಡಿಸೆಂಬರ್ 8) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಪ್ರಾರಂಭಗೊಂಡಿದೆ. ಉತ್ತರ ಕರ್ನಾಟಕದ ಸಮಸ್ಯೆಗಳು, ರೈತರ ಸಂಕಷ್ಟ ಮತ್ತು ಬೆಲೆ ಏರಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು...