Homeಮುಖಪುಟಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ 'ವಂದೇ ಮಾತರಂ' ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ‘ವಂದೇ ಮಾತರಂನ 150 ವರ್ಷಗಳು’ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ ಗೀತೆಯ ಕುರಿತು ಸದನ ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

“ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಪ್ರಸ್ತಾಪಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ; ಈ ಗೀತೆ ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹೀಗಿರುವಾಗ ಈ ಚರ್ಚೆಯ ಅಗತ್ಯವೇನಿದೆ?” ಎಂದು ಪ್ರಿಯಾಂಕಾ ಗಾಂಧಿ ಕೇಳಿದರು.

“ನಮ್ಮ ಗುರಿ ಏನು, ಜನರಿಗೆ ಸಂಬಂಧಿಸಿದಂತೆ ನಮ್ಮ ಜವಾಬ್ದಾರಿ ಏನು, ಅದನ್ನು ನಾವು ಹೇಗೆ ಪೂರೈಸುತ್ತಿದ್ದೇವೆ..? ನಾವು ಈ ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚಿಸುತ್ತಿರುವುದು ಏಕೆ? ಅದರ ಬಗ್ಗೆ ಏನು ಚರ್ಚೆ ಮಾಡಬಹುದು?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಎತ್ತಿದ್ದರು.

ಇತರ ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತು ಪ್ರಧಾನ ಮಂತ್ರಿಗಳು ಅದರಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಲು ಬಯಸುತ್ತಿರುವುದರಿಂದ ನಾವು ಈ ಚರ್ಚೆಯನ್ನು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಸರ್ಕಾರ ಈ ಚರ್ಚೆ ಹಮ್ಮಿಕೊಳ್ಳಲು ಎರಡನೆಯ ಕಾರಣವೆಂದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ದೇಶಕ್ಕಾಗಿ ಅಪಾರ ತ್ಯಾಗ ಮಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಎಂದು ಪ್ರಿಯಾಂಕಾ ಗಾಂಧಿ ದೂರಿದರು.

“ಈ ಸರ್ಕಾರ ವರ್ತಮಾನ ಮತ್ತು ಭವಿಷ್ಯವನ್ನು ನೋಡಲು ಬಯಸುವುದಿಲ್ಲವಾದ್ದರಿಂದ ನಾವು ಭೂತಕಾಲವನ್ನು ಪರಿಶೀಲಿಸುತ್ತಲೇ ಇರಬೇಕೆಂದು ನೀವು ಬಯಸುತ್ತೀರಿ” ಎಂದರು.

“ಪ್ರಧಾನಿ ಮೋದಿ ಅವರು ಹಿಂದಿನ ಪ್ರಧಾನಿಯಲ್ಲ; ಇದು ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ಅವರ ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ತೋರಿಸುತ್ತಿದೆ. ಸರ್ಕಾರದಲ್ಲಿರುವ ನನ್ನ ಸ್ನೇಹಿತರು ಮೌನವಾಗಿದ್ದಾರೆ, ಏಕೆಂದರೆ ಅವರಿಗೂ ಇದು ತಿಳಿದಿದೆ” ಎಂದು ಪ್ರಿಯಾಂಕಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಪ್ರಿಯಾಂಕಾ, ಅವರ “ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ” ಎಂದು ಆರೋಪಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಸರ್ಕಾರ ಈ ಚರ್ಚೆಯನ್ನು ಬಯಸುತ್ತಿದೆ ಎಂದು ಹೇಳಿದರು.

“ನೀವು ನೆಹರು ಬಗ್ಗೆ ಸದಾ ಮಾತನಾಡುತ್ತಿರುವುದರಿಂದ ಒಂದು ಕೆಲಸ ಮಾಡೋಣ. ಒಂದು ಚರ್ಚೆಗೆ ಸಮಯ ನಿಗದಿಪಡಿಸೋಣ. ನೆಹರು ವಿರುದ್ದದ ಎಲ್ಲಾ ಆರೋಪಗಳನ್ನು ಪಟ್ಟಿ ಮಾಡೋಣ. ಅವುಗಳ ಕುರಿತು ಚರ್ಚೆ ನಡೆಸಿ, ವಿಷಯವನ್ನು ಅಲ್ಲಿಗೆ ಮುಗಿಸಿ ಬಿಡೋಣ. ಅದರ ನಂತರ, ಇಂದಿನ ಸಮಸ್ಯೆಗಳಾದ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡೋಣ” ಎಂದರು.

ವಂದೇ ಮಾತರಂ ಮೇಲೆ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಮಾಡಿದೆ ಎಂಬ ಪ್ರಧಾನಿ ಮೋದಿಯವರ ಆರೋಪವನ್ನು ಅಲ್ಲಗಳೆಯಲು ಪ್ರಿಯಾಂಕಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ನಡುವಿನ ಪತ್ರವ್ಯವಹಾರವನ್ನು ಉಲ್ಲೇಖಿಸಿದರು.

“ಬಂಕಿಮ್ ಚಂದ್ರ ಚಟರ್ಜಿ 1875ರಲ್ಲಿ ಈ ಗೀತೆಯನ್ನು ಬರೆದರು, ಮೊದಲ ಎರಡು ಚರಣಗಳನ್ನು ಬರೆದರು ಮತ್ತು 1882ರಲ್ಲಿ ನಾಲ್ಕು ಚರಣಗಳನ್ನು ಸೇರಿಸಿದ ನಂತರ ಆನಂದ್ ಮಠದಲ್ಲಿ ಪ್ರಕಟಿಸಿದರು. 1896ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಇದನ್ನು ಮೊದಲ ಬಾರಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಿದರು” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ರಾಷ್ಟ್ರೀಯ ಗೀತೆಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಶ್ನಿಸುವುದು ಸಂವಿಧಾನ ಸಭೆ ಮತ್ತು ಅದರ ಸದಸ್ಯರನ್ನು ಪ್ರಶ್ನಿಸಿದಂತಿದೆ ಎಂದರು.

“ಮೋದಿಯವರು ಸುಮಾರು 12 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ. ಸರಿ ಸುಮಾರು ಅಷ್ಟೇ ಕಾಲ ನೆಹರು ಅವರು ಜೈಲಿನಲ್ಲಿದ್ದರು” ಎಂದು ನೆಹರು ವಿರುದ್ದದ ಮೋದಿ ಟೀಕೆಗೆ ಪ್ರಿಯಾಂಕಾ ತಿರುಗೇಟು ಕೊಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...

44 ಲಕ್ಷ ಮತದಾರರಿಗೆ ನೋಟಿಸ್: BLA ಗಳಿಗೆ ಪಟ್ಟಿ ನೀಡಿ, ಪಾರದರ್ಶಕತೆ ಕಾಯ್ದುಕೊಳ್ಳಲು ‘ಜಾಗೃತ ಕರ್ನಾಟಕ’ ಒತ್ತಾಯ

ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಪ್ರಕಟಗೊಳ್ಳುತ್ತಿರುವ ಕರಡು ಮತದಾರರ ಪಟ್ಟಿಯಿಂದ ಯಾವುದೇ ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಎಚ್ಚರವಹಿಸಬೇಕು ಹಾಗೂ ನೋಟಿಸ್ ಪ್ರಕ್ರಿಯೆಗೆ ಕಾಲಾವಕಾಶ ವಿಸ್ತರಿಸಬೇಕು ಎಂದು ಆಗ್ರಹಿಸಿ ‘ಜಾಗೃತ...

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...