Homeಚಳವಳಿಪೌರತ್ವ ಕಾಯ್ದೆ ವಿರೋಧಿಸಿ ಇಂದು ಬಿಹಾರ ಬಂದ್‌ಗೆ ಆರ್‌ಜೆಡಿಯ ತೇಜಸ್ವಿ ಯಾದವ್‌ ಕರೆ

ಪೌರತ್ವ ಕಾಯ್ದೆ ವಿರೋಧಿಸಿ ಇಂದು ಬಿಹಾರ ಬಂದ್‌ಗೆ ಆರ್‌ಜೆಡಿಯ ತೇಜಸ್ವಿ ಯಾದವ್‌ ಕರೆ

- Advertisement -
- Advertisement -

ಪೌರತ್ವ ಕಾಯ್ದೆ ಮತ್ತು ಎನ್‌ಆರ್‌ಸಿ ವಿರುದ್ಧ ಬಿಹಾರ ಬಂದ್‌ಗೆ ಕರೆ ನೀಡಿರುವ ಆರ್‌ಜೆಡಿ ಮುಖಂಡ ತೇಜಶ್ವಿ ಯಾದವ್, ಶಾಂತರೀತಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.

ರಾಷ್ಟ್ರೀಯ ಜನತಾದಳದ ಬೆಂಬಲಿಗರು ಎಮ್ಮೆಗಳನ್ನು ಬಳಸಿ ಹೆದ್ದಾರಿಗಳನ್ನು ನಿರ್ಬಂಧಿಸಿದ್ದಾರೆ. ರೈಲ್ವೆ ಹಳಿಗಳಲ್ಲಿ ಕುಳಿತು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಯನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದ್ದಾರೆ.

“ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಆರ್ಜೆಡಿ ಡಿಸೆಂಬರ್ 21 ರಂದು ಬಿಹಾರ ಬಂದ್ ಅನ್ನು ಮುನ್ನಡೆಸಲಿದೆ. ಅದರ ಮುನ್ನಾದಿನದಂದು, ಪಕ್ಷವು ಎಲ್ಲಾ ಜಿಲ್ಲೆಗಳಲ್ಲಿ ಪಂಜಿನ ಮೆರವಣಿಗೆಯ ರ್‍ಯಾಲಿಯನ್ನು ನಡೆಸಿ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿತು” ಎಂದು ತೇಜಸ್ವಿ ಯಾದವ್‌ ಟ್ವೀಟ್ ಮಾಡಿದ್ದಾರೆ.

ದರ್ಬಂಗದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಆರ್‌ಜೆಡಿಯ ಕಾರ್ಯಕರ್ತರು ಮತ್ತು ಬೆಂಬಲಿಗರು ಟೈರ್‌ಗಳನ್ನು ಸುಡುವ ಮೂಲಕ ಹೆದ್ದಾರಿಯನ್ನು ನಿರ್ಬಂಧಿಸಿದ್ದಾರೆ. ವೈಶಾಲಿಯಲ್ಲಿ ಆರ್ಜೆಡಿಯ ಕಾರ್ಯಕರ್ತರು ಎಮ್ಮೆಗಳ ಸಹಾಯದಿಂದ ಹೆದ್ದಾರಿಯನ್ನು ನಿರ್ಬಂಧಿಸಿದರು.

ತೇಜಶ್ವಿ ಯಾದವ್ ಉದ್ದೇಶಿತ ಎನ್‌ಆರ್‌ಸಿಯನ್ನು ವಿರೋಧಿಸಿದ್ದಾರೆ. ಜನರು ತಮ್ಮ ದಾಖಲೆಗಳನ್ನು ತೋರಿಸಲು ಸಾಧ್ಯವಿಲ್ಲ. ಏಕೆಂದರೆ ಅವರ ಗುರುತಿನ ದಾಖಲೆಗಳು ಆಗಾಗ್ಗೆ ಬರುವ ರಾಜ್ಯದ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ ಎಂದು ಹೇಳಿದ್ದಾರೆ. “ಬಿಹಾರದಲ್ಲಿ, ಜನರ ದಾಖಲೆಗಳು ಪ್ರವಾಹದಲ್ಲಿ ನಾಶವಾಗಿವೆ. ಅವರು ತಮ್ಮ ಗುರುತನ್ನು ಹೇಗೆ ಸಾಬೀತುಪಡಿಸಬಹುದು? ”ಎಂದು ಯಾದವ್ ಪ್ರಶ್ನಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಿತ್ರಪಕ್ಷವಾದ ಜೆಡಿಯು ಕೂಡ ಎನ್‌ಆರ್‌ಸಿ ಜಾರಿಗೊಳಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೇಸಿಗೆ ಎದುರಿಸಲು ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್‌ ಸ್ಥಾಪನೆಗೆ ಮುಂದಾದ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಬೇಸಿಗೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ, ನಗರದ ನಿರ್ದಿಷ್ಟ ಪ್ರದೇಶಗಳಲ್ಲಿ ನೀರಿನ ಬೇಡಿಕೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮತ್ತು ಸಂಭಾವ್ಯ ಕೊರತೆಯನ್ನು ನೀಗಿಸಲು ಸಿದ್ಧತೆಗಳನ್ನು ಹೆಚ್ಚಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...

ಸೋನಮ್ ವಾಂಗ್‌ಚುಕ್ ಆರೋಗ್ಯವಾಗಿದ್ದಾರೆ, ವೈದ್ಯಕೀಯ ಕಾರಣಕ್ಕೆ ಬಿಡುಗಡೆ ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಆಧಾರದ ಮೇಲೆ ಬಂಧನದಿಂದ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ (ಫೆ.11) ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. "ವೈದ್ಯಕೀಯ ಆಧಾರದಲ್ಲಿ ಸೋನಮ್ ವಾಂಗ್‌ಚುಕ್ ಅವರ...

ಬ್ರಿಟಿಷ್ ಕೊಲಂಬಿಯಾದ ಶಾಲೆಯಲ್ಲಿ ಗುಂಡಿನ ದಾಳಿ; ಶಂಕಿತನ ಸೇರಿದಂತೆ 10 ಜನರು ಸಾವು

ಬ್ರಿಟಿಷ್ ಕೊಲಂಬಿಯಾದಲ್ಲಿ ಮಂಗಳವಾರ ನಡೆದ ಗುಂಡಿನ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಕೆನಡಾದ ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಶಂಕಿತ ಬಂದೂಕುಧಾರಿ ಮಹಿಳೆಯೂ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲೆಯ ಹತ್ತಿರದ ನಿವಾಸದಲ್ಲಿ...

‘ನನ್ನ ಗಡ್ಡ ಎಳೆದು ಟೋಪಿ ಕಿತ್ತೆಸೆದರು..’; ಶಿರಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮುಸ್ಲಿಂ ಪ್ರಯಾಣಿಕನ ಮೇಲೆ ಗುಂಪುದಾಳಿ

ಮನ್ಮಾಡ್ ಕಾಕಿನಾಡ ಶಿರಡಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸುಮಾರು 20 ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಹಫೀಜ್‌ಪೇಟೆ ರೈಲು ನಿಲ್ದಾಣದ ಬಳಿ ಘಟನೆ ನಡೆದಿದ್ದು, ಮೊಹಮ್ಮದ್...

ಪ್ರಧಾನಿ ಮೋದಿ ಕುರಿತ ‘ದಿ ವೈರ್’ನ ವಿಡಂಬನಾತ್ಮಕ ಅನಿಮೇಷನ್‌ಗೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರ್ಬಂಧ

ಸುದ್ದಿ ಸಂಸ್ಥೆ 'ದಿ ವೈರ್' ಪೋಸ್ಟ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರ ವಿಡಂಬನಾತ್ಮಕ ಅನಿಮೇಷನ್ ಅನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಾದ ಇನ್‌ಸ್ಟಾಗ್ರಾಮ್, ಫೇಸ್‌ಬುಕ್ ಮತ್ತು ಎಕ್ಸ್ ನಿರ್ಬಂಧಿಸಿವೆ. ಸೋಮವಾರ (ಫೆ.10) ಸಂಜೆ ಸುಮಾರು ಎರಡು...

‘ಭಾರತವನ್ನು ಮಾರಲು ನಿಮಗೆ ನಾಚಿಕೆಯಾಗುವುದಿಲ್ಲವೇ?’; ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಉಲ್ಲೇಖಿಸಿ ಪ್ರಧಾನಿ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ

ಅಮೆರಿಕದೊಂದಿಗೆ ಇತ್ತೀಚೆಗೆ ಘೋಷಿಸಲಾದ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.  ಲೋಕಸಭೆಯಲ್ಲಿ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ ತೀವ್ರ ದಾಳಿ ಮಾಡಿದ...

ಗಾಜಾ| ಮನೆ ಅವಶೇಷದಲ್ಲಿ ತನ್ನ ಕುಟುಂಬದ ಸದಸ್ಯರ ಮೂಳೆ ಹುಡುಕಿದ ವ್ಯಕ್ತಿ

ಗಾಜಾ ನಗರದಲ್ಲಿದ್ದ ತನ್ನ ಮನೆಯ ಅವಶೇಷಗಳ ರಾಶಿಯ ನಡುವೆ ಕುಳಿತಿರುವ ಮಹಮೂದ್ ಹಮ್ಮದ್, ದೊಡ್ಡ ಜರಡಿಯಲ್ಲಿ ಮಣ್ಣನ್ನು ತೆಗೆದು ಅಲ್ಲಾಡಿಸಿ, ಅದನ್ನು ಹೊರಗೆ ಎಸೆಯುವ ಮೊದಲು ಎಚ್ಚರಿಕೆಯಿಂದ ನೋಡುವ ವಿಡಯೊ ನೋಡಿದವರ ಮನಕಲಕುತ್ತದೆ....

ವಿಪಕ್ಷಗಳಿಂದ ಅವಿಶ್ವಾಸ ನೋಟಿಸ್: ಕಲಾಪಕ್ಕೆ ಗೈರಾದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ

'ಪಕ್ಷಪಾತ'ದ ಆರೋಪ ಹೊರಿಸಿ ವಿಪಕ್ಷಗಳು 'ಅವಿಶ್ವಾಸ ನೋಟಿಸ್' ನೀಡಿರುವ ಹಿನ್ನೆಲೆ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕಲಾಪದಿಂದ ದೂರ ಉಳಿದಿದ್ದಾರೆ. ಬುಧವಾರ (ಫೆ.11) ಸ್ಪೀಕರ್ ಪೀಠದಲ್ಲಿ ಹಿರಿಯ ಬಿಜೆಪಿ ಸಂಸದರಾದ ಪಿ.ಸಿ ಮೋಹನ್...

ಕೆನಡಾ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಶಾಲೆಯಲ್ಲಿ ಗುಂಡಿನ ದಾಳಿ: ಬಂದೂಕುಧಾರಿ ಸೇರಿ ಕನಿಷ್ಠ 10 ಸಾವು, 27 ಮಂದಿಗೆ ಗಾಯ

ಬ್ರಿಟಿಷ್ ಕೊಲಂಬಿಯಾದ ಪೀಸ್ ಪ್ರದೇಶದಲ್ಲಿರುವ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ ಗುಂಡಿನ ದಾಳಿ ನಡೆದಿದ್ದು, ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 27 ಮಂದಿಗೆ ಗಂಭೀರ ಗಾಯಗಳಾಗಿರುವುದಾಗಿ ವರದಿಯಾಗಿದೆ. ಶಂಕಿತ ಎಂದು ನಂಬಲಾದವರ ಮನೆಯಲ್ಲಿ ಇನ್ನೂ...

ಉತ್ತರ ಪ್ರದೇಶ| ಭೂಮಿ ವಿವಾದದಲ್ಲಿ ದಲಿತ ಮಹಿಳೆಯರ ಮೇಲೆ ಹಲ್ಲೆ- ಜಾತಿ ನಿಂದನೆ

ಉತ್ತರ ಪ್ರದೇಶದ ಮಾಂಡಾ ಪೊಲೀಸ್ ಠಾಣೆ ವ್ಯಾಪ್ತಿಯ ಹಂಡಿಯಾ ಗ್ರಾಮದಲ್ಲಿ ದೀರ್ಘಕಾಲದಿಂದ ನಡೆಯುತ್ತಿದ್ದ ಭೂ ವಿವಾದ ಭಾನುವಾರ ಹಿಂಸಾಚಾರಕ್ಕೆ ತಿರುಗಿದೆ. ಪ್ರಬಲ ಜಾತಿ ಜನರು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರು...