Homeಕರ್ನಾಟಕವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

- Advertisement -
- Advertisement -

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ ನೀಡುವ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಂಗಳವಾರ (ಡಿಸೆಂಬರ್ 9) ಮಧ್ಯಂತರ ತಡೆ ನೀಡಿದೆ.

ಬೆಂಗಳೂರು ಹೋಟೆಲ್‌ ಸಂಘದ ಕೋರಿಕೆಯಂತೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ 2025ರ ನವೆಂಬರ್ 20ರಂದು ಹೊರಡಿಸಿರುವ ಅಧಿಸೂಚನೆಗೆ ತಡೆ ನೀಡಲಾಗಿದೆ. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ಹೇಳಿದೆ.

ಅಲ್ಲದೇ, ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಗೆ ಪೀಠ ನೋಟಿಸ್‌ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್‌ನ ಚಳಿಗಾಲದ ರಜೆ ಮುಗಿದ ಬಳಿಕ ನಿಗದಿಪಡಿಸಲು ನಿರ್ದೇಶಿಸಿದೆ.

ವಿಚಾರಣೆ ವೇಳೆ ಹೋಟೆಲ್‌ ಸಂಘದ ಪರ ವಾದ ಮಂಡಿಸಿದ ವಕೀಲ ಬಿ ಕೆ ಪ್ರಶಾಂತ್‌, “ಕಾರ್ಮಿಕ ಇಲಾಖೆಯು 18 ರಿಂದ 52 ವಯೋಮಾನದ ಮಹಿಳಾ ಉದ್ಯೋಗಿಗಳಿಗೆ ಮಾಸಿಕ ಒಂದು ದಿನದ ಋತುಚಕ್ರದ ರಜೆ ನೀಡುವುದನ್ನು ಕಡ್ಡಾಯಗೊಳಿಸಿದೆ. 1948ರ ಕಾರ್ಖಾನೆ ಕಾಯ್ದೆ, 1961ರ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸ್ಥಾಪನೆ ಕಾಯ್ದೆ, 1951ರ ಪ್ಲಾಂಟೇಶನ್ ಕಾರ್ಮಿಕ ಕಾಯ್ದೆ, 1966ರ ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ ಮತ್ತು 1961ರ ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆಯಡಿ ಬರುವ ಸಂಸ್ಥೆಗಳಿಗೆ ಅನ್ವಯಿಸುವಂತೆ ಈ ಕಾರ್ಯಕಾರಿ ಆದೇಶ ಹೊರಡಿಸಲಾಗಿದೆ” ಎಂದರು.

ಮುಂದುವರಿದು, “ಆದರೆ, ಈ ಎಲ್ಲಾ ಕಾಯ್ದೆಗಳು ಈಗಾಲೇ ಸಮಗ್ರ ರಜೆ ನೀತಿಯನ್ನು ಹೊಂದಿವೆ. ಕಾರ್ಖಾನೆ ಕಾಯ್ದೆ ಪ್ರಕಾರ 20 ದಿನಗಳ ದುಡಿಮೆಗೆ ಒಂದು ಗಳಿಕೆ ರಜೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ವರ್ಷಕ್ಕೆ 18 ರಜೆ ನೀಡಲಾಗುತ್ತಿದೆ. ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು 18 ದಿನಗಳ ಗಳಿಕೆ ರಜೆಯ ಜೊತೆಗೆ 12 ದಿನ ಅನಾರೋಗ್ಯದ ರಜೆ ನೀಡುತ್ತಿವೆ. ಇದರ ಜೊತೆಗೆ 12 ಸಾಮಾನ್ಯ ರಜೆಯೂ (ಕ್ಯಾಷುವಲ್‌ ಲೀವ್) ಇದೆ. ಆದರೆ, ಯಾವುದೇ ರಾಜ್ಯ ಅಥವಾ ಕೇಂದ್ರ ಸರ್ಕಾರದ ಕಾಯ್ದೆಯಲ್ಲಿ ಋತುಚಕ್ರದ ರಜೆ ಕಡ್ಡಾಯಗೊಳಿಸಿಲ್ಲ” ಎಂದು ತಿಳಿಸಿದರು.

“ಋತುಚಕ್ರದ ರಜೆ ನೀಡಲು ಕಾಯ್ದೆಯ ಯಾವುದೇ ನಿಬಂಧನೆಯಲ್ಲೂ ಅವಕಾಶವಿಲ್ಲ. ಯಾವ ಅಧಿಕಾರದ ಅಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂಬುವುದು ಅಧಿಸೂಚನೆಯಲ್ಲಿ ಉಲ್ಲೇಖವಾಗಿಲ್ಲ” ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಅಧಿಸೂಚನೆ ಹೊರಡಿಸುವಾಗ ರಾಜ್ಯ ಸರ್ಕಾರವು ಸಂಬಂಧಿತ ಸಂಸ್ಥೆಗಳ ಜೊತೆ ಸಭೆ ನಡೆಸಿದೆಯೇ? ಅವುಗಳಿಂದ ಆಕ್ಷೇಪಣೆ ಸ್ವೀಕರಿಸಿದೆಯೇ?” ಎಂದು ಪ್ರಶ್ನಿಸಿತು. ಇದಕ್ಕೆ ಪ್ರಶಾಂತ್‌ ಅವರು ‘ಇಲ್ಲ’ ಎಂದು ಉತ್ತರಿಸಿದರು.

ಈ ನಡುವೆ, ಬೇರೆ ಯಾವುದೇ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಪೀಠ, ಸರ್ಕಾರದ ಅಧಿಸೂಚನೆಗೆ ತಡೆ ನೀಡಿ, ವಿಚಾರಣೆಯನ್ನು ಮುಂದೂಡಿತು.

ಕೇರಳ, ಒಡಿಶಾ, ಬಿಹಾರ ಮತ್ತು ಸಿಕ್ಕಿಂ ರಾಜ್ಯಗಳ ಇರುವಂತೆ ಮಹಿಳಾ ಉದ್ಯೋಗಿಗಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಆದೇಶಕ್ಕೆ 2025ರ ಅಕ್ಟೋಬರ್ 9ರಂದು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನವೆಂಬರ್ 12ರಂದು ರಾಜ್ಯ ಸರ್ಕಾರ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಸರ್ಕಾರವು ಪಾಲುದಾರರಿಂದ ಅಭಿಪ್ರಾಯಗಳನ್ನು ಕೇಳುವ ಯಾವುದೇ ಸೂಚನೆಯನ್ನು ನೀಡಿಲ್ಲವಾದ್ದರಿಂದ, ಅಧಿಸೂಚನೆಯು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ಹೋಟೆಲ್‌ ಸಂಘವು ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ. ಈ ಕಾನೂನುಗಳು (ಮೇಲೆ ಉಲ್ಲೇಖಿಸಿದ ವಿವಿಧ ಕಾಯ್ದೆಗಳು) ಸರ್ಕಾರ ಈ ರೀತಿ ರಜೆಯನ್ನು (ಮುಟ್ಟಿನ ರಜೆ) ಕಡ್ಡಾಯಗೊಳಿಸುವ ಆದೇಶವನ್ನು ಹೊರಡಿಸಲು ಅನುವು ಮಾಡಿಕೊಡುವ ನಿಬಂಧನೆಗಳನ್ನು ಹೊಂದಿಲ್ಲ. ಆದ್ದರಿಂದ ಸರ್ಕಾರ ಅಂತಹ ಕಾರ್ಯಕಾರಿ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ ಎಂದು ವಾದಿಸಿದೆ.

ಈ ರೀತಿಯ ರಜೆ ನೀಡುವುದು ಉದ್ಯೋಗದಾತರ ಸ್ವತಂತ್ರ ಅಧಿಕಾರಕ್ಕೆ ಸಂಬಂಧಿಸಿದೆ. ಇದನ್ನು ಸಂಸ್ಥೆಗಳ ಮಾನವ ಸಂಪನ್ಮೂಲ ವಿಭಾಗ (ಹೆಚ್‌ಆರ್) ನಿರ್ಧರಿಸುತ್ತದೆ. ಹಾಗಾಗಿ, ಸರ್ಕಾರ ಇಂತಹ ಆಡಳಿತಾತ್ಮಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಮಹಿಳೆಯರಿಗೆ ಅತ್ಯಧಿಕ ಉದ್ಯೋಗ ನೀಡುವ ಸರ್ಕಾರವೇ ತನ್ನ ಉದ್ಯೋಗಿಗಳಿಗೆ ಮಾಸಿಕ ಮುಟ್ಟಿನ ರಜೆಗಳನ್ನು ನೀಡಿಲ್ಲ. ಹೀಗಿರುವಾಗ, ಸರ್ಕಾರದ ಅಧಿಸೂಚನೆ ತಾರತಮ್ಯದಿಂದ ಕೂಡಿದೆ ಮತ್ತು ಮನಬಂದಂತೆ ಹೊರಡಿಸಿದಂತೆ ಕಾಣುತ್ತಿದೆ ಎಂದು ಹೋಟೆಲ್‌ ಸಂಘ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ| ಸಹಾಯಕಿಯಾಗಿ ದಲಿತ ಮಹಿಳೆ ನೇಮಕ; ಮೂರು ತಿಂಗಳ ಕಾಲ ಮುಚ್ಚಿದ ಅಂಗನವಾಡಿ

ಭಾರತೀಯ ಸಮಾಜದಲ್ಲಿ ಆಳವಾಗಿ ಈಗಲೂ ಬೇರೂರಿರುವ ಜಾತಿ ಪೂರ್ವಾಗ್ರಹದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಒಡಿಶಾ ರಾಜ್ಯದ ಕೇಂದ್ರಪಾರ ಜಿಲ್ಲೆಯ ರಾಜನಗರ ಬ್ಲಾಕ್‌ನ ಹಳ್ಳಿಯ ನಿವಾಸಿಗಳು ಸುಮಾರು ಮೂರು ತಿಂಗಳ ಹಿಂದೆ, ದಲಿತ...

ಆತ್ಮಕಥೆ ಜಟಾಪಟಿ: ನಕಲಿ ಪುಸ್ತಕ ಬಳಸಿ ರಾಷ್ಟ್ರೀಯ ಭದ್ರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್ ಕ್ಷಮೆಯಾಚಿಸಬೇಕು: ಬಿಜೆಪಿ ಒತ್ತಾಯ

ನವದೆಹಲಿ: ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂಎಂ ನರವಾಣೆ ತಮ್ಮ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ" ಪ್ರಕಾಶಕರು ಬಿಡುಗಡೆ ಮಾಡಿದ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕೆ ರಾಹುಲ್ ಗಾಂಧಿ ಅವರ ಮುಖ...

ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ

ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ' ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. "ಪುಸ್ತಕದ ಮುದ್ರಿತ ಅಥವಾ...

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...