Homeಮುಖಪುಟಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

- Advertisement -
- Advertisement -

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 9) ನೋಟಿಸ್ ಜಾರಿ ಮಾಡಿದೆ.

ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಹಿರಿಯ ವಕೀಲ ಪವನ್ ನಾರಂಗ್ ಅವರ ವಾದಗಳನ್ನು ಆಲಿಸಿದ ನಂತರ ನೋಟಿಸ್ ಜಾರಿ ಮಾಡಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ನಿಗದಿಪಡಿಸಲಾಗಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರ ಸೆಪ್ಟೆಂಬರ್ 11ರಂದು ನೀಡಿದ ಆದೇಶವನ್ನು ಪ್ರಶ್ನಿಸಿ ಸೆಂಟ್ರಲ್ ದೆಹಲಿ ಕೋರ್ಟ್ ಬಾರ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಹಾಗೂ ವಕೀಲ ವಿಕಾಸ್ ತ್ರಿಪಾಠಿ ಅವರು ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಚೌರಾಸಿಯಾ ಅವರು ಅರ್ಜಿ ವಜಾಗೊಳಿಸುವ ವೇಳೆ, ತಮ್ಮ ನ್ಯಾಯಾಲಯಕ್ಕೆ ಭಾರತೀಯ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಮಾತ್ರ ಮೀಸಲಾಗಿರುವ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲು ಅಧಿಕಾರ ಇಲ್ಲ, ಏಕೆಂದರೆ ನಾಗರಿಕತ್ವವು ಸ್ವತಂತ್ರ ರಾಷ್ಟ್ರ ಮತ್ತು ಅದರ ಪ್ರಜೆಗಳ ನಡುವಿನ ವಿಶೇಷ ಸಂಬಂಧವಾಗಿದೆ ಎಂದಿದ್ದರು.

ಅಲ್ಲದೆ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಾಧೀಶರು, ಇಂತಹ ಕ್ರಮವು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗಿದೆ. ಆಪಾದಿತ ಅಪರಾಧಗಳಾದ ವಂಚನೆ, ನಕಲಿ ಮತ್ತು ಇತರವುಗಳನ್ನು ರೂಪಿಸಲು ಅಗತ್ಯವಾದ ಮೂಲಭೂತ ಅಂಶಗಳು ಸ್ಪಷ್ಟವಾಗಿ ಕೊರತೆಯಿದೆ. ಅರ್ಜಿದಾರರು 1980ರ ಪ್ರಮಾಣೀಕರಿಸದ ಚುನಾವಣಾ ಪಟ್ಟಿಯ ನಕಲು ಪ್ರತಿಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಬಲವಾದ ಆರೋಪಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

ಕಾನೂನುಬದ್ಧ ಆಧಾರವಿಲ್ಲದ ಆರೋಪಗಳನ್ನು ಬಳಸಿ, ನ್ಯಾಯಾಲಯಕ್ಕೆ ಇಲ್ಲದ ಅಧಿಕಾರವನ್ನು ಬಲವಂತವಾಗಿ ಒದಗಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದರು.

ತನ್ನ ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಆದೇಶ ಪ್ರಶ್ನಿಸಿ ವಕೀಲ ತ್ರಿಪಾಠಿ ವಿಶೇಷ ನ್ಯಾಯಾಲಯಕ್ಕೆ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸೋನಿಯಾ ಗಾಂಧಿಯವರ ಹೆಸರು 1980ರಲ್ಲಿ ನವದೆಹಲಿಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ, ಅವರು ಭಾರತದ ನಾಗರಿಕರಾಗಿದ್ದು 1983ರಲ್ಲಿ ಎಂಬುವುದು ವಕೀಲ ತ್ರಿಪಾಠಿಯ ವಾದವಾಗಿದೆ.

ಸೋನಿಯಾ ಗಾಂಧಿ ಸೇರಿದಂತೆ ಪರಿಚಿತ ಮತ್ತು ಅಪರಿಚಿತ ವ್ಯಕ್ತಿಗಳು ಸುಳ್ಳು ದಾಖಲೆ ಪತ್ರಗಳನ್ನು ರಚಿಸುವ ಕಾನೂನುಬಾಹಿರ ಕೃತ್ಯಗಳನ್ನು ಮಾಡಿದ್ದಾರೆ. ಸೋನಿಯಾ ಗಾಂಧಿ ಭಾರತದ ನಾಗರಿಕಲ್ಲದಿದ್ದರೂ, ಅವರ ಹೆಸರನ್ನು ಸಾರ್ವಜನಿಕ ದಾಖಲೆಗಳಲ್ಲಿ ಸೇರಿಸಲಾಗಿತ್ತು. ಇದನ್ನು ಮ್ಯಾಜಿಸ್ಟ್ರೇಟ್ ಗಂಭೀರವಾಗಿ ಗಮನಿಸಿಲ್ಲ ಎಂದು ವಕೀಲ ತ್ರಿಪಾಠಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...