Homeಮುಖಪುಟಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್...ಕಾರಣ?

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

- Advertisement -
- Advertisement -

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮ್ಮೆ ಹೂಡಿದ್ದು, ಬರೋಬ್ಬರಿ 18 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ.

ಝೀ ನ್ಯೂಸ್ ಮತ್ತು ಅದರ ಮಾತೃ ಕಂಪನಿ ಝೀ ಮೀಡಿಯಾ ಕಾರ್ಪೊರೇಷನ್ ಅನ್ನು ಈ ಪ್ರಕರಣದಲ್ಲಿ ಪ್ರಮುಖ ಪ್ರತಿವಾದಿಗಳಾಗಿ ಹೆಸರಿಸಲಾಗಿದೆ.

ಜೂನ್ 2022ರಲ್ಲಿ ತಾನು ಸೆರೆ ಹಿಡಿದ ವಿಡಿಯೋ ಬಳಸಿಕೊಂಡಿದ್ದಕ್ಕೆ ಸೇನ್ ಮೊಕದ್ದಮೆ ಹೂಡಿದ್ದಾರೆ. ಜೂನ್ 3 ಮತ್ತು 10ರ ನಡುವೆ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದ ಸೇನ್, ಭಾರತಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದ್ದ ಚಿರತೆಗಳನ್ನು ಸೆರೆಹಿಡಿದು ಸಾಗಿಸುವುದನ್ನು ದಾಖಲಿಸಿದ್ದರು.

ವಿಶ್ವದ ಮೊದಲ ಅಂತರಖಂಡ ವನ್ಯಜೀವಿ ಸ್ಥಳಾಂತರದಲ್ಲಿ, ಭಾರತವು 2022 ಮತ್ತು 2023ರಲ್ಲಿ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ 20 ಆಫ್ರಿಕನ್ ಚಿರತೆಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದೆ. ಈ ಚಿರತೆಗಳು 1952ರಲ್ಲಿ ಭಾರತದಲ್ಲಿ ನಿರ್ನಾಮವಾಗಿದೆ ಎಂದು ಘೋಷಿಸಲಾಗಿದೆ.

ತಾನು ಚಿತ್ರೀಕರಿಸಿದ ವಿಡಿಯೋದ 12 ಸೆಕೆಂಡ್‌ಗಳ ಕಿರು ತುಣುಕನ್ನು ಝೀ ನ್ಯೂಸ್ ಹಿಂದಿ ಚಾನೆಲ್‌ನ ಪ್ರೈಮ್‌ಟೈಮ್ ಕಾರ್ಯಕ್ರಮವಾದ ಡಿಎನ್‌ಎಯಲ್ಲಿ ಪ್ರಸಾರ ಮಾಡಲಾಗಿದೆ ಎಂದು ಸೇನ್ ಆರೋಪಿಸಿದ್ದಾರೆ. 2022ರ ಸೆಪ್ಟೆಂಬರ್ 16 ಮತ್ತು 17ರಂದು ವಿಡಿಯೋ ತುಣುಕುಗಳನ್ನು ಬಳಸಿಕೊಳ್ಳಲಾಗಿದೆ. ಆ ಸಮಯದಲ್ಲಿ ರೋಹಿತ್ ರಂಜನ್ ಅವರು ಕಾರ್ಯಕ್ರಮವನ್ನು ನಿರೂಪಿಸುತ್ತಿದ್ದರು ಎಂದು ಹೇಳಿಕೊಂಡಿದ್ದಾರೆ.

ತಾನು ಚಿತ್ರೀಕರಿಸಿದ 12 ಸೆಕೆಂಡ್‌ಗಳ ವಿಡಿಯೋ ಅತ್ಯಂತ ಅಪರೂಪದ್ದು. ಪ್ರಾಣಿಗಳ ಛಾಯಾಚಿತ್ರಣಲ್ಲಿ ಇಂಥದ್ದು ಕಾಣ ಸಿಗುವುದು ಬಹಳ ಕಡಿಮೆ. ಅದಕ್ಕಿಂತ ಮುಖ್ಯವಾಗಿ, ಈ ವಿಡಿಯೋಗೆ ಸಂಬಂಧಿಸಿದ ಚಿರತೆಗಳ ಸ್ಥಳಾಂತರ ಯೋಜನೆ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದಿದೆ. ಯಾವ ದೊಡ್ಡ ಬೆಕ್ಕು ಪ್ರಭೇದವನ್ನೂ (ಚಿರತೆ, ಸಿಂಹ, ಹುಲಿ ಇತ್ಯಾದಿ) ಒಂದು ಖಂಡದಿಂದ ಮತ್ತೊಂದು ಖಂಡಕ್ಕೆ ಸಾಗಿಸಿ ಬಿಡುಗಡೆ ಮಾಡಿದ ಯೋಜನೆ ಇದುವರೆಗೆ ಎಂದೂ ನಡೆದಿರಲಿಲ್ಲ ಎಂದು ಸೇನ್ ಮೊಕದ್ದಮೆಯಲ್ಲಿ ತಿಳಿಸಿದ್ದಾರೆ.

ಪ್ರಸಾರದ ವೇಳೆ ಝೀ ನ್ಯೂಸ್ ಚಾನೆಲ್‌ ವಿಡಿಯೋ ತನ್ನದೇ ‘ಸೂಪರ್ ಎಕ್ಸ್‌ಕ್ಲೂಸಿವ್’ ಎಂದು ಹೇಳಿಕೊಂಡಿತ್ತು. ವಾಟರ್‌ಮಾರ್ಕ್‌ಗಳು, ಟಿಕ್ಕರ್‌ಗಳು ಮತ್ತು ಆನ್-ಸ್ಕ್ರೀನ್ ಟೆಕ್ಸ್‌ ಅನ್ನೂ ಹಾಕಿಕೊಂಡಿತ್ತು. ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳನ್ನು ಸಾಗಿಸುವ ವಿಮಾನದೊಳಗೆ ಪ್ರವೇಶಿಸುವ ಅಪರೂಪದ ಅವಕಾಶ ತನಗೆ ದೊರೆತಿದೆ ಎಂಬಂತೆ ಬಿಂಬಿಸಿತ್ತು ಎಂದು ಸೇನ್ ಆರೋಪಿಸಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಕದ್ದು ತನ್ನದು ಎಂದು ಹೇಳಿಕೊಂಡಿದೆ. ಇದರಿಂದ ವಿಡಿಯೋ ತೆಗೆದ ತನಗೆ ಸಿಗಬೇಕಿದ್ದ ಖ್ಯಾತಿ ಮತ್ತು ಹಣ ಎರಡೂ ನಷ್ಟವಾಗಿದೆ ಎಂದು ಸೇನ್ ಹೇಳಿದ್ದಾರೆ.

ಝೀ ನ್ಯೂಸ್ ವಿರುದ್ದ ಕಾನೂನು ಕ್ರಮ ಅಗತ್ಯವಾಗಿದೆ. ಏಕೆಂದರೆ, ಝೀ ನ್ಯೂಸ್ ಮೊದಲ ಬಾರಿಗೆ ಈ ರೀತಿ ಮಾಡುತ್ತಿಲ್ಲ. ಭಾರತೀಯ ಟಿವಿ ಚಾನೆಲ್‌ಗಳಲ್ಲಿ ಇದೊಂದು ದೊಡ್ಡ ರೋಗವೇ ಆಗಿದೆ. ಕ್ಯಾಮರಾಮ್ಯಾನ್‌ಗಳು ಕಷ್ಟಪಟ್ಟು ಸೆರೆ ಹಿಡಿದ ವಿಡಿಯೋಗಳನ್ನು ಹಣ ಅಥವಾ ಕನಿಷ್ಠ ಕ್ರೆಡಿಟ್ ಕೂಡ ಕೊಡದೆ ಚಾನೆಲ್‌ಗಳು ತಮ್ಮ ಸ್ವಂತದ್ದು ಎಂಬಂತೆ ಬಳಸಿಕೊಳ್ಳುತ್ತಿವೆ. ಇದಕ್ಕೆ ಅವರು ‘ಫೇರ್ ಯೂಸ್’ (fair use) ಎಂಬ ಹೆಸರು ಕೊಟ್ಟು ಸಮರ್ಥನೆ ಮಾಡಿಕೊಳ್ಳುತ್ತಾರೆ. ಆದರೆ, ಇದು ನಿಜವಾಗಿಯೂ ಫೇರ್ ಯೂಸ್ ಅಲ್ಲ, ಇದು ಸ್ಪಷ್ಟ ಕಳ್ಳತನ” ಎಂದು ಸೇನ್ ಹೇಳಿಕೊಂಡಿದ್ದಾರೆ.

ತನ್ನ ವಿಡಿಯೋವನ್ನು ಉದ್ದೇಶಪೂರ್ವಕವಾಗಿ ಕದ್ದು ಬಳಸಿಕೊಳ್ಳುವ ಮೂಲಕ ಝೀ ನ್ಯೂಸ್ ಹಕ್ಕುಸ್ವಾಮ್ಯ ಕಾಯ್ದೆಯ ಉಲ್ಲಂಘನೆ ಮಾತ್ರ ಮಾಡಿಲ್ಲ. ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಕಾಯ್ದೆಗಳನ್ನೂ ಉಲ್ಲಂಘಿಸಿದೆ ಎಂದು ಸೇನ್ ತಿಳಿಸಿದ್ದಾರೆ.

ಝೀ ನ್ಯೂಸ್ ನನ್ನ ಕೆಲಸವನ್ನು ಬಳಸಿಕೊಂಡಿದ್ದು ಇದೇ ಮೊದಲಲ್ಲ. 2014ರಲ್ಲಿ ಝೀ ನ್ಯೂಸ್ (ಬಂಗಾಳಿ) ಜಾದವ್‌ಪುರ ವಿಶ್ವವಿದ್ಯಾಲಯದ ಪ್ರತಿಭಟನೆಗಳ ಕುರಿತಾದ ಒಂದು ವರದಿಯಲ್ಲಿ ನನ್ನ ಒಂದು ಫೋಟೋವನ್ನು ಅನುಮತಿಯಿಲ್ಲದೆ ಪ್ರಕಟಿಸಿದೆ ಎಂದು ಹೇಳಿದ್ದಾರೆ.

ಝೀ ನ್ಯೂಸ್ ನನ್ನ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದೆ. ಈ ಬಗ್ಗೆ ಪರಿಹಾರ ಕೋರಿ ನಾನು ಅವರನ್ನು ಹಲವು ಬಾರಿ ಸಂಪರ್ಕಿಸಿದ್ದೇನೆ. ಎರಡು ಬಾರಿ ಅವರ ಕಚೇರಿ ತೆರಳಿ ಮಾತುಕತೆಯೂ ನಡೆಸಿದ್ದೇನೆ. ಕೊನೆಗೆ ಅವರು ಬಿಲ್ ಹಾಕು ಹಣ ಕೊಡುತ್ತೇವೆ ಎಂದು ಹೇಳಿದ್ದಾರೆ. ಅದಕ್ಕೆ 18 ಕೋಟಿ ಪರಿಹಾರ ಕೋರಿ ಮೊಕದ್ದಮೆ ಹೂಡಿದ್ದೇನೆ ಎಂದು ಸೇನ್ ತಿಳಿಸಿದ್ದಾರೆ.

ತಮ್ಮ ಮೊಕದ್ದಮೆಯಲ್ಲಿ, ಸೇನ್ ಅವರು ಝೀ ನ್ಯೂಸ್ ಅನುಮತಿಯಿಲ್ಲದೆ ತಮ್ಮ ವಿಶೇಷ ಚಿರತೆ ಸ್ಥಳಾಂತರ ದೃಶ್ಯಗಳನ್ನು ಪ್ರಸಾರ ಮಾಡಿದ್ದರಿಂದ ಉಂಟಾದ ಆರ್ಥಿಕ ಮತ್ತು ವೃತ್ತಿಪರ ನಷ್ಟಗಳ ಪಟ್ಟಿಯನ್ನು ವಿವರಿಸಿದ್ದಾರೆ.

ತಾನು ಸೆರೆಹಿಡಿದ ವಿಶೇಷ ವಿಡಿಯೋವನ್ನು ಮಾರಾಟ ಮಾಡುವ ಮೊದಲೇ ಝೀ ನ್ಯೂಸ್ ಸೂಪರ್ ಎಕ್ಸ್‌ಕ್ಲೂಸಿವ್ ಎಂದು ಪ್ರಸಾರ ಮಾಡಿದೆ. ಇದರಿಂದ ನನಗೆ ತುಂಬಾ ನಷ್ಟವಾಗಿದೆ. ಝೀ ನ್ಯೂಸ್ ವಿಡಿಯೋ ಪ್ರಸಾರ ಮಾಡುವ ಮೊದಲು ನಾನು ಎನ್‌ಡಿಟಿವಿಗೆ ವಿಡಿಯೋ ಮಾರಾಟ ಸಂಬಂಧ ರೂ. 1.25 ಲಕ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದೆ. ನಂತರ ಅದು ಕೈ ತಪ್ಪಿ ಹೋಯಿತು. ಇತರ ಚಾನೆಲ್‌ಗಳೂ ನನ್ನ ವಿಡಿಯೋ ಖರೀದಿಸುತ್ತಿತ್ತು. ಆದರೆ, ಝೀ ಪ್ರಸಾರ ಮಾಡಿದ್ದರಿಂದ ಯಾರೂ ನನ್ನ ವಿಡಿಯೋ ಖರೀದಿಸಲು ಮುಂದೆ ಬರಲಿಲ್ಲ ಎಂದು ಸೇನ್ ಹೇಳಿಕೊಂಡಿದ್ದಾರೆ.

ಕೋಲ್ಕತ್ತಾದ ವಾಣಿಜ್ಯ ನ್ಯಾಯಾಲಯವು ಈ ಮೊಕದ್ದಮೆಯನ್ನು ಒಪ್ಪಿಕೊಂಡಿದ್ದು, ಜನವರಿ 16ರಂದು ವಿಚಾರಣೆ ನಡೆಸಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...