Homeಮುಖಪುಟದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಡಿಸೆಂಬರ್ 9) ಕಾಯ್ದಿರಿಸಿದೆ.

ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 2ರಂದು ಜಾಮೀನು ನಿರಾಕರಿಸಿದ ತೀರ್ಪಿನ ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ನ್ಯಾಯಪೀಠ ಇಂದು ಮುಕ್ತಾಯಗೊಳಿಸಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ (ಯುಎಪಿಎ) ಅಪರಾಧಗಳನ್ನು ಎಸಗಿರುವ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಪ್ರಕರಣದಲ್ಲಿ ಈ ಏಳು ಮಂದಿ ಐದು ವರ್ಷಗಳಿಗೂ ಹೆಚ್ಚು ಸಮಯದಿಂದ ಬಂಧನದಲ್ಲಿದ್ದಾರೆ.

ಐದು ವರ್ಷಗಳು ಕಳೆದರೂ ಗಲಭೆಯ ಹಿಂದಿನ ಪಿತೂರಿ ಆರೋಪಕ್ಕೆ ಯಾವುದೇ ಪುರಾವೆಗಳು ದೊರೆತಿಲ್ಲ ಮತ್ತು ವಿಚಾರಣೆ ವಿಳಂಬವಾಗಿದೆ ಎಂಬ ಈ ಎರಡು ವಿಷಯಗಳನ್ನು ಮುಂದಿಟ್ಟುಕೊಂಡು ಅರ್ಜಿದಾರರು ನ್ಯಾಯಾಲಯದಲ್ಲಿ ವಾದಿಸಿದ್ದಾರೆ.

ಗುಲ್ಫಿಶಾ ಫಾತಿಮಾ ಪರವಾಗಿ ಹಿರಿಯ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ, ಉಮರ್ ಖಾಲಿದ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಶಾರ್ಜೀಲ್ ಇಮಾಮ್ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್ ದೇವ್ ವಾದ ಮಂಡಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರ ಪರವಾಗಿ ವಾದ ಮಂಡಿಸಿದ ವಕೀಲರು, ದೆಹಲಿ ಗಲಭೆ ಘಟನೆ ಆಕಸ್ಮಿಕ ಎಂದು ಕರೆಯುವುದಕ್ಕೆ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದಾರೆ. ಅದು ಸಂಪೂರ್ಣ ಯೋಜಿತ, ದೇಶವ್ಯಾಪಿ ಷಡ್ಯಂತ್ರವಾಗಿತ್ತು. ಅದರ ಏಕೈಕ ಉದ್ದೇಶ ಸರ್ಕಾರವನ್ನು ಉರುಳಿಸುವುದು ಮತ್ತು ದೇಶದ ಆರ್ಥಿಕತೆಯನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸುವುದಾಗಿತ್ತು ಎಂದಿದ್ದಾರೆ.

ಈ ಷಡ್ಯಂತ್ರಕ್ಕೆ ಆರೋಪಿಗಳು ಡೆಲ್ಲಿ ಪ್ರೊಟೆಸ್ಟ್ ಸಪೋರ್ಟ್ ಗ್ರೂಪ್ (ಡಿಪಿಎಸ್‌ಜಿ), ಜಾಮಿಯಾ ಅವರ್ನೆಸ್ ಕ್ಯಾಂಪೇನ್ ಟೀಮ್, ಮುಸ್ಲಿಂ ಸ್ಟೂಡೆಂಟ್ ಆರ್ಗನೈಸೇಶನ್ಸ್, ಪಿಂಜ್ರಾ ತೋಡ್ ಮುಂತಾದ ವಾಟ್ಸಾಪ್ ಗ್ರೂಪ್‌ಗಳಲ್ಲಿ ನಡೆಸಿದ ಸಂಭಾಷಣೆ ಮತ್ತು ಹಣ ವರ್ಗಾವಣೆ ಸಾಕ್ಷ್ಯ ಎಂದು ಹೇಳಿದ್ದಾರೆ. ಅಲ್ಲದೆ, ವಿಚಾರಣೆ ಇಷ್ಟೊಂದು ವರ್ಷ ತಡವಾಗಿರುವುದಕ್ಕೆ ಆರೋಪಿಗಳೇ ಕಾರಣ ಎಂದು ವಾದಿಸಿದ್ದಾರೆ.

ಆರೋಪಿಗಳು ಒಬ್ಬೊಬ್ಬರಾಗಿ ಜಾಮೀನು ಅರ್ಜಿ ಸಲ್ಲಿಸುವುದು, ದಾಖಲೆಗಳ ಕಾಪಿ ಕೇಳುವುದು, ಸಾಕ್ಷಿಗಳನ್ನು ವಿಚಾರಣೆಗೆ ಕರೆಸದಂತೆ ತಡೆಯುವುದು ಮುಂತಾದ ತಂತ್ರಗಳನ್ನು ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪಿಗಳು ಸಂಪೂರ್ಣ ಸಹಕಾರ ನೀಡಿದರೆ ಕೇವಲ ಎರಡು ವರ್ಷದೊಳಗೆ ಎಲ್ಲಾ ಸಾಕ್ಷಿಗಳನ್ನು ವಿಚಾರಣೆ ನಡೆಸಿ ಪ್ರಕರಣ ಪೂರ್ಣಗೊಳಿಸಬಹುದು ಎಂದು ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...