Homeಮುಖಪುಟಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

- Advertisement -
- Advertisement -

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...