Homeಮುಖಪುಟಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

- Advertisement -
- Advertisement -

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್ 10) ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳ ಹಿನ್ನೆಲೆ ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, “ಮಾಧ್ಯಮ ವರದಿಗಳಿಂದ ನನಗೆ ‘ವೀರ ಸಾವರ್ಕರ್ ಪ್ರಶಸ್ತಿ’ ಪ್ರಧಾನ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಅದನ್ನು ಇಂದು ದೆಹಲಿಯಲ್ಲಿ ಪ್ರಧಾನ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ಈ ಪ್ರಶಸ್ತಿ ಘೋಷಣೆಯ ಬಗ್ಗೆ ನನಗೆ ನಿನ್ನೆ ಕೇರಳದಲ್ಲಿರುವಾಗ ಗೊತ್ತಾಯಿತು. ಅಲ್ಲಿ ನಾನು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ ಚಲಾಯಿಸಲು ಹೋಗಿದ್ದೆ. ತಿರುವನಂತಪುರಂನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಾ, ನನಗೆ ಅಂತಹ ಪ್ರಶಸ್ತಿಯ ಬಗ್ಗೆ ತಿಳಿದಿಲ್ಲ. ನಾನು ಅದನ್ನು ಸ್ವೀಕರಿಸಲು ಒಪ್ಪದೆ ನನ್ನ ಹೆಸರನ್ನು ಘೋಷಿಸುವುದು ಆಯೋಜಕರ ಬೇಜವಾಬ್ದಾರಿಯಾಗಿದೆ ಎಂದಿದ್ದೆ”

“ಅದರ ಹೊರತಾಗಿಯೂ, ಇಂದು ದೆಹಲಿಯಲ್ಲಿ, ಕೆಲವು ಮಾಧ್ಯಮಗಳು ಅದೇ ಪ್ರಶ್ನೆಯನ್ನು ಕೇಳುತ್ತಲೇ ಇವೆ. ಆದ್ದರಿಂದ, ಈ ವಿಷಯವನ್ನು ಸ್ಪಷ್ಟವಾಗಿ ಸ್ಪಷ್ಟಪಡಿಸಲು ನಾನು ಈ ಹೇಳಿಕೆಯನ್ನು ನೀಡುತ್ತಿದ್ದೇನೆ” ಎಂದಿದ್ದಾರೆ.

“ಪ್ರಶಸ್ತಿಯ ಸ್ವರೂಪ, ಅದನ್ನು ನೀಡುವ ಸಂಸ್ಥೆ ಅಥವಾ ಯಾವುದೇ ಇತರ ಸಂದರ್ಭೋಚಿತ ವಿವರಗಳ ಬಗ್ಗೆ ಗೊತ್ತಿಲ್ಲದಿರುವಾಗ, ನಾನು ಇಂದು ಕಾರ್ಯಕ್ರಮಕ್ಕೆ ಹಾಜರಾಗುವ ಅಥವಾ ಪ್ರಶಸ್ತಿಯನ್ನು ಸ್ವೀಕರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈರೇಂಜ್ ರೂರಲ್ ಡೆವಲಪ್‌ಮೆಂಟ್ ಸೊಸೈಟಿ (ಹೆಚ್‌ಆರ್‌ಡಿಎಸ್‌) ಎಂಬ ಸರ್ಕಾರೇತರ ಸಂಸ್ಥೆ ಶಶಿ ತರೂರ್ ಅವರಿಗೆ ‘ವೀರ್ ಸಾವರ್ಕರ್ ಇಂಟರ್ನ್ಯಾಷನಲ್ ಇಂಪ್ಯಾಕ್ಟ್ ಅವಾರ್ಡ್ 2025’ ನೀಡಲು ಮುಂದಾಗಿತ್ತು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬುಧವಾರ ನವದೆಹಲಿಯ ಎನ್‌ಡಿಎಂಸಿ ಕನ್ವೆನ್ಷನ್ ಹಾಲ್‌ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರೀಯ ಅಭಿವೃದ್ಧಿ, ಸಾಮಾಜಿಕ ಸುಧಾರಣೆ ಮತ್ತು ಮಾನವೀಯ ಸಂಪರ್ಕದಲ್ಲಿ ಬದಲಾವಣೆಗಾಗಿ ಶ್ರಮಿಸಿದ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಗೌರವಿಸಲಾಗುತ್ತದೆ ಎಂದು ವರದಿ ಹೇಳಿದೆ.

ತರೂರ್‌ಗೆ ಮಾಹಿತಿ ನೀಡಿದ್ದೆವು

ಹೆಚ್‌ಆರ್‌ಡಿಎಸ್‌ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯದರ್ಶಿ ಅಜಿ ಕೃಷ್ಣನ್, ‘ರಾಷ್ಟ್ರ ನಿರ್ಮಾಣಕ್ಕಾಗಿ ಮಾಡಿದ ಕೆಲಸ’ ಪರಿಗಣಿಸಿ ತರೂರ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ತರೂರ್ ಅವರಿಗೆ ಪ್ರಶಸ್ತಿ ನೀಡುವ ಬಗ್ಗೆ ಒಂದು ತಿಂಗಳ ಹಿಂದೆಯೇ ತಿಳಿಸಲಾಗಿತ್ತು. ನಾವು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿ ಪ್ರಶಸ್ತಿಯ ಬಗ್ಗೆ ತಿಳಿಸಿದ್ದೆವು ಮತ್ತು ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದ್ದೆವು. ಇದಲ್ಲದೆ ಎರಡು ವಾರಗಳ ಹಿಂದೆ ನಮ್ಮ ತೀರ್ಪುಗಾರರ ಉಸ್ತುವಾರಿ ರವಿಕಾಂತ್ ಅವರು ತರೂರ್ ಅವರನ್ನು ಅವರ ಮನೆಯಲ್ಲಿ ಭೇಟಿಯಾಗಿದ್ದರು. ಯಾವುದೇ ಸಮಸ್ಯೆ ಇಲ್ಲದೆ ತರೂರ್ ಕಾರ್ಯಕ್ರಮಕ್ಕೆ ಹಾಜರಾಗಲು ಮತ್ತು ಪ್ರಶಸ್ತಿ ಸ್ವೀಕರಿಸಲು ಒಪ್ಪಿಕೊಂಡಿದ್ದರು. ಈಗ ಕಾಂಗ್ರೆಸ್‌ನ ಒತ್ತಡದಿಂದ ಅವರು ಅಲ್ಲಗಳೆಯುತ್ತಿರಬಹುದು ಎಂದು ಅಜಿ ಕೃಷ್ಣನ್ ಹೇಳಿರುವುದಾಗಿ ಪತ್ರಿಕೆ ಉಲ್ಲೇಖಿಸಿದೆ.

ತರೂರ್ ಮತ್ತು ಕಾಂಗ್ರೆಸ್‌

ಬುಧವಾರ ತಿರುವನಂತಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್, ತರೂರ್ ಸೇರಿದಂತೆ ಪಕ್ಷದ ಯಾವುದೇ ಸದಸ್ಯರು ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಬಾರದು. ಏಕೆಂದರೆ ಆತ ಬ್ರಿಟಿಷರ ಮುಂದೆ ತಲೆಬಾಗಿದವರು ಎಂದು ಹೇಳಿದ್ದರು.

ತರೂರ್ ಆ ಪ್ರಶಸ್ತಿಯನ್ನು ಸ್ವೀಕರಿಸುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಏಕೆಂದರೆ, ಆ ಪ್ರಶಸ್ತಿ ಸ್ವೀಕರಿಸುವುದು ಕಾಂಗ್ರೆಸ್‌ಗೆ ಅವಮಾನ ಮತ್ತು ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತದೆ ಎಂದು ಮುರಳೀಧರನ್ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...