Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...