Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...