Homeಮುಖಪುಟಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

- Advertisement -
- Advertisement -

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ.

ಡಿಸೆಂಬರ್ 2ರಂದು ಹೊರಡಿಸಿದ ತನ್ನ ಆದೇಶದಲ್ಲಿ, ಸುದ್ದಿ ನಿಯಂತ್ರಣ ಸಂಸ್ಥೆಯು ಬಂಧನದ ವರದಿ ಮಾಡುವಾಗ ಸುದ್ದಿ ನಿರೂಪಕ ‘ಒಂದು ನಿರ್ದಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಪೂರ್ವಾಗ್ರಹ ಪೀಡಿತ ವಿಷಯವನ್ನು ಹೇಳಿದ್ದಾರೆ. ಪೂರ್ವನಿರ್ಧರಿತ ಕಾರ್ಯಸೂಚಿಯೊಂದಿಗೆ ವರದಿ ಮಾಡಿದ್ದಾರೆ ಎಂದು ಹೇಳಿದೆ.

ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎಂಬ ಮಾನವ ಹಕ್ಕುಗಳ ಸಂಘಟನೆಯ ದೂರಿನ ಮೇರೆಗೆ ಎನ್‌ಬಿಡಿಎಸ್‌ಎ ಕ್ರಮ ಕೈಗೊಂಡಿದೆ.

ಹಾಡಿನ ಮೂಲಕ ರಾಜ್ಯದ ಜನಾಂಗೀಯ ಸಮುದಾಯಗಳ ವಿರುದ್ಧ ದ್ವೇಷವನ್ನು ಪ್ರಚೋದಿಸಿದ್ದಾರೆ ಎಂಬ ಆರೋಪದ ಮೇಲೆ ಹುಸೇನ್ ಅವರನ್ನು ಆಗಸ್ಟ್ 31, 2024ರಂದು ಅಸ್ಸಾಂ ಪೊಲೀಸರು ಬಂಧಿಸಿದ್ದರು.

ಹಾಡಿನಲ್ಲಿ ಹುಸೇನ್ ಅವರು, “ಅಸ್ಸಾಂ ನಿಮ್ಮಪ್ಪನ ಆಸ್ತಿಯಾ? ಅದಕ್ಕೆ ಅವರನ್ನು (ಮಿಯಾ ಮುಸ್ಲಿಮರು) ಹೊರಗಟ್ಟಲು ನೋಡುತ್ತಿದ್ದೀರಾ? ಎಂದು ಸರ್ಕಾರವನ್ನು ಕೇಳಿದ್ದರು.

“ಎಲ್ಲಾ ಸಮುದಾಯದವರೂ ತಪ್ಪು ಮಾಡುತ್ತಾರೆ. ಆದರೆ ಕೇವಲ ‘ಮಿಯಾ’ಗಳ ಮೇಲೆಯೇ (ಅಂದರೆ ಅಸ್ಸಾಮಿನಲ್ಲಿ ವಾಸಿಸುತ್ತಿರುವ ಬಂಗಾಳಿ ಮೂಲದ ಮುಸ್ಲಿಮರ ಮೇಲೆಯೇ) ದಾಳಿ ಮಾಡಲಾಗುತ್ತಿದೆ. ಆಗಾಗ ಅವರು ‘ಅಕ್ರಮ ವಲಸಿಗರು’ ಎಂದು ಸುಳ್ಳಾರೋಪ ಮಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಹುಸೇನ್ ಬಂಧನದ ನಂತರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ, ಬಿಹು ಹಾಡುಗಳನ್ನು ಬದಲಾಯಿಸುವ ಪ್ರಯತ್ನಗಳನ್ನು ರಾಜ್ಯದ ಜನರು ಸಹಿಸುವುದಿಲ್ಲ ಎಂದು ಹೇಳಿದ್ದರು.

“ಕೆಲವರು ‘ಮಿಯಾ ಬಿಹು’ವನ್ನು ಜನಪ್ರಿಯಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಂತಹ ಒಬ್ಬ ಗಾಯಕ ಅಲ್ತಾಫ್ ಹುಸೇನ್ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ” ಎಂದಿದ್ದರು.

ಸೆಪ್ಟೆಂಬರ್ 2, 2024 ರಂದು ಟೈಮ್ಸ್ ನೌ ನವಭಾರತ್ ಪ್ರಸಾರ ಮಾಡಿದ ಹುಸೇನ್ ಬಂಧನದ ವರದಿಯಲ್ಲಿ ಪ್ರತಿಭಟನಾ ಹಾಡನ್ನು ಒಂದು ಸಮುದಾಯದ ವಿರುದ್ದ ದ್ವೇಷ ಹರಡಲು ಬಳಸಿಕೊಳ್ಳಲಾಗಿದೆ ಎಂದು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್ ಎನ್‌ಬಿಡಿಎಸ್‌ಎಗೆ ನೀಡಿದ ದೂರಿನಲ್ಲಿ ತಿಳಿಸಿತ್ತು.

ಚಾನೆಲ್‌ನ ನಿರೂಪಕ ಪರಸ್ಪರ ಸಂಬಂಧವಿಲ್ಲದ ಹಲವು ಘಟನೆಗಳನ್ನು ಒಟ್ಟಾಗಿ ಜೋಡಿಸಿ, ಅವೆಲ್ಲವೂ ಒಂದು ದೊಡ್ಡ ಷಡ್ಯಂತ್ರದ ಭಾಗ ಎಂಬಂತೆ ತೋರಿಸಿದ್ದಾರೆ ಎಂದು ಹೇಳಿತ್ತು.

ನಿರೂಪಕ ಹುಸೇನ್ ಅವರ ಹಾಡನ್ನು ಹಿಂದೂ ಸಂಸ್ಕೃತಿಯ ವಿರುದ್ಧ ನಡೆಯುತ್ತಿರುವ ದೇಶವ್ಯಾಪಿ ಷಡ್ಯಂತ್ರದ ಒಂದು ಭಾಗ ಎಂದು ತೋರಿಸಿದ್ದಾರೆ. ಅದಕ್ಕಾಗಿ ಅಸ್ಸಾಂ, ಕೇರಳ ಮತ್ತು ಕಾಶ್ಮೀರದಲ್ಲಿ ನಡೆದ ಬೇರೆ ಬೇರೆ ಘಟನೆಗಳನ್ನು ಜೋಡಿಸಿದ್ದಾರೆ. ಇಡೀ ದೇಶದಲ್ಲಿ ಹಿಂದೂಗಳ ಮೇಲೆ ಒಂದು ಯುದ್ಧದಂತೆ ದಾಳಿ ನಡೆಯುತ್ತಿದೆ ಎಂಬ ಸಂಪೂರ್ಣ ಕೃತಕವಾದ, ಭಯ ಹುಟ್ಟಿಸುವ ಕಥೆಯನ್ನು ನಿರ್ಮಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಮಿಯಾ’ ಎಂಬ ಪದವನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರೊಂದಿಗೆ ಸಮೀಕರಿಸಿ, ನಿರೂಪಕ ಇಡೀ ಸಮುದಾಯವನ್ನು ತಪ್ಪಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.

ಚಾನೆಲ್ ತನ್ನ ವಿರುದ್ದದ ಎಲ್ಲಾ ಆರೋಪಗಳನ್ನು ನಿರಾಕರಿಸಿತ್ತು. ತಾನು ಬಂಧನ ಮತ್ತು ಮುಖ್ಯಮಂತ್ರಿಯ ಹೇಳಿಕೆಗಳನ್ನು ಮಾತ್ರ ವರದಿ ಮಾಡಿದ್ದೇನೆ. ವರದಿಯಲ್ಲಿ ಹೇಳಿದ ವಿಷಯಗಳೆಲ್ಲವೂ ವಾಸ್ತವಿಕ ಎಂದು ವಾದಿಸಿತ್ತು.

ಹುಸೇನ್ ಅವರ ಬಂಧನ ಸುದ್ದಿಯನ್ನು ವರದಿ ಮಾಡುವುದು ‘ಸುದ್ದಿ ಪ್ರಸಾರಕರ ಹಕ್ಕಿನ ಭಾಗ’ ಎಂಬುವುದನ್ನು ಎನ್‌ಬಿಡಿಎಸ್‌ಎ ಒಪ್ಪಿಕೊಂಡಿದೆ. ಆದರೆ, ಸುದ್ದಿ ನಿರೂಪಕ ಹುಸೇನ್ ಅವರ ಹಾಡನ್ನು ಒಂದು ದೈಹಿಕ ಹಲ್ಲೆ ಅಥವಾ ಬಲಾತ್ಕಾರದ ಘಟನೆಯೊಂದಿಗೆ ಜೋಡಿಸಿದ್ದಾರೆ. ಆ ಘಟನೆಗೂ ಹಾಡಿಗೂ ಸಂಬಂಧವೇ ಇಲ್ಲ ಎಂದು ಹೇಳಿದೆ.

ನಿರೂಪಕ ನಿಷ್ಪಕ್ಷಪಾತವಾಗಿ ಸುದ್ದಿ ಮಾಡಲು ಬಂದವರಲ್ಲ; ಬದಲಿಗೆ ತಾನು ಮೊದಲೇ ರೂಪಿಸಿಟ್ಟಿದ್ದ ದ್ವೇಷದ ಕಥೆಗೆ ಈ ಘಟನೆಯನ್ನು ಒಂದು ಸಾಧನವನ್ನಾಗಿ ಮಾತ್ರ ಬಳಸಿಕೊಂಡಿದ್ದಾರೆ. ಈ ರೀತಿಯ ವರದಿಯು ಸುದ್ದಿ ಪ್ರಸಾರದ ನೈತಿಕ ನಿಯಮ ಸಂಹಿತೆ ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತದೆ.

ಪ್ರಸಾರ ಮಾಡಲಾದ ಕಾರ್ಯಕ್ರಮದ ಆಕ್ಷೇಪಾರ್ಹವಾದ ಎಲ್ಲಾ ಭಾಗಗಳನ್ನು (ವಿಡಿಯೋ, ಟೈಟಲ್, ನಿರೂಪಕರ ಹೇಳಿಕೆ ಇತ್ಯಾದಿ) ತಕ್ಷಣ ತೆಗೆದುಹಾಕಬೇಕು. ನಂತರ ತಿದ್ದುಪಡಿ ಮಾಡಿದ ಕಾರ್ಯಕ್ರಮದ ಆವೃತ್ತಿಯನ್ನು ಏಳು ದಿನಗಳ ಒಳಗೆ ಸಂಸ್ಥೆಗೆ ಸಲ್ಲಿಸಬೇಕು ಎಂದು ಎನ್‌ಬಿಡಿಎಸ್‌ಎ ಟೈಮ್ಸ್ ನೌ ನವಭಾರತ್ ಚಾನೆಲ್‌ಗೆ ಆದೇಶಿಸಿದೆ. ಇದನ್ನು ಮಾಡದಿದ್ದರೆ ಮುಂದಿನ ಕ್ರಮ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...