Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...