Homeಮುಖಪುಟಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಹೈಕೋರ್ಟ್ ನ್ಯಾಯಾಧೀಶರಿಗೆ ಪತ್ರ

- Advertisement -
- Advertisement -

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದಿದೆ.

ಈ ಕುರಿತ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ.

ಘಟನೆ ಸಂಬಂಧ ಪ್ರಮುಖ ಆರೋಪಿಗಳಾದ ಸೌಮಿಕ್ ಗೋಲ್ಡರ್ (23), ಸ್ವರ್ಣೇಂದು ಚಕ್ರವರ್ತಿ (32) ಮತ್ತು ತರುಣ್ ಭಟ್ಟಾಚಾರ್ಯ (51) ಅವರನ್ನು ಬುಧವಾರ (ಡಿಸೆಂಬರ್ 11) ಬೆಳಿಗ್ಗೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಬಂಧಿತರ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೌಮಿಕ್ ಗೋಲ್ಡರ್ ಪ್ರಕರಣ ಪ್ರಮುಖ ಆರೋಪಿ ಎಂದು ಗುರುತಿಸಲಾಗಿದೆ.

ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ರಾಜಕೀಯ ಸಮಾವೇಶಗಳು ಸೇರಿದಂತೆ ವಿವಿಧ ರೀತಿಯ ಬೃಹತ್ ಕಾರ್ಯಕ್ರಮಗಳು ನಡೆಯುವಾಗ ಕಲರ್‌ಫುಲ್ ಟ್ಯೂಬ್ ಪಾಪಡ್, (ಬಣ್ಣದ ನಳಿಕೆ ರೀತಿಯ ಹಪ್ಪಳ), ಲೋಝೆಂಜ್‌ಗಳು (ಮಾತ್ರೆ ರೀತಿಯ ಬಣ್ಣ ತಿಂಡಿಗಳು), ಕಾಟನ್ ಕ್ಯಾಂಡಿ, ಸ್ಕಿನ್ನಿ ಐಸ್‌ಕ್ರೀಮ್ ಸ್ಟಿಕ್‌ಗಳು ಇತ್ಯಾದಿ ಸಣ್ಣಪುಟ್ಟ ತಿಂಡಿ-ತಿನಿಸುಗಳನ್ನು ಮಾರಿ ಜೀವನ ನಡೆಸುವ ನೂರಾರು ಮಂದಿಯಿದ್ದಾರೆ.

ಅಂತಹ ಮಾರಾಟಗಾರರಲ್ಲಿ ಹಲ್ಲೆಗೊಳಗಾದ ಶೇಖ್ ರಿಯಾಝುಲ್ ಕೂಡ ಒಬ್ಬರು. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಅರಂಬಾಗ್ ನಿವಾಸಿಯಾದ ಇವರು, ಸುಮಾರು ಇಪ್ಪತ್ತು ವರ್ಷಗಳಿಂದ ಕೋಲ್ಕತ್ತಾದಲ್ಲಿ ಪಫ್ಸ್ ಮಾರಾಟ ಮಾಡುತ್ತಿದ್ದಾರೆ ಎಂದು ದಿ ವೈರ್ ವರದಿ ಹೇಳಿದೆ.

ಭಾನುವಾರದ ಭಗವದ್ಗೀತೆ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ರಿಯಾಝುಲ್ ಅವರು ವೆಜ್ ಮತ್ತು ಚಿಕನ್ ಎರಡೂ ರೀತಿಯ ಪಫ್ಸ್‌ಗಳನ್ನು ಬಾಕ್ಸ್‌ವೊಂದರಲ್ಲಿ ಹಾಕಿಕೊಂಡು ಮಾರಾಟ ಮಾಡುತ್ತಿದ್ದರು.

ಈ ವೇಳೆ, ಕೆಲವರು ನಿಮ್ಮ ಬಾಕ್ಸ್‌ನಲ್ಲಿ ಚಿಕನ್ ಪಫ್ಸ್ ಇದೆಯಾ? ಎಂದು ರಿಯಾಝುಲ್ ಅವರಿಗೆ ಕೇಳಿದ್ದಾರೆ. ರಿಯಾಝುಲ್ ಇದೆ ಎಂದಾಗ ಅವರು ಥಳಿಸಲು ಶುರು ಮಾಡಿದ್ದಾರೆ. ರಿಯಾಝುಲ್ ಅವರ ಹೆಸರು ಗೊತ್ತಾದ ಮೇಲೆ ಇನ್ನಷ್ಟು ತೀವ್ರವಾಗಿ ಥಳಿಸಿದ್ದಾರೆ. ಅಲ್ಲದೆ, ಬಸ್ಕಿ ಹೊಡೆಸಿದ್ದಾರೆ ಎಂದು ದಿ ವೈರ್ ವರದಿ ವಿವರಿಸಿದೆ.

“ಅವರು ನನ್ನಲ್ಲಿದ್ದ 3 ಸಾವಿರ ರೂಪಾಯಿ ವಸ್ತುವನ್ನು ಹಾಳುಗಡೆವಿದರು. ಆ ಮೊತ್ತ ನನ್ನ ಒಂದು ವಾರದ ಆದಾಯಕ್ಕಿಂತ ಹೆಚ್ಚು” ಎಂದು ರಿಯಾಝುಲ್ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ರಿಯಾಝುಲ್ ಪ್ರತಿದಿನ ಕೋಲ್ಕತ್ತಾದ ಮಧ್ಯಭಾಗದಲ್ಲಿರುವ ಬೇಕರಿಯೊಂದರಿಂದ ವೋಲ್‌ಸೇಲ್ ದರದಲ್ಲಿ ಪಫ್ಸ್ ಖರೀದಿಸಿ, ನಗರದ ವಿವಿಧ ಭಾಗಗಳಲ್ಲಿ ನಡೆದುಕೊಂಡು ಹೋಗಿ ಅವುಗಳನ್ನು ಮಾರಾಟ ಮಾಡುತ್ತಿದ್ದರು. ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಫುಟ್ಬಾಲ್ ಪಂದ್ಯಗಳು ಅಥವಾ ದೊಡ್ಡ ರಾಜಕೀಯ ಸಮಾವೇಶಗಳು ಇದ್ದರೆ, ಅಲ್ಲಿಯೇ ವ್ಯಾಪಾರ ಮಾಡಿ ದಿನವೊಂದಕ್ಕೆ 500 ರಿಂದ 1,000 ರೂ.ಗಳವರೆಗೆ ಗಳಿಸುತ್ತಿದ್ದರು. ಸಾಮಾನ್ಯ ದಿನಗಳಲ್ಲಿ, ಅವರ ಆದಾಯ 200-300 ರೂ. ಇತ್ತು. ತಲಾ 30-35 ರೂ. ಬೆಲೆಗೆ ಪಫ್ಸ್ ಮಾರುತ್ತಿದ್ದರು. ಕೆಲಸ ನಿಮಿತ್ತ ನಗರದ ಖಿದ್ದರ್ಪೋರ್‌ನಲ್ಲಿ ವಾಸಿಸುತ್ತಿದ್ದರು.

ರಿಯಾಝುಲ್ ಈ ಪಫ್ಸ್ ಮಾರಿಯೇ ಜೀವನದ ಬಂಡಿ ಓಡಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಹಿರಿಯ ಮಗ ಹೈದರಾಬಾದ್‌ನಲ್ಲಿ ಆಭರಣ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರೆ, ಕಿರಿಯ ಮಗ ವರ್ಕ್‌ಶಾಪ್‌ ಒಂದರಲ್ಲಿ ಅಪ್ರೆಂಟಿಸ್ ಆಗಿದ್ದಾನೆ.

ಹಲ್ಲೆಯ ವಿಡಿಯೋ ಬಹಿರಂಗವಾದಾಗಿನಿಂದ ನನ್ನ ಕುಟುಂಬ ಭಯದಿಂದ ಬದುಕುತ್ತಿದೆ ಎಂದು ರಿಯಾಝುಲ್ ಹೇಳಿಕೊಂಡಿದ್ದಾರೆ. “ನನಗೆ ಏನಾಯಿತು ಎಂದು ನನ್ನ ಮನೆಯವರು ಅಳುತ್ತಿದ್ದಾರೆ. ಅವರು ಭಯಭೀತರಾಗಿದ್ದಾರೆ. ನಾನು ಕಡು ಬಡವ. ಈಗ ನನಗೆ ನನ್ನ ಕುಟುಂಬದ ಭವಿಷ್ಯದ ಚಿಂತೆಯಾಗಿದೆ. ನಾನು ಯಾರನ್ನೂ ಮಾಂಸಹಾರ ಖರೀದಿಸಲು ಒತ್ತಾಯಿಸಿಲ್ಲ. ಆದರೂ, ಅವರು ನನಗೆ ಏಕೆ ಹೊಡೆದರು ಎಂದು ಗೊತ್ತಿಲ್ಲ” ಎಂದಿದ್ದಾರೆ.

ರಿಯಾಝುಲ್ ಮೇಲೆ ಹಲ್ಲೆ ನಡೆದಿರುವುದು ಒಂದು ಘಟನೆ ಮಾತ್ರವಲ್ಲ. ಟೋಪ್ಸಿಯಾ ಮೂಲದ ಶೇಖ್ ಸಲಾವುದ್ದೀನ್ ಎಂಬ ಮಾರಾಟಗಾರ ಸೇರಿದಂತೆ ಕನಿಷ್ಠ ಇಬ್ಬರು ಇತರ ಪಫ್ಸ್ ಮಾರಾಟಗಾರರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

“ಅವತ್ತು ನನ್ನ ಮೇಲೆಯೂ ಹಲ್ಲೆ ನಡೆಯುತ್ತಿತ್ತು. ಆದರೆ, ನಾನು ಆಗಲೇ ಮನೆಗೆ ಹೋದ ಕಾರಣ ಸ್ವಲ್ಪದರಲ್ಲಿ ಪಾರಾದೆ. ನಮ್ಮಲ್ಲಿ ಸುಮಾರು 15ರಿಂದ 20 ಜನರು ಪಫ್ಸ್ ಮಾರುತ್ತಾರೆ. ದುರ್ಗಾ ಪೂಜೆಯಿಂದ ಹಿಡಿದು ವಿವಿಧ ಪಂದ್ಯಾಟಗಳವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಹಲವು ವರ್ಷಗಳಿಂದ ನಾವು ಪಫ್ಸ್ ಮಾರಿದ್ದೇವೆ. ಎಂದಿಗೂ ಇಂತಹ ಅನುಭ ಆಗಿಲ್ಲ ಎಂದು ರಿಯಾಝುಲ್ ಅವರ ಸ್ನೇಹಿತ ಹಾಗೂ ಪಫ್ಸ್ ಮಾರಾಟಗಾರ ಶೇಖ್ ಮೊಯ್ದುಲ್ ಇಸ್ಲಾಂ ಹೇಳಿರುವುದಾಗಿ ದಿ ವೈರ್‌ ತಿಳಿಸಿದೆ.

ರಿಯಾಝುಲ್ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್) (ಸಿಪಿಐ(ಎಂ)) ನಾಯಕ ಮತ್ತು ವಕೀಲ ಸಯಾನ್ ಬಂಡೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜಯ್ ಪಾಲ್ ಅವರಿಗೆ ಪತ್ರ ಬರೆದು, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಅನುಸಾರ ಇದು ಗುಂಪು ಹತ್ಯೆಗೆ ಸಮಾನವಾದ ಪ್ರಕರಣ ಎಂದಿದ್ದಾರೆ. ನ್ಯಾಯಾಲಯ ಸ್ವಯಂ ಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಲು ಮನವಿ ಮಾಡಿದ್ದಾರೆ.

ಬಂಡೋಪಾಧ್ಯಾಯ ಅವರು ಸೋಮವಾರ (ಡಿಸೆಂಬರ್ 8) ಮಧ್ಯಾಹ್ನ ಕೋಲ್ಕತ್ತಾದ ಮೈದಾನ್ ಪೊಲೀಸ್ ಠಾಣೆಗೆ ಭೇಟಿ ನೀಡಿ ನೇರವಾಗಿ ಘಟನೆ ಸಂಬಂಧ ದೂರು ದಾಖಲಿಸಿದ್ದಾರೆ. ದೂರಿನ ಜೊತೆಗೆ ಹೈಕೋರ್ಟ್ ನ್ಯಾಯಾಧೀಶರಿಗೆ ಬರೆದ ಪತ್ರದ ಪ್ರತಿಯನ್ನೂ ಸಲ್ಲಿಸಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಪ್ರಕಾರ, ಗುಂಪು ಹಲ್ಲೆ ಕೂಡ ‘ಗುಂಪು ಹತ್ಯೆ’ಯ ವ್ಯಾಪ್ತಿಗೆ ಬರುತ್ತದೆ. ಈ ಘಟನೆ ಕೋಲ್ಕತ್ತಾದ ಹೃದಯ ಭಾಗದಲ್ಲಿ ನಡೆದಿದೆ, ದೂರದ ಜಿಲ್ಲೆಯಲ್ಲಿ ಅಲ್ಲ. ಇಂತಹ ಘಟನೆ ನಗರದ ಮಧ್ಯಭಾಗದಲ್ಲಿ ನಡೆದಿದ್ದರೂ ಕೋಲ್ಕತ್ತಾ ಪೊಲೀಸರು ಮೌನವಾಗಿದ್ದಾರೆ. ಅವರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕಿತ್ತು ಎಂದು ಬಂಡೋಪಾಧ್ಯಾಯ ಹೇಳಿದ್ದರು.

ಪ್ರಮುಖ ಆರೋಪಿ ಉತ್ತರ 24 ಪರಗಣ ಜಿಲ್ಲೆಯ ಬಿಜೆಪಿ ಪದಾಧಿಕಾರಿ ಎಂದು ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿಕೊಂಡಿದ್ದಾರೆ. ಆದರೆ, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

ಸಿಪಿಐ(ಎಂ) ನಾಯಕಿ ದೀಪ್ಸಿತಾ ಧರ್ ರಿಯಾಝುಲ್ ಮೇಲಿನ ದಾಳಿಯ ವಿರುದ್ಧ ಮೊದಲು ಧ್ವನಿ ಎತ್ತಿದವರು. ಇವರು ಸಂತ್ರಸ್ತ ವ್ಯಾಪಾರಿಗಳಿಗೆ ಪರಿಹಾರ ನೀಡಲು ನಿಧಿಸಂಗ್ರಹ ಅಭಿಯಾನ ಪ್ರಾರಂಭಿಸಿದ್ದಾರೆ.

ಮಾಂಸಹಾರ ಸಾಮಾನ್ಯವಾಗಿರುವ ಬಂಗಾಳದಂತಹ ಸ್ಥಳದಲ್ಲಿ ಮಾಂಸಹಾರ ಮಾರಾಟದ ಹೆಸರಿನಲ್ಲಿ ಹಲ್ಲೆ ನಡೆದಿರುವುದು ಆಶ್ಚರ್ಯಕರ. ವೈರಲ್ ವಿಡಿಯೋದಲ್ಲಿ ಹಲ್ಲೆಕೋರರು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ ಪೊಲೀಸರು ಯಾರನ್ನೂ ಬಂಧಿಸಿಲ್ಲ ಏಕೆ? ಚುನಾವಣಾ ಲಾಭಕ್ಕಾಗಿ ಈ ದ್ವೇಷ ಸಂಸ್ಕೃತಿಯನ್ನು ಪ್ರೋತ್ಸಾಹಿಸಲಾಗುತ್ತಿದೆಯೇ ಎಂದು ನಾನು ಬಿಜೆಪಿ ಮತ್ತು ಟಿಎಂಸಿ ಎರಡನ್ನೂ ಪ್ರಶ್ನಿಸಲು ಬಯಸುತ್ತೇವೆ ಎಂದು ದೀಪ್ಸಿತಾ ಧರ್ ಹೇಳಿದ್ದರು.

“ನೀವು ಮಾಂಸಾಹಾರ ತಿನ್ನದಿದ್ದರೆ ಖರೀದಿಸಬೇಡಿ, ಆದರೆ ಮಾರಾಟಗಾರನಿಗೆ ಥಳಿಸಿದ್ದು ಏಕೆ? ಅದು ಅವರ ಜೀವನೋಪಾಯ. ನಾನು ಈ ಘಟನೆಯನ್ನು ಖಂಡಿಸುತ್ತೇನೆ” ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಬರೆದುಕೊಂಡಿದ್ದರು.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...