Homeಮುಖಪುಟಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ...

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

- Advertisement -
- Advertisement -

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಗುರುವಾರ ನಿರಾಕರಿಸಿದೆ.

ಥೈಲ್ಯಾಂಡ್‌ನಿಂದ ದೆಹಲಿಗೆ ಹಿಂದಿರುಗಿದ ನಂತರ, ತಕ್ಷಣದ ಬಂಧನದಿಂದ ರಕ್ಷಣೆ ಕೋರಿ ಸಹೋದರರು ಬುಧವಾರ ನಾಲ್ಕು ವಾರಗಳ ಟ್ರಾನ್ಸಿಟ್ (ಸಾರಿಗೆ) ನಿರೀಕ್ಷಣಾ ಜಾಮೀನು ಕೋರಿದರು. ಭಾರತೀಯ ಕಾನೂನು ಜಾರಿ ಸಂಸ್ಥೆಗಳ ಕೋರಿಕೆಯ ಮೇರೆಗೆ ಗುರುವಾರ ಮುಂಜಾನೆ ಥಾಯ್ ಪೊಲೀಸರು ಸಹೋದರರನ್ನು ಬಂಧಿಸಿದ್ದು, ಅಧಿಕಾರಿಗಳ ಪ್ರಕಾರ, ಅವರನ್ನು ಗಡೀಪಾರು ಮಾಡುವ ಪ್ರಕ್ರಿಯೆಯೂ ಆರಂಭವಾಗಿದೆ.

ಟ್ರಾನ್ಸಿಟ್ ಜಾಮೀನು ಅರ್ಹತೆಯ ಆಧಾರದ ಮೇಲೆ ಆಗುವ ನಿರ್ಧಾರವಲ್ಲ, ಬದಲಿಗೆ ಸರಿಯಾದ ಸಮಯಕ್ಕೆ ನ್ಯಾಯಾಲಯ ಸುರಕ್ಷಿತ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಇರುವ ಸೀಮಿತ ರಕ್ಷಣೆಯ ಭಾಗ ಎಂದು ವಕೀಲರು ಹೇಳಿದ್ದಾರೆ.

ಈ ವೇಳೆ ವಿದೇಶದಲ್ಲಿರುವ ಆರೋಪಿಯೊಬ್ಬನ ವಿರುದ್ಧ ಬ್ಲೂ ಮತ್ತು ರೆಡ್ ಕಾರ್ನರ್ ನೋಟಿಸ್‌ಗಳನ್ನು ಜಾರಿಗೊಳಿಸಲು ಯೋಜಿಸಲಾಗಿದ್ದಲ್ಲಿ, ತಾತ್ಕಾಲಿಕ ರಕ್ಷಣೆಯೊಂದಿಗೆ ಭಾರತಕ್ಕೆ ಮರಳಲು ಅನುಮತಿ ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ಅವರು ಉಲ್ಲೇಖಿಸಿದ್ದಾರೆ.

ಟ್ರಾನ್ಸಿಟ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ “ನ್ಯಾಯಾಲಯವನ್ನು ಸುರಕ್ಷಿತವಾಗಿ ತಲುಪಲು ನಾನು ಕೆಲವು ದಿನಗಳವರೆಗೆ ಮಾತ್ರ ರಕ್ಷಣೆ ಬಯಸುತ್ತೇನೆ. ಒಬ್ಬ ನಾಗರಿಕನು ಕಾನೂನಿಗೆ ವಿಧೇಯನಾಗಲು ಸಿದ್ಧನಿರುವಾಗ, ನ್ಯಾಯಾಲಯವು ಸಹಾಯ ಹಸ್ತ ಚಾಚಬೇಕು, ಮುಷ್ಟಿಯಲ್ಲ” ಎಂದು ಗೌರವ್ ಲೂಥ್ರಾಸ್ ಹೇಳಿದ್ದಾರೆ. 

ಈ ಅರ್ಜಿಯನ್ನು ವಿರೋಧಿಸಿರುವ ಗೋವಾ ರಾಜ್ಯದ ವಕೀಲರು, ಬೆಂಕಿ ಅವಘಡದ ನಂತರ ಲೂಥ್ರಾ ಸಹೋದರರು ಗೋವಾವನ್ನು ತೊರೆದು “ಕಾನೂನು ಪ್ರಕ್ರಿಯೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ” ಎಂದು ವಾದಿಸಿದ್ದಾರೆ. ಸಮನ್ಸ್ ಅಥವಾ ವಾರಂಟ್‌ ಸಲ್ಲಿಸಲು ನಿರಾಕರಿಸುವವರಿಗೆ ಕಾನೂನು ಸಹಾಯ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. 

ನ್ಯಾಯಾಂಗದ ಅವಲೋಕನಗಳನ್ನು ಉಲ್ಲೇಖಿಸಿ, ವಕೀಲರು, “ಒಬ್ಬ ವ್ಯಕ್ತಿಯು ಕಾನೂನು ಪ್ರಕ್ರಿಯೆಯನ್ನು ತಪ್ಪಿಸಲು ಪ್ರಯತ್ನಿಸುತ್ತಿದ್ದಾನೆಂದು ತಿಳಿದ ನಂತರ, ನ್ಯಾಯಾಲಯವು ಅವನ ಸಹಾಯಕ್ಕೆ ಬರಬಾರದು” ಎಂದು ಹೇಳಿದ್ದಾರೆ. 

ನಿರೀಕ್ಷಣಾ ಜಾಮೀನು ವಿವೇಚನೆಯಿಂದ ನೀಡಲಾಗುವ ಪರಿಹಾರವಾಗಿದ್ದು, “ವಾರಂಟ್‌ಗಳ ಕಾರ್ಯಗತಗೊಳಿಸುವಿಕೆಯಲ್ಲಿ ಅಡೆತಡೆಗಳನ್ನು ಸೃಷ್ಟಿಸಿದ ಅಥವಾ ತಲೆಮರಿಸಿಕೊಂಡವರಿಗೆ ಇದನ್ನು ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...