Homeಮುಖಪುಟಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

ಇಂಡಿಗೋ ಬಿಕ್ಕಟ್ಟು: ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳ ಅಮಾನತು 

- Advertisement -
- Advertisement -

ನವದೆಹಲಿ: ಇಂಡಿಗೋ ವಿಮಾನದ ಕಾರ್ಯಾಚರಣೆಯಲ್ಲಿ ಉಂಟಾದ ಪ್ರಮುಖ ಅಡಚಣೆಗಳಿಂದಾಗಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿ ಸಾವಿರಾರು ವಿಮಾನಗಳ ಹಾರಾಟ ರದ್ದತಿಗೆ ಕಾರಣವಾದ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ನಾಲ್ವರು ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ ಗಳನ್ನು (ಎಫ್ಒಐ) ಅಮಾನತುಗೊಳಿಸಿದೆ. 

ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಾಗರಿಕ ವಿಮಾನಯಾನ ನಿರ್ದೇಶನಾಲಯದೊಳಗಿನ ಹಿರಿಯ ಅಧಿಕಾರಿಗಳಾಗಿದ್ದು, ನಿಯಂತ್ರಕ ಮತ್ತು ಸುರಕ್ಷತಾ ಮೇಲ್ವಿಚಾರಣೆಗೆ ಜವಾಬ್ದಾರರಾಗಿರುತ್ತಾರೆ. ವಿಮಾನಯಾನ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ವಾಯುಯಾನ ಮಾನದಂಡಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ಅವರನ್ನು ನಿಯೋಜಿಸಲಾಗಿರುತ್ತದೆ.

ಪೈಲಟ್‌ಗಳು ಮತ್ತು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ವಿಮಾನಯಾನ ಸಂಸ್ಥೆಗಳು ಮತ್ತು ವಾಯುಯಾನ ಸಿಬ್ಬಂದಿಗೆ ತಪಾಸಣೆ, ಲೆಕ್ಕಪರಿಶೋಧನೆ ಮತ್ತು ಪ್ರಮಾಣೀಕರಣ ಪ್ರಕ್ರಿಯೆಗಳನ್ನು ನಡೆಸುವ ಮೂಲಕ ವಾಯುಯಾನ ಸುರಕ್ಷತೆಯನ್ನು ಕಾಪಾಡುವಲ್ಲಿ  ವಿಮಾನ ಕಾರ್ಯಾಚರಣೆಯ ಇನ್ ಸ್ಪೆಕ್ಟರ್ಗಳು ನಿರ್ಣಾಯಕ ಪಾತ್ರ ವಹಿಸುತ್ತಾರೆ. ನಿಯಂತ್ರಕ ಅನುಸರಣೆಯನ್ನು ಪರಿಶೀಲಿಸುವುದು, ತರಬೇತಿ ಮತ್ತು ಹಾರಾಟದ ಮಾನದಂಡಗಳನ್ನು ಮೇಲ್ವಿಚಾರಣೆ ಮಾಡುವುದು ಮತ್ತು ಭಾರತದಾದ್ಯಂತ ಅಪಘಾತ ತಡೆಗಟ್ಟುವ ಪ್ರಯತ್ನಗಳಿಗೆ ಕೊಡುಗೆ ನೀಡುವುದು ಅವರ ಕರ್ತವ್ಯಗಳಲ್ಲಿ ಸೇರಿವೆ.

“ಇಂಡಿಗೋ ಡಿಸೆಂಬರ್ 12, ಶುಕ್ರವಾರ ಬೆಂಗಳೂರು ವಿಮಾನ ನಿಲ್ದಾಣದಿಂದ 54 ವಿಮಾನಗಳನ್ನು ರದ್ದುಗೊಳಿಸಿದೆ -ಇವುಗಳಲ್ಲಿ 31 ಆಗಮನ ಮತ್ತು 23 ನಿರ್ಗಮನಗಳು” ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ಮತ್ತು ಸಿಒಒ ಇಸಿಡ್ರೆ ಪೋರ್ಕ್ವೆರಾಸ್ ಅವರು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಡಿಜಿಸಿಎಯ ತನಿಖಾ ಸಮಿತಿಯ ಮುಂದೆ ಮತ್ತೆ ಹಾಜರಾಗಲಿದ್ದಾರೆ.

ಗುರುವಾರ, ಡಿಜಿಸಿಎ, ಬಿಕ್ಕಟ್ಟಿನಿಂದ ಬಳಲುತ್ತಿರುವ ಇಂಡಿಗೊ ವಿಮಾನಯಾನ ಸಂಸ್ಥೆಯ ಪರಿಶೀಲನೆಯನ್ನು ಚುರುಕುಗೊಳಿಸಿದ್ದು, ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲು ಅಧಿಕಾರಿಗಳು ವಿಮಾನಯಾನ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಬೀಡುಬಿಟ್ಟಿದ್ದಾರೆ ಮತ್ತು ತನಿಖಾ ಸಮಿತಿಯು ಸಿಇಒ ಪೀಟರ್ ಎಲ್ಬರ್ಸ್ ಅವರನ್ನು ವಿಚಾರಣೆಗೆ ಒಳಪಡಿಸಿದೆ.

ಗುರುವಾರ ಡಿಜಿಸಿಎ ರಚಿಸಿದ್ದ ವಿಚಾರಣಾ ಸಮಿತಿಯ ಮುಂದೆ ಹಾಜರಾದ ಎಲ್ಬರ್ಸ್ ಅವರನ್ನು ಶುಕ್ರವಾರ ಮತ್ತೆ ಹಾಜರಾಗುವಂತೆ ಕೇಳಲಾಗಿದೆ.

ನಾಲ್ವರು ಸದಸ್ಯರ ಸಮಿತಿಯು ಜಂಟಿ ಮಹಾನಿರ್ದೇಶಕ ಸಂಜಯ್ ಬ್ರಹ್ಮಣೆ, ಉಪ ಮಹಾನಿರ್ದೇಶಕ ಅಮಿತ್ ಗುಪ್ತಾ, ಹಿರಿಯ ವಿಮಾನ ಕಾರ್ಯಾಚರಣೆ ಇನ್ಸ್‌ಪೆಕ್ಟರ್ ಕಪಿಲ್ ಮಾಂಗ್ಲಿಕ್ ಮತ್ತು ಎಫ್‌ಒಐ ಲೋಕೇಶ್ ರಾಂಪಾಲ್ ಅವರನ್ನು ಒಳಗೊಂಡಿದ್ದು, ಪ್ರಮುಖ ದೇಶೀಯ ವಾಹಕದಲ್ಲಿ ವ್ಯಾಪಕ ಕಾರ್ಯಾಚರಣೆಯ ಅಡಚಣೆಗಳ ಮೂಲ ಕಾರಣಗಳನ್ನು ಗುರುತಿಸುವ ಆದೇಶವನ್ನು ಹೊಂದಿದೆ.

ಈ ವರ್ಷದ ನವೆಂಬರ್ 1 ರಿಂದ ಜಾರಿಗೆ ಬಂದ ಪೈಲಟ್‌ಗಳಿಗೆ ಇತ್ತೀಚಿನ ಕರ್ತವ್ಯ ಅವಧಿ ಮತ್ತು ವಿಶ್ರಾಂತಿ ಮಾನದಂಡಗಳನ್ನು ಜಾರಿಗೆ ತರಲು ಮಾನವಶಕ್ತಿ ಯೋಜನೆ, ಏರಿಳಿತದ ರೋಸ್ಟರಿಂಗ್ ವ್ಯವಸ್ಥೆಗಳು ಮತ್ತು ವಿಮಾನಯಾನ ಸಂಸ್ಥೆಯ ಸಿದ್ಧತೆಯನ್ನು ನಿರ್ಣಯಿಸುವುದು ಸಮಿತಿಯ ಆದೇಶದಲ್ಲಿ ಸೇರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...