Homeಕರ್ನಾಟಕಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

- Advertisement -
- Advertisement -

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. 

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹ ನೀಡಬೇಕು, ಈ ಮೂಲಕ ಯುವ ರೈತರ ಮದುವೆಯನ್ನು ಪ್ರೋತ್ಸಾಹಿಸುವ ಕೆಲಸ ಇನ್ನಾದರೂ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೆಲೆ ಸರ್ಕಾರಿ ಕೆಲಸಕ್ಕೆ ನೇಮಕಾತಿ ಆಗುವುದು ತೀರಾ ವಿಳಂಬವಾಗಿದೆ. ಇದರಿಂದ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಸರ್ಕಾರದ ನೀತಿಯಿಂದಾಗಿ ಖಾಸಗಿ ಕಂಪನಿಗಳು ಕರ್ನಾಟಕಕ್ಕೆ ಉದ್ಯಮ ಸ್ಥಾಪನೆಗಾಗಿ ಬರುತ್ತಿಲ್ಲ ಎಂದು ಆರೋಪಿಸಿದರು.

ರೈತರ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲ, ಸಮರ್ಪಕವಾಗಿ ಬೆಳೆ ಬೆಳೆಯಲು ನೀರು ಇಲ್ಲ. ಕೃಷಿ ನಂಬಿಕೊಂಡಿರುವವರ ಬದುಕು ಮೂರಾ ಬಟ್ಟೆಯಾಗಿದೆ. ಇತ್ತ ಕೃಷಿಯನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳಬೇಕೆಂದಿರುವ ಯುವ ರೈತರಿಗೆ ಹೆಣ್ಣು ಸಿಗುತ್ತಿಲ್ಲ. ಇದರಿಂದ ಯುವ ರೈತರಿಗೆ ಬದುಕಿನ ಗ್ಯಾರಂಟಿ ಇಲ್ಲವಾಗಿದೆ ಎಂದು ವಿಷಾದಿಸಿದರು.

ರೈತರನ್ನು ಮದುವೆಯಾಗುವ ಹುಡುಗಿಯರಿಗೆ ₹5 ಲಕ್ಷ ಮಂಜೂರು ಮಾಡುವಂತೆ ಕರ್ನಾಟಕ ಸರ್ಕಾರವನ್ನು ಕೆಆರ್‌ಆರ್‌ಎಸ್ ಒತ್ತಾಯಿಸಿದೆ.

ರೈತ ಯುವಕರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರವಾಗಿ ಕಡಿಮೆಯಾಗುತ್ತಿದೆ ಮತ್ತು ಇದು ಒಂದು ಉದಯೋನ್ಮುಖ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಇನ್ನೂ ಇದರ ಬಗ್ಗೆ ಗಮನ ಹರಿಸಿಲ್ಲ ಎಂದು ಕೆಆರ್‌ಆರ್‌ಎಸ್ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.

ಇದೇ ತಿಂಗಳ 5ನೇ ತಾರೀಖಿನಂದು ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಸಹ ಈ ಬೇಡಿಕೆಯನ್ನು ಸರ್ಕಾರದ ಮುಂದೆ ಇಟ್ಟಿತ್ತು.  

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು ಕೃಷಿಯಲ್ಲಿ ತೊಡಗಿರುವ ಹುಡುಗರನ್ನು ಮದುವೆಯಾಗುವ ಹುಡುಗಿಯರ ಸಂಖ್ಯೆ ತೀವ್ರ ಮಟ್ಟದಲ್ಲಿ ಇಳಿಕೆ ಆಗಿದೆ. ಇದು ಹೊಸ ರೀತಿಯ ಸಾಮಾಜಿಕ ಸಮಸ್ಯೆಯಾಗಿದ್ದು, ಸರ್ಕಾರ ಈ ಬಗ್ಗೆ ಗಮನ ಹರಿಸಬೇಕು ಎಂದು ಹೇಳಿದ್ದರು. 

ಇನ್ನು ಯುವ ಕೃಷಿಕರನ್ನು ಮದುವೆಯಾಗುವ ವಧುಗಳಿಗೆ 5 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರವನ್ನು ಈ ಮೂಲಕ ಒತ್ತಾಯಿಸುತ್ತಿದೆ. ಇದು ವೈವಾಹಿಕ ಮೈತ್ರಿಗಳನ್ನು ಪ್ರೋತ್ಸಾಹಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದರು. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...