Homeಕರ್ನಾಟಕಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

- Advertisement -
- Advertisement -

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತ ತನ್ನ ಆದೇಶವನ್ನು ಸಮರ್ಥಿಸಿಕೊಂಡು ಅಫಿಡವಿಟ್‌ ಸಲ್ಲಿಸಿದೆ. ಅಲ್ಲದೇ ರಿಟ್‌ ಅರ್ಜಿಯಲ್ಲಿ ಯಾವುದೇ ಉರುಳಿಲ್ಲ ಹಾಗಾಗಿ ರಿಟ್‌ ಅರ್ಜಿಯನ್ನು ತಿರಸ್ಕರಿಸಬೇಕು ಅಂದು ಮನವಿ ಮಾಡಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ ಅಲೆಮಾರಿ ಸಮುದಾಯ ಪ್ರವರ್ಗ ಎ ಎಂದು ವರ್ಗೀಕರಿಸಿ ಶೇ. 1 ಮೀಸಲಾತಿಯನ್ನು ನೀಡಿತ್ತು. ರಾಜ್ಯ ಸರ್ಕಾರದ ಸಚಿವ ಸಂಪುಟವು ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗದ ವರದಿಯನ್ನು ಮಾರ್ಪಡಿಸಿ ಮಾದಿಗ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಎ ಶೇ.6, ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಶೇ.6, ಬೋವಿ, ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ 59 ಅಸ್ಪೃಷ್ಯ ಅಲೆಮಾರಿ ಸಮುದಾಯಗಳನ್ನು ಸೇರಿಸುವ ಮೂಲಕ ಪ್ರವರ್ಗ ಎ ಗುಂಪಿನಲ್ಲಿದ್ದ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿ ಶೇ.5 ಒಳಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಕೊರಮ, ಕೊರಚ, ಲಂಬಾಣಿ ಸಮುದಾಯಗಳು ಉಳಿದ ಪರಿಶಿಷ್ಟ ಜಾತಿಗಳಿಗಿಂತ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುರೆದ ಜಾತಿಗಳಾಗಿದ್ದರಿಂದ ಹಾಗೂ ಸ್ಪೃಶ್ಯ ಸಮುದಾಯಗಳಾಪಗಿವೆ. ಈ ಸಮುದಾಯಗಳನ್ನು ಒಳಮೀಸಲಾತಿ ವರ್ಗೀಕರಣದಲ್ಲಿ ಪ್ರವರ್ಗ ಡಿ ಎಂದು ವರ್ಗೀಕರಿಸಿ ಶೇ. 4 ಒಳಮೀಸಲಾತಿಯನ್ನು ಒದಗಿಸಿತ್ತು. ರಾಜ್ಯ ಸರ್ಕಾರವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದ ಈ ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪರಿಸಿಷ್ಟ ಜಾತಿಗಳಲ್ಲಿಯೇ ಸಾಪೇಕ್ಷವಾಗಿ ಮುಂದುವರೆದ ಸೃಶ್ಯ ಸಮುದಾಯಗಳಾದ ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ ಸೇರಿಸಿರುವುದು ಸಾಮಾಜಿಕ ನ್ಯಾಯವಲ್ಲ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಹೈಕೋರ್ಟ್‌ನಲ್ಲಿ 2-12-2025ರಂದು ರಿಟ್‌ ಅರ್ಜಿ (WP 28612/2025) ಸಲ್ಲಿಸಿದ್ದವು.

ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ, ಅಲೆಮಾರಿ ಸಮುದಾಗಳಿಗೆ ಶೇ. 1 ಒಳಮೀಸಲಾತಿಯಿಂದ ಹೆಚ್ಚಿನ ಲಾಭ ಸಿಗುವುದಿಲ್ಲ ಹಾಗಾಗಿ ಪ್ರವರ್ಗ ಸಿಗೆ ಸೇರಿಸಲಾಗಿದೆ ಎಂದು ವಾದಿಸಿದೆ. ಅಲ್ಲದೇ ಅಲೆಮಾರಿ ಸಮುದಾಯಗಳಲ್ಲಿ ಕೆಲವು ಜಾತಿಗಳು ಶೈಕ್ಷಣಿಕವಾಗಿ ಹಾಗೂ ಭೂಮಿಯ ಒಡೆತನದಲ್ಲಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯಲ್ಲಿನ ಪ್ರವರ್ಗ-ಡಿ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ವಾದಿಸಿದೆ.

ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಅಲೆಮಾರಿ ಸಮುದಾಯಗಳಲ್ಲಿನ 5 ಜಾತಿಗಳಾದ ಬುಡ್ಗ ಜಂಗಮ, ಚನ್ನ ದಾಸರ್ , ಹೊಲೆಯ ದಾಸರ್, ಸಿಳ್ಳೆಕ್ಯಾತ , ಸುಡುಗಾಡು ಸಿದ್ದ ಸಮುದಾಯಗಳು ಸಾಪೇಕ್ಷವಾಗಿ ಉಳಿದ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ಹೇಳುತ್ತಾ ಉಳಿದ 54 ಜಾತಿಗಳನ್ನು ಸಾಪೇಕ್ಷವಾಗಿ ಮುಂದುವರೆದ ಸಮುದಾಯಗಳ ಜೊತೆಗೆ ಸೇರಿಸಿರುವುದರ ಕುರಿತು ರಾಜ್ಯ ಸರ್ಕಾರ ಯಾವುದೇ ಸಮರ್ತನೆಯನ್ನು ಮಾಡಿಕೊಳ್ಳಲಿಲ್ಲ.

ಇದರ ಮೂಲಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರಾಶಸ್ತ್ಯದ ಒಳಮೀಸಲಾತಿಯನು ನಿರಾಕರಿಸಿದೆ.

#InternalReservation #Untouchable #Nomadic #SCReservation #Karnataka #ಅಸ್ಪೃಶ್ಯಅಲೆಮಾರಿಸಮುದಾಯಗಳು #ಒಳಮೀಸಲಾತಿ #ಹೈಕೋರ್ಟ್‌ #HighCourt

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...

ಸಂಪೂರ್ಣ ಗೋಹತ್ಯೆ ನಿಷೇಧದ ಜೊತೆಗೆ ‘ರಾಷ್ಟ್ರೀಯ ಮಾತೃ ಸ್ಥಾನಮಾನ ನೀಡಬೇಕು: ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್

"ಗೋವನ್ನು ರಾಷ್ಟ್ರಮಾತೆ ಅಥವಾ ರಾಜಮಾತೆ" ಎಂದು ಘೋಷಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಮೂಲಕ ಕಾಂಗ್ರೆಸ್ ಸಂಸದ ಉಜ್ವಲ್ ರಮಣ್ ಸಿಂಗ್ ಸಂಸತ್ತಿನಲ್ಲಿ ಹಲವರನ್ನು ಅಚ್ಚರಿಗೊಳಿಸಿದರು. ಕಲಾಪದ ಶೂನ್ಯ ವೇಳೆಯಲ್ಲಿ ಅವರು...