Homeಕರ್ನಾಟಕಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

- Advertisement -
- Advertisement -

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ ಒಳಮೀಸಲಾತಿ ಕುರಿತ ತನ್ನ ಆದೇಶವನ್ನು ಸಮರ್ಥಿಸಿಕೊಂಡು ಅಫಿಡವಿಟ್‌ ಸಲ್ಲಿಸಿದೆ. ಅಲ್ಲದೇ ರಿಟ್‌ ಅರ್ಜಿಯಲ್ಲಿ ಯಾವುದೇ ಉರುಳಿಲ್ಲ ಹಾಗಾಗಿ ರಿಟ್‌ ಅರ್ಜಿಯನ್ನು ತಿರಸ್ಕರಿಸಬೇಕು ಅಂದು ಮನವಿ ಮಾಡಿದೆ.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಪರಿಶಿಷ್ಟ ಜಾತಿಗಳನ್ನು 5 ಗುಂಪುಗಳಾಗಿ ವಿಂಗಡಿಸಿ ಅಲೆಮಾರಿ ಸಮುದಾಯ ಪ್ರವರ್ಗ ಎ ಎಂದು ವರ್ಗೀಕರಿಸಿ ಶೇ. 1 ಮೀಸಲಾತಿಯನ್ನು ನೀಡಿತ್ತು. ರಾಜ್ಯ ಸರ್ಕಾರದ ಸಚಿವ ಸಂಪುಟವು ಜಸ್ಟೀಸ್‌ ನಾಗಮೋಹನ್‌ದಾಸ್‌ ಆಯೋಗದ ವರದಿಯನ್ನು ಮಾರ್ಪಡಿಸಿ ಮಾದಿಗ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಎ ಶೇ.6, ಹೊಲೆಯ ಸಂಬಂಧಿತ ಜಾತಿಗಳನ್ನು ಪ್ರವರ್ಗ-ಬಿ ಶೇ.6, ಬೋವಿ, ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ 59 ಅಸ್ಪೃಷ್ಯ ಅಲೆಮಾರಿ ಸಮುದಾಯಗಳನ್ನು ಸೇರಿಸುವ ಮೂಲಕ ಪ್ರವರ್ಗ ಎ ಗುಂಪಿನಲ್ಲಿದ್ದ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿ ಶೇ.5 ಒಳಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿತ್ತು.

ಜಸ್ಟೀಸ್‌ ನಾಗಮೋಹನ್‌ ದಾಸ್‌ ಆಯೋಗವು ಕೊರಮ, ಕೊರಚ, ಲಂಬಾಣಿ ಸಮುದಾಯಗಳು ಉಳಿದ ಪರಿಶಿಷ್ಟ ಜಾತಿಗಳಿಗಿಂತ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುರೆದ ಜಾತಿಗಳಾಗಿದ್ದರಿಂದ ಹಾಗೂ ಸ್ಪೃಶ್ಯ ಸಮುದಾಯಗಳಾಪಗಿವೆ. ಈ ಸಮುದಾಯಗಳನ್ನು ಒಳಮೀಸಲಾತಿ ವರ್ಗೀಕರಣದಲ್ಲಿ ಪ್ರವರ್ಗ ಡಿ ಎಂದು ವರ್ಗೀಕರಿಸಿ ಶೇ. 4 ಒಳಮೀಸಲಾತಿಯನ್ನು ಒದಗಿಸಿತ್ತು. ರಾಜ್ಯ ಸರ್ಕಾರವು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದ ಈ ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪರಿಸಿಷ್ಟ ಜಾತಿಗಳಲ್ಲಿಯೇ ಸಾಪೇಕ್ಷವಾಗಿ ಮುಂದುವರೆದ ಸೃಶ್ಯ ಸಮುದಾಯಗಳಾದ ಕೊರಮ, ಕೊರಚ, ಲಂಬಾಣಿ ಸಮುದಾಯಗಳ ಜೊತೆಗೆ ಸೇರಿಸಿರುವುದು ಸಾಮಾಜಿಕ ನ್ಯಾಯವಲ್ಲ ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಹೈಕೋರ್ಟ್‌ನಲ್ಲಿ 2-12-2025ರಂದು ರಿಟ್‌ ಅರ್ಜಿ (WP 28612/2025) ಸಲ್ಲಿಸಿದ್ದವು.

ಸರ್ಕಾರವು ತನ್ನ ಅಫಿಡವಿಟ್‌ನಲ್ಲಿ, ಅಲೆಮಾರಿ ಸಮುದಾಗಳಿಗೆ ಶೇ. 1 ಒಳಮೀಸಲಾತಿಯಿಂದ ಹೆಚ್ಚಿನ ಲಾಭ ಸಿಗುವುದಿಲ್ಲ ಹಾಗಾಗಿ ಪ್ರವರ್ಗ ಸಿಗೆ ಸೇರಿಸಲಾಗಿದೆ ಎಂದು ವಾದಿಸಿದೆ. ಅಲ್ಲದೇ ಅಲೆಮಾರಿ ಸಮುದಾಯಗಳಲ್ಲಿ ಕೆಲವು ಜಾತಿಗಳು ಶೈಕ್ಷಣಿಕವಾಗಿ ಹಾಗೂ ಭೂಮಿಯ ಒಡೆತನದಲ್ಲಿ ಜಸ್ಟೀಸ್‌ ನಾಗಮೋಹನ್‌ ದಾಸ್‌ ವರದಿಯಲ್ಲಿನ ಪ್ರವರ್ಗ-ಡಿ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ವಾದಿಸಿದೆ.

ಸರ್ಕಾರ ತನ್ನ ಅಫಿಡವಿಟ್‌ನಲ್ಲಿ ಅಲೆಮಾರಿ ಸಮುದಾಯಗಳಲ್ಲಿನ 5 ಜಾತಿಗಳಾದ ಬುಡ್ಗ ಜಂಗಮ, ಚನ್ನ ದಾಸರ್ , ಹೊಲೆಯ ದಾಸರ್, ಸಿಳ್ಳೆಕ್ಯಾತ , ಸುಡುಗಾಡು ಸಿದ್ದ ಸಮುದಾಯಗಳು ಸಾಪೇಕ್ಷವಾಗಿ ಉಳಿದ ಜಾತಿಗಳಿಗಿಂತ ಹಿಂದುಳಿದಿಲ್ಲ ಎಂದು ಹೇಳುತ್ತಾ ಉಳಿದ 54 ಜಾತಿಗಳನ್ನು ಸಾಪೇಕ್ಷವಾಗಿ ಮುಂದುವರೆದ ಸಮುದಾಯಗಳ ಜೊತೆಗೆ ಸೇರಿಸಿರುವುದರ ಕುರಿತು ರಾಜ್ಯ ಸರ್ಕಾರ ಯಾವುದೇ ಸಮರ್ತನೆಯನ್ನು ಮಾಡಿಕೊಳ್ಳಲಿಲ್ಲ.

ಇದರ ಮೂಲಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪ್ರಾಶಸ್ತ್ಯದ ಒಳಮೀಸಲಾತಿಯನು ನಿರಾಕರಿಸಿದೆ.

#InternalReservation #Untouchable #Nomadic #SCReservation #Karnataka #ಅಸ್ಪೃಶ್ಯಅಲೆಮಾರಿಸಮುದಾಯಗಳು #ಒಳಮೀಸಲಾತಿ #ಹೈಕೋರ್ಟ್‌ #HighCourt

ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

ಚಂದ್ರು ತರಹುಣಿಸೆ
ಚಂದ್ರು ತರಹುಣಿಸೆhttps://naanugauri.com/
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್
- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...