Homeಮುಖಪುಟಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

- Advertisement -
- Advertisement -

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು.

ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ ಮೂಲಕ ಮಿಯಾಮಿಯಿಂದ ಭಾರತಕ್ಕೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ನೀಲಿ ಮತ್ತು ಬಿಳಿ ಜೆರ್ಸಿಗಳನ್ನು ತೊಟ್ಟ ಸಾವಿರಾರು ಅಭಿಮಾನಿಗಳು ಹರ್ಷೋದ್ಘಾರ ವ್ಯಕ್ತಪಡಿಸಿದರು. ಮೆಸ್ಸಿ ಬರುವುದು ತಡವಾದ ಕಾರಣ ಕಾಯುತ್ತಿದ್ದ ಅಭಿಮಾನಿಗಳನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು. ಆದರೆ, ಅಭಿಮಾನಿಗಳು ಬ್ಯಾರಿಕೇಡ್‌ಗಳನ್ನು ಹತ್ತಿ ಧ್ವಜ ಬೀಸಿದರು. ವಿಶ್ವಕಪ್ ವಿಜೇತ ನಾಯಕನ ಹೆಸರನ್ನು ಜಪಿಸಿದರು. 14 ವರ್ಷಗಳ ನಂತರ ಮೆಸ್ಸಿ ಭಾರತಕ್ಕೆ ಮರಳುತ್ತಿದ್ದು, ನಗರದಾದ್ಯಂತ ಸಂತಸದ ವಾತಾವರಣ ಉಂಟುಮಾಡಿದೆ.

“ಮೆಸ್ಸಿ 14 ವರ್ಷಗಳ ನಂತರ ಭಾರತಕ್ಕೆ ಬರುತ್ತಿದ್ದಾರೆ ಎಂಬ ಸಂತೋಷದ ವಾತಾವರಣವಿದೆ” ಎಂದು ಪ್ರವಾಸ ಸಂಘಟಕ ಸತಾದ್ರು ದತ್ತಾ ಹೇಳಿದರು. “ಭಾರತದೊಂದಿಗೆ ಫುಟ್‌ಬಾಲ್ ಸಂಪರ್ಕ ಮತ್ತೆ ಬೆಳೆಯುತ್ತಿದೆ. ಭಾರತೀಯ ಫುಟ್‌ಬಾಲ್‌ಗೆ ಹಿಂದೆಂದೂ ಇಷ್ಟೊಂದು ಪ್ರಾಯೋಜಕರು ಬಂದಿಲ್ಲ” ಎಂದರು.

ಗಂಟೆಗಳ ಕಾಲ ವಿಮಾನ ನಿಲ್ದಾಣದಲ್ಲೇ ಕಾದ ಅಭಿಮಾನಿಗಳು ಆಗಮನವನ್ನು ಅವಾಸ್ತವಿಕ ಎಂದು ಬಣ್ಣಿಸಿದರು. “ನಾವು ಎರಡು ಗಂಟೆಗಳಿಂದ ಕಾಯುತ್ತಿದ್ದೇವೆ. ಅಗತ್ಯವಿದ್ದರೆ, ನಾವು ನಾಲ್ಕು ಗಂಟೆಗಳಾದರೂ ಕಾಯುತ್ತೇವೆ. ಜೀವನದಲ್ಲಿ ಒಮ್ಮೆ ಮಾತ್ರ ಸಿಗುವ ಈ ಅವಕಾಶವನ್ನು ನಾವು ತಪ್ಪಿಸಿಕೊಳ್ಳಬಾರದು” ಎಂದು ಅಭಿಮಾನಿಯೊಬ್ಬರು ಮಾಧ್ಯಮಗಳೊಂದಿಗೆ ಮಾತನಾಡಿದರು. ಮತ್ತೊಬ್ಬ ಅಭಿಮಾನಿ ಮೆಸ್ಸಿಯನ್ನು “ಜಾದೂಗಾರ” ಎಂದು ಕರೆದರು.

ಕೋಲ್ಕತ್ತಾದ ಬಳಿಕ ಫುಟ್ಬಾಲ್ ದಂತಕಥೆ ಮೆಸ್ಸಿ ಅವರು ಹೈದರಾಬಾದ್, ಮುಂಬೈ ಮತ್ತು ನವದೆಹಲಿಗೆ ಭೇಟಿ ನೀಡಲಿದ್ದಾರೆ.

ಮೆಸ್ಸಿ ಅವರ ಕೋಲ್ಕತ್ತಾದ ವೇಳಾಪಟ್ಟಿ ಇಂದು ಬೆಳಿಗ್ಗೆ 9:30 ರಿಂದ 10:30 ರ ನಡುವೆ ಆಯ್ದ ಅತಿಥಿಗಳಿಗಾಗಿ ಖಾಸಗಿ ಭೇಟಿ ಮತ್ತು ಶುಭಾಶಯದೊಂದಿಗೆ ಪ್ರಾರಂಭವಾಗುತ್ತದೆ. ನಂತರ ಅವರ ಪ್ರತಿಮೆಯನ್ನು ವರ್ಚುವಲ್ ಆಗಿ ಉದ್ಘಾಟಿಸಲಿದ್ದಾರೆ.

ನಂತರ. ಯುವ ಭಾರತಿ ಕ್ರೀಡಾಂಗಣದಲ್ಲಿ ನಡೆಯಲಿದೆ ಸ್ನೇಹಪರ ಪಂದ್ಯ ನಡೆಯಲಿದೆ. ಅಲ್ಲಿ ಮೆಸ್ಸಿ ಅವರು ಅಭಿಮಾನಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅವ್ಯವಸ್ಥೆ; ಬೇಗನೆ ಹೊರಟ ಮೆಸ್ಸಿ

ಲಿಯೋನೆಲ್ ಮೆಸ್ಸಿ, ಲೂಯಿಸ್ ಸುವಾರೆಜ್ ಮತ್ತು ರೊಡ್ರಿಗೋ ಡಿ ಪಾಲ್ ಅವರು ಕೋಲ್ಕತ್ತಾ ತಲುಪಿದ್ದಾರೆ. ಅವರು ಸೌರವ್ ಗಂಗೂಲಿ ಮತ್ತು ಶಾರುಖ್ ಖಾನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳನ್ನು ಭೇಟಿಯಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೆಸ್ಸಿಯನ್ನು ಸನ್ಮಾನಿಸಲಿದ್ದಾರೆ.

ಅರ್ಜೆಂಟೀನಾದ ವಿಶ್ವಕಪ್ ವಿಜೇತ ನಾಯಕ ಲಿಯೋನೆಲ್ ಮೆಸ್ಸಿ ಡಿಸೆಂಬರ್ 13 ರಿಂದ ಪ್ರಾರಂಭವಾಗುವ ಮೂರು ದಿನಗಳ ಭಾರತ ಭೇಟಿಗಾಗಿ ಕೋಲ್ಕತ್ತಾ ತಲುಪಿದ್ದಾರೆ. ಅವರನ್ನು ವಿಮಾನ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಬರಮಾಡಿಕೊಂಡರು. ಅಭಿಮಾನಿಗಳು ಹೋಟೆಲ್‌ವರೆಗೂ ಬಂದರು. ವಿಶ್ವಕಪ್ ವಿಜೇತ ರೊಡ್ರಿಗೋ ಡಿ ಪಾಲ್ ಮತ್ತು ಮೆಸ್ಸಿಯ ಇಂಟರ್ ಮಿಯಾಮಿ ತಂಡದ ಸಹ ಆಟಗಾರ ಲೂಯಿಸ್ ಸುವಾರೆಜ್ ಕೂಡ ಪ್ರವಾಸದ ಭಾಗವಾಗಿ ಭಾರತಕ್ಕೆ ಪ್ರಯಾಣಿಸಿದ ತಂಡದಲ್ಲಿದ್ದಾರೆ.

ಸಾಲ್ಟ್ ಲೇಕ್ ಕ್ರೀಡಾಂಗಣದಿಂದ ಲಿಯೋನೆಲ್ ಮೆಸ್ಸಿ ಬೇಗನೆ ಹೊರಟಿದ್ದರಿಂದ ಕೋಪಗೊಂಡ ಹಾಜರಿದ್ದ ಅಭಿಮಾನಿಗಳು ಆಸನಗಳನ್ನು ಮುರಿದರು ಎಂದು ಸಾಮಾಜಿಕ ಮಾಧ್ಯಮದಲ್ಲಿವೀಡಿಯೊ ವೈರಲ್ ಆಗಿದೆ. ಪೊಲೀಸರು ಮತ್ತು ಅಧಿಕಾರಿಗಳ ಮೇಲೆ ನೀರಿ ಬಾಟಲಿಗಳನ್ನು ಎಸೆದಿದ್ದಾರೆ. ಜಿತೆಗೆ ದೊಡ್ಡ ಗದ್ದಲದ ಶಬ್ದಗಳು ಕೇಳಿಬಂದಿದೆ.

ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಅಭಿಮಾನಿಗಳನ್ನು ಸ್ವಾಗತಿಸಿದ ಮೆಸ್ಸಿ

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಸಾವಿರಾರು ಅಭಿಮಾನಿಗಳನ್ನು ಸ್ವಾಗತಿಸಿದ ಲಿಯೋನೆಲ್ ಮೆಸ್ಸಿ. ಅವರು ಮೋಹನ್ ಬಗಾನ್ ಕಾರ್ಯದರ್ಶಿ ಶ್ರೀಂಜಯ್ ಬೋಸ್ ಅವರನ್ನು ಭೇಟಿ ಮಾಡಿ ತಮ್ಮ ಕೋಟ್‌ಗೆ ಸಹಿ ಹಾಕಿದರು. ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಕೂಡ ಈ ಕಾರ್ಯಕ್ರಮದ ಭಾಗವಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...