Homeಮುಖಪುಟಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

ಧರ್ಮ ಕೇಳಿ ಗುಂಪು ಹಲ್ಲೆ : ಗಂಭೀರ ಗಾಯಗೊಂಡಿದ್ದ ಮುಸ್ಲಿಂ ವ್ಯಾಪಾರಿ ಸಾವು

- Advertisement -
- Advertisement -

ಶುಕ್ರವಾರ (ಡಿಸೆಂಬರ್ 12) ರಾತ್ರಿ ಬಿಹಾರದ ನವಾಡಾ ಜಿಲ್ಲೆಯಲ್ಲಿ ಧಾರ್ಮಿಕ ಗುರುತು ಕೇಳಿ (ಧರ್ಮ ಕೇಳಿ) ಗುಂಪೊಂದು ಮುಸ್ಲಿಂ ಬಟ್ಟೆ ವ್ಯಾಪಾರಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರು ಸಾವನ್ನಪ್ಪಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಗಗನ್ ದಿವಾನ್ ಗ್ರಾಮದ ನಿವಾಸಿ ಮೊಹಮ್ಮದ್ ಅಥರ್ ಹುಸೇನ್ ಸೈಕಲ್‌ನಲ್ಲಿ ಬಟ್ಟೆ ಮಾರಾಟ ಮಾಡುತ್ತಿದ್ದರು. ಡಿಸೆಂಬರ್ 5ರಂದು ರೋಹ್ ಪೊಲೀಸ್ ಠಾಣೆ ವ್ಯಾಪ್ತಿಯ ಭಟ್ವಾಪರ್ ಗ್ರಾಮದ ಬಳಿ ಅವರ ಮೇಲೆ ಹಲ್ಲೆ ನಡೆದಿತ್ತು. ಹುಸೇನ್ ಮನೆಗೆ ಹಿಂದಿರುಗುತ್ತಿದ್ದಾಗ ಅವರ ಸೈಕಲ್ ಚಕ್ರ ಪಂಕ್ಚರ್ ಆಗಿತ್ತು. ಅದನ್ನು ರಿಪೇರಿ ಮಾಡಿಸಲು ಸೈಕಲ್ ಅಂಗಡಿ ಹುಡುಕುತ್ತಿದ್ದರು. ಈ ವೇಳೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

“ಭಟ್ವಾಪರ್ ಗ್ರಾಮದಲ್ಲಿ ಗುಂಪೊಂದು ಹುಸೇನ್ ಅವರನ್ನು ತಡೆದು ನಿಲ್ಲಿಸಿ ಹೆಸರು ಮತ್ತು ಕೆಲಸ ಕೇಳಿದೆ. ನಂತರ ಅವರ ಮೇಲೆ ದಾಳಿ ನಡೆಸಿದೆ. ಆರೋಪಿಗಳು ಹುಸೇನ್ ಅವರ ಕಿವಿಗಳನ್ನು ಕತ್ತರಿಸಿದ್ದಾರೆ. ಕಾದ ಕಬ್ಬಿಣದಿಂದ ಥಳಿಸಿದ್ದಾರೆ” ಎಂದು ಹುಸೇನ್ ಸಹೋದರ ಮೊಹಮ್ಮದ್ ಶಕೀಬ್ ಆಲಂ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

“ಆರೋಪಿಗಳು ಮೊದಲು ನನ್ನ ಹೆಸರು ಕೇಳಿದರು. ನಂತರ ಸೈಕಲ್‌ನಿಂದ ಎಳೆದು ನೆಲಕ್ಕೆ ಕೆಡವಿದರು. ನನ್ನಲ್ಲಿದ್ದ 18 ಸಾವಿರ ರೂಪಾಯಿ ಹಣ ದೋಚಿದರು, ಬಳಿಕ ಥಳಿಸಿದರು. ಆರಂಭದಲ್ಲಿ ಕಡಿಮೆ ಜನರ ಗುಂಪಿತ್ತು, ನಂತರ 15 ರಿಂದ 20 ಜನರು ಸೇರಿಕೊಂಡರು ಎಂದು ಹಲ್ಲೆಗೊಳಗಾದ ನಂತರ ರೆಕಾರ್ಡ್ ಮಾಡಲಾದ ವಿಡಿಯೋದಲ್ಲಿ ಹುಸೇನ್ ಹೇಳಿದ್ದಾರೆ” ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವಿವರಿಸಿದೆ.

“ನನ್ನ ಖಾಸಗಿ ಭಾಗವನ್ನು ಪರಿಶೀಲಿಸಲು ಆರೋಪಿಗಳು ವಿವಸ್ತ್ರಗೊಳಿಸಿದರು. ನಂತರ ಕಾದ ಕಬ್ಬಿಣದಿಂದ ಥಳಿಸಿದರು” ಎಂದೂ ಹುಸೇನ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಹುಸೇನ್ ಅವರನ್ನು ಮೊದಲು ರೋಹ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿತ್ತು. ನಂತರ ನವಾಡಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರಿಸ್ಥಿತಿ ಗಂಭೀರವಾದಾಗ ಪವಾಪುರಿ ವಿಐಎಂಎಸ್‌ಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಶುಕ್ರವಾರ ತಡರಾತ್ರಿ ನಿಧನರಾದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ವರದಿ ಹೇಳಿದೆ.

ಪ್ರಕರಣ ಸಂಬಂಧ ಇದುವರೆಗೆ ಆರು ಜನರನ್ನು ಬಂಧಿಸಲಾಗಿದ್ದು, ಇಬ್ಬರು ಅಪ್ರಾಪ್ತ ವಯಸ್ಕರನ್ನೂ ಬಂಧನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಸೆಂಬರ್ 6ರಂದು ಹುಸೇನ್ ಅವರ ಪತ್ನಿ ಶಬ್ನಮ್ ಪರ್ವೀನ್ ದಾಖಲಿಸಿರುವ ದೂರಿನಲ್ಲಿ ಭಟ್ಟಾಪರ್ ಗ್ರಾಮದ 10 ಜನರನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಹುಸೇನ್ ಮೇಲೆ ಹಲ್ಲೆ ನಡೆಸಿದ ಇತರ ಹತ್ತು ಜನರ ಗುರುತು ಪತ್ತೆಯಾಗಿಲ್ಲ.

ಕಳ್ಳತನದ ಸುಳ್ಳು ಆರೋಪ ಹೊರಿಸಿ ಹುಸೇನ್ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ಗ್ರಾಮಕ್ಕೆ ಬಂದ ಅವರ ಕುಟುಂಬ ಸದಸ್ಯರನ್ನು ಕೂಡ ನಿಂದಿಸಿ ಬೆದರಿಕೆ ಹಾಕಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಶಬ್ನಮ್ ದೂರು ಆಧರಿಸಿ ಪೊಲೀಸರು ಆರಂಭದಲ್ಲಿ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಕಾನೂನುಬಾಹಿರ ಗುಂಪು ಸೇರುವಿಕೆ, ಗಲಭೆ ಮತ್ತು ಗಂಭೀರ ಗಾಯಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಹುಸೇನ್ ನಿಧನರಾದ ನಂತರ ಕೊಲೆ ಆರೋಪಗಳನ್ನು ಸೇರಿಸಲಾಗಿದೆ.

ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ಸಿಕಂದರ್ ಯಾದವ್ ಕೂಡ ವಿರುದ್ದ ದೂರು ದಾಖಲಿಸಿದ್ದು, ಹುಸೇನ್ ಆ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಎರಡೂ ದೂರುಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಶೇಷ ತನಿಖಾ ತಂಡವು ಘಟನೆ ನಡೆದು 24 ಗಂಟೆಗಳ ಒಳಗೆ ನಾಲ್ವರು ಶಂಕಿತರನ್ನು ಮತ್ತು ಶನಿವಾರ ಇನ್ನೂ ನಾಲ್ವರನ್ನು ಬಂಧಿಸಿದೆ ಎಂದು ನವಾಡಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಧಿಮಾನ್ ತಿಳಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಒಟ್ಟು ಎಂಟು ಜನರನ್ನು ಬಂಧಿಸಲಾಗಿದೆ ಅಥವಾ ವಶಕ್ಕೆ ಪಡೆಯಲಾಗಿದೆ. ಉಳಿದ ಆರೋಪಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದೇವೆ” ಎಂದು ಧಿಮಾನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...