Homeಮುಖಪುಟನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ | ಸಂಚುಕೋರನಿಗೆ ಶಿಕ್ಷೆಯಾಗಿಲ್ಲ, ನ್ಯಾಯ ಇನ್ನೂ ಅಪೂರ್ಣ : ನಟಿ ಮಂಜು ವಾರಿಯರ್

- Advertisement -
- Advertisement -

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ, ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಸೋಮವಾರ (ಡಿ.8) ನ್ಯಾಯಾಲಯ ಖುಲಾಸೆಗೊಳಿಸಿದೆ.

ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಮಾಧ್ಯಮಗಳ ಜೊತೆ ಮಾತನಾಡಿದ್ದ ದಿಲೀಪ್, ಮಾಜಿ ಪತ್ನಿ ಮಂಜು ವಾರಿಯರ್ ತನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಮಂಜು ವಾರಿಯರ್ ಭಾನುವಾರ (ಡಿ.14) ಪ್ರತಿಕ್ರಿಯಿಸಿದ್ದು, “ಪ್ರಕರಣದ ಸಂಚುಕೋರನಿಗೆ ಇನ್ನೂ ಶಿಕ್ಷೆಯಾಗಿಲ್ಲ, ಹಾಗಾಗಿ ನ್ಯಾಯ ಇನ್ನೂ ಅಪೂರ್ಣವಾಗಿದೆ” ಎಂದು ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿರುವ ಮಂಜು ವಾರಿಯರ್, “ಗೌರವಾನ್ವಿತ ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಈ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಇನ್ನೂ ಅಪೂರ್ಣವಾಗಿದೆ. ದೈಹಿಕವಾಗಿ ಅಪರಾಧ ಎಸಗಿದವರಿಗೆ ಮಾತ್ರ ಶಿಕ್ಷೆಯಾಗಿದೆ. ಆದರೆ, ಈ ಹೇಯ ಕೃತ್ಯಕ್ಕೆ ಸಂಚು ರೂಪಿಸಿದವರು, ಅದು ಯಾರೇ ಆಗಿರಲಿ, ಇನ್ನೂ ಮುಕ್ತವಾಗಿ ಓಡಾಡುತ್ತಿದ್ದಾರೆ. ಇದು ಅತ್ಯಂತ ಭಯಾನಕ ವಿಚಾರ. ಈ ಅಪರಾಧದ ಹಿಂದಿರುವ ಪ್ರತಿಯೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿದಾಗ ಸರಿಯಾದ ನ್ಯಾಯ ಸಿಗುತ್ತದೆ”ಎಂದು ಬರೆದುಕೊಂಡಿದ್ದಾರೆ.

“ಇದು ಕೇವಲ ಒಬ್ಬ ಸಂತ್ರಸ್ತೆಯ ಪ್ರಶ್ನೆಯಲ್ಲ. ಪ್ರತಿಯೊಬ್ಬ ಹುಡುಗಿ, ಪ್ರತಿಯೊಬ್ಬ ಮಹಿಳೆ ಹಾಗೂ ಪ್ರತಿಯೊಬ್ಬ ಮನುಷ್ಯರು ಭಯವಿಲ್ಲದೆ ಕೆಲಸದ ಸ್ಥಳಗಳಲ್ಲಿ, ಬೀದಿಗಳಲ್ಲಿ ಹಾಗೂ ತಮ್ಮ ಜೀವನದಲ್ಲಿ ತಲೆಯೆತ್ತಿ ನಡೆಯುವ ಹಕ್ಕಿನ ವಿಷಯವಾಗಿದೆ” ಎಂದು ಮಂಜು ವಾರಿಯರ್ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯ ಖುಲಾಸೆಗೊಳಿಸಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು” ಎಂದು ಹೇಳಿದ್ದರು.

2017ರಲ್ಲಿ ಕೊಚ್ಚಿಯ ಹೊರವಲಯದಲ್ಲಿ ನಡೆದ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ತೀರ್ಪನ್ನು ಡಿಸೆಂಬರ್ 8ರಂದು ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಹನಿ ಎಂ.ವರ್ಗೀಸ್ ಪ್ರಕಟಿಸಿದ್ದು, 8ನೇ ಆರೋಪಿಯಾಗಿದ್ದ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ್ದರು.

ಉಳಿದ ಆರೋಪಿಗಳಾದ ಸುನಿಲ್ ಎನ್.ಎಸ್ ಅಲಿಯಾಸ್‌ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಠನ್ ಬಿ, ವಿಜೀಶ್ ವಿಪಿ, ಸಲೀಂ ಎಚ್ ಅಲಿಯಾಸ್ ವಡಿವಲ್ ಸಲೀಂ ಹಾಗೂ ಪ್ರದೀಪ್ ಅವರನ್ನು ದೋಷಿಗಳೆಂದು ಘೋಷಿಸಿದ್ದರು. ಈ ಎಲ್ಲಾ ಅಪರಾಧಿಗಳಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಪೊಲೀಸ್ ದೌರ್ಜನ್ಯ; ‘ನಾವು ಮರೆತಿಲ್ಲ..’; ಎಂದ ಜಾಮಿಯಾ ವಿದ್ಯಾರ್ಥಿಗಳು

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದರು....

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...