Homeಮುಖಪುಟಮತ್ತೆ ಮುನ್ನೆಲೆಗೆ ಬಂದ 'Avalkoppam': ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

- Advertisement -
- Advertisement -

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ.

2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ ಹಮ್ಮಿಕೊಂಡಿದ್ದ ‘ಅವಳ್‌ಕೊಪ್ಪಂ’ (ಅವಳ ಜೊತೆ) ಎಂಬ ಪ್ರತಿರೋಧ ಮತ್ತು ಸಂತ್ರಸ್ತೆಯ ಜೊತೆಗಿನ ಒಗಟ್ಟಿನ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ.

ಭಾನುವಾರ (ಡಿಸೆಂಬರ್ 14) ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಕೆ) ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿರುವ ಮಲಯಾಳಂ ನಟಿ ರೀಮಾ ಕಲ್ಲಿಂಗಲ್ ‘ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ’ ಎಂದು ಹೇಳಿದ್ದಾರೆ.

ಪ್ರತಿಭಟನಾ ಸಭೆಯಲ್ಲಿ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಚಲನಚಿತ್ರ ನಿರ್ಮಾಪಕ ದಿವಂಗತ ಬಾಲಚಂದ್ರಕುಮಾರ್ ಅವರ ಪತ್ನಿ ಹಿರಿಯ ಡಬ್ಬಿಂಗ್ ಕಲಾವಿದೆ ಭಾಗ್ಯಲಕ್ಷ್ಮಿ ಮತ್ತು ಸಿಪಿಐ(ಎಂ) ಕೇರಳ ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸಿದ್ದರು.

‘ಅವಳ್‌ಕೊಪ್ಪಂ’ ಇಂದು ಎಂದಿಗಿಂತಲೂ ಹೆಚ್ಚು ಪ್ರಸ್ತುತವಾಗಿದೆ. ನಿಜವಾದ ಹೋರಾಟ ಈಗ ಪ್ರಾರಂಭವಾಗಿದೆ ಎಂದು ನಾನು ನಂಬುತ್ತೇನೆ” ಎಂದು ರೀಮಾ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ನ್ಯಾಯಾಲಯದ ತೀರ್ಪು ಯಾವುದೇ ರೀತಿಯ ಆಶ್ವಾಸನೆ ನೀಡುವುದಿಲ್ಲ. ಈ ದೀರ್ಘ ಹೋರಾಟದಲ್ಲಿ ಸಂತ್ರಸ್ತೆಯ ಜೊತೆಗೆ, ಆಕೆಯ ಪರವಾಗಿ ನಿಂತವರ ಬಗೆಗಿನ ಆತಂಕಕ್ಕಿಂತ ಹೆಚ್ಚಾಗಿ, ಈ ತೀರ್ಪು ಮುಂದಿನ ಪೀಳಿಗೆಗೆ ಕಳುಹಿಸುವ ಸಂದೇಶದ ಬಗ್ಗೆ ನನಗೆ ಆತಂಕವಿದೆ. ಯುವಜನರು ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಈ ತೀರ್ಪು ಅತ್ಯಂತ ಕೆಟ್ಟ ಉದಾಹರಣೆಯನ್ನು ಕೊಡುತ್ತದೆ. ನಮ್ಮ ಸುತ್ತಲೂ ನಡೆಯುತ್ತಿರುವ ಸಂಗತಿಗಳ ಬಗ್ಗೆ ನಾವು ಬಹಳ ದೃಢವಾದ ಸಂದೇಶವನ್ನು ಕಳುಹಿಸಬೇಕಾಗಿದೆ” ಎಂದು ಪ್ರತಿಭಟನೆಯ ನಂತರ ಸುದ್ದಿ ಮಾಧ್ಯಮ ಒನ್‌ಮನೋರಮ ಜೊತೆ ಮಾತನಾಡುವಾಗ ರೀಮಾ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಭಾಗ್ಯಲಕ್ಷ್ಮಿ, “ಸಮಾಜವು ಸಂತ್ರಸ್ತೆಯ ಜೊತೆ ದೃಢವಾಗಿ ನಿಲ್ಲಬೇಕಾದ ಸಮಯ ಇದು” ಎಂದು ಹೇಳಿದ್ದಾರೆ. ನಟ ದಿಲೀಪ್ ಅವರನ್ನು ಉಲ್ಲೇಖಿಸಿ, “ತೀರ್ಪಿನ ನಂತರ ಅಪರಾಧಕ್ಕೆ ಸಂಚು ರೂಪಿಸಿದವರು ಅವರೇ ಎಂದು ಎಲ್ಲರೂ ಅರ್ಥಮಾಡಿಕೊಂಡಿದ್ದಾರೆ. ದಿಲೀಪ್ ಖುಲಾಸೆಯಾದ ನಂತರ, ಕೇವಲ ಸಂತೋಷವನ್ನು ವ್ಯಕ್ತಪಡಿಸುವ ಅಥವಾ ‘ಸತ್ಯ ಗೆದ್ದಿದೆ’ ಎಂದು ಹೇಳುವ ಬದಲು, ಅವರು ಒಬ್ಬರು ಮಹಿಳೆಯ ಹೆಸರನ್ನು ಹೇಳಿದ್ದಾರೆ. ಸಂತ್ರಸ್ತೆ ಪಿತೂರಿಯ ಬಗ್ಗೆ ಮಾತನಾಡುವಾಗ ದಿಲೀಪ್ ಹೆಸರನ್ನು ಎಂದಿಗೂ ಹೇಳಿರಲಿಲ್ಲ. ಹೀಗಿರುವಾಗ ಅವರು ತನ್ನನ್ನು ಗುರಿಯಾಗಿಸಿಕೊಂಡಿದ್ದಾರೆಂದು ಭಾವಿಸುವುದು ಏಕೆ? ಏಕೆಂದರೆ ಅದನ್ನು ಮಾಡಿದವರು ಅವರೇ” ಎಂದಿದ್ದಾರೆ.

ಡಿಸೆಂಬರ್ 8ರಂದು ತೀರ್ಪು ಪ್ರಕಟಿಸಿದ್ದ ಎರ್ನಾಕುಲಂ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ದಿಲೀಪ್ ಅವರನ್ನು ಖುಲಾಸೆಗೊಳಿಸಿತ್ತು. ಈ ಬೆನ್ನಲ್ಲೇ ಮಾಧ್ಯಮಗಳ ಮುಂದೆ ಮಾತನಾಡಿದ್ದ ದಿಲೀಪ್, “ಈ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲು ಪಿತೂರಿ ನಡೆಸಲಾಗಿದೆ. ನಾನೇ ಈ ಪ್ರಕರಣದ ನಿಜವಾದ ಬಲಿಪಶು. ನನ್ನ ವೃತ್ತಿ ಜೀವನ, ಪ್ರತಿಷ್ಠೆ ಮತ್ತು ಸಮಾಜದಲ್ಲಿ ನನ್ನ ಜೀವನವನ್ನು ನಾಶಮಾಡುವ ಉದ್ದೇಶದಿಂದ ಈ ಪಿತೂರಿ ನಡೆಸಲಾಗಿದೆ. ಈ ಪ್ರಕರಣದಲ್ಲಿ ಕ್ರಿಮಿನಲ್ ಪಿತೂರಿ ಇದೆ ಎಂದು ಮೊದಲು ಹೇಳಿದ್ದೇ ಮಂಜು ವಾರಿಯರ್. ಅವರು ಹೀಗೆ ಹೇಳಿದ ದಿನದಿಂದಲೇ ನನ್ನ ವಿರುದ್ಧದ ಪಿತೂರಿ ಶುರುವಾಯಿತು”ಎಂದು ಹೇಳಿದ್ದರು.

ಭಾನುವಾರ ಪ್ರತಿಭಟನೆಯ ಬಳಿಕ ಮಾತನಾಡಿದ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ ಗೋವಿಂದನ್, “ಅಪರಾಧದಲ್ಲಿ ಪಿತೂರಿ ನಡೆಸಿದವರನ್ನು ಗುರುತಿಸಿ ವಿಚಾರಣೆಗೆ ಒಳಪಡಿಸುವಲ್ಲಿ ವಿಫಲವಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಅಪರಾಧವನ್ನು ಯೋಜಿಸಿದವರನ್ನು ಗುರುತಿಸಲು ಮತ್ತು ಅವರನ್ನು ಕಾನೂನಿನ ಮುಂದೆ ತರಲು ಅಸಮರ್ಥವಾಗಿರುವುದು ನಾವು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಪಿತೂರಿಗಾರರನ್ನು ನ್ಯಾಯಾಂಗದ ಮುಂದೆ ತರುವುದನ್ನು ಖಚಿತಪಡಿಸಿಕೊಳ್ಳುವುದು ಕೇರಳದ ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ” ಎಂದಿದ್ದಾರೆ.

ಕೇರಳದ ಇತರ ಭಾಗಗಳಲ್ಲೂ ನ್ಯಾಯಾಲಯದ ತೀರ್ಪಿಗೆ ಅಸಮಾಧಾನ ವ್ಯಕ್ತವಾಗಿದೆ. ಡಿಸೆಂಬರ್ 13ರಂದು, ತಿರುವನಂತಪುರದಿಂದ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಗುಂಪೊಂದು ಪ್ರಯಾಣದ ಸಮಯದಲ್ಲಿ ದಿಲೀಪ್ ಅವರ ಸಿನಿಮಾ ಹಾಕಿದ್ದನ್ನು ವಿರೋಧಿಸಿತ್ತು. ಅವರ ಆಕ್ಷೇಪಣೆಯ ನಂತರ ಬಸ್ ಸಿಬ್ಬಂದಿ ಸಿನಿಮಾ ನಿಲ್ಲಿಸಿದ್ದರು.

ಎರ್ನಾಕುಲಂನ ದೇವಾಲಯದ ಕಾರ್ಯಕ್ರಮದಲ್ಲಿ ದಿಲೀಪ್ ಭಾಗವಹಿಸುವ ಪ್ರಸ್ತಾಪದ ಬಗ್ಗೆ ಮತ್ತೊಂದು ವಿವಾದ ಭುಗಿಲೆದ್ದಿತು. ಶಿವ ದೇವಾಲಯದಲ್ಲಿ ಮುಂದೆ ನಡೆಯಲಿರುವ ಉತ್ಸವದ ಕೂಪನ್‌ಗಳ ವಿತರಣೆಯನ್ನು ಉದ್ಘಾಟಿಸಲು ದಿಲೀಪ್ ಅವರನ್ನು ಆಹ್ವಾನಿಸಲಾಗಿತ್ತು. ಪ್ರತಿಭಟನೆಗಳ ನಂತರ, ಕೊಚ್ಚಿನ್ ದೇವಸ್ವಂ ಮಂಡಳಿಯ ಅಡಿಯಲ್ಲಿ ಬರುವ ದೇವಾಲಯವು ಆಹ್ವಾನವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿತು.

ಡಿಸೆಂಬರ್ 8ರಂದು ನ್ಯಾಯಾಲಯ ತೀರ್ಪು ಪ್ರಕಟಿಸುವ ಸ್ವಲ್ಪ ಮುಂಚೆ ‘ವುಮೆನ್‌ ಇನ್ ಸಿನಿಮಾ ಕಲೆಕ್ಟಿವ್ (ಡಬ್ಲ್ಯುಸಿಸಿ)’ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಎಂದು ಪೋಸ್ಟ್ ಹಾಕಿತ್ತು. ಈ ಮೂಲಕ ತೀರ್ಪು ಏನೇ ಬಂದರೂ ಸಂತ್ರಸ್ತೆಯ ಜೊತೆಗಿದ್ದೇವೆ ಎಂದಿತ್ತು.

ತೀರ್ಪು ಪ್ರಕಟಗೊಂಡ ಬಳಿಕ ಅನೇಕ ನಟ, ನಟಿಯರು ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಅನೇಕ ಸಾಮಾನ್ಯ ಜನರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ‘ಅವಳ್‌ಕೊಪ್ಪಂ’ ಹ್ಯಾಷ್‌ಟ್ಯಾಗ್‌ ಮೂಲಕ ಸಂತ್ರಸ್ತೆ ನಟಿಗೆ ಬೆಂಬಲ ಮತ್ತು ನ್ಯಾಯಾಲಯದ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...