Homeಮುಖಪುಟಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

- Advertisement -
- Advertisement -

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್ ಆಗಿದೆ. ಮುಖ್ಯಮಂತ್ರಿಗಳ ಈ ನಡೆ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದ್ದು, ಹೊಸದಾಗಿ ನೇಮಕಗೊಂಡ ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತಿತ್ತು. ಆಯ್ಕೆಯಾದ ವೈದ್ಯರಲ್ಲಿ ಒಬ್ಬರಾದ ನುಸ್ರತ್ ಪರ್ವೀನ್ ಅವರು ಮುಖ್ಯಮಂತ್ರಿಯಿಂದ ತಮ್ಮ ನೇಮಕಾತಿ ಪತ್ರವನ್ನು ಸ್ವೀಕರಿಸಲು ಮುಂದಾದರು.

ಪತ್ರವನ್ನು ಹಸ್ತಾಂತರಿಸಿದ ನಂತರ, ನಿತೀಶ್ ಕುಮಾರ್ ಮಹಿಳೆಯ ಹಿಜಾಬ್‌ ಕಡೆಗೆ ಸನ್ನೆ ಮಾಡಿ, ಅದರ ಬಗ್ಗೆ ಕೇಳಿದರು. ನಂತರ ಅದನ್ನು ತೆಗೆದುಹಾಕಲು ಸೂಚಿಸಿದರು. ವೈದ್ಯೆ ತಕ್ಷಣಕ್ಕೆ ಪ್ರತಿಕ್ರಿಯಿಸದಿದ್ದಾಗ, ಅವರು ಸ್ವತಃ ಹಿಜಾಬ್ ಅನ್ನು ಕೈಚಾಚಿ ತೆಗೆದಿರುವುದು ಕಂಡುಬಂದಿದೆ. ಇದರಿಂದ ಮಹಿಳೆ ಕೆಲವು ಕ್ಷಣಗಳ ಕಾಲ ಗೊಂದಲಕ್ಕೆ ಒಳಗಾದರು. ಅವರು ಅಸಮಾಧಾನಗೊಂಡಂತೆ ಕಾಣಿಸಿಕೊಂಡರು. ಕಾರ್ಯಕ್ರಮದಲ್ಲಿದ್ದ ಭಾಗವಹಿಸಿದ್ದ ಕೆಲವರು ಇದನ್ನು ಕಂಡು ನಗುತ್ತಿರುವುದು ಸೆರೆಯಾಗಿದೆ.

ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ತ್ವರಿತವಾಗಿ ಹರಡಿತು. ವಿರೋಧ ಪಕ್ಷಗಳಿಂದ ತೀಕ್ಷ್ಣವಾದ ಪ್ರತಿಕ್ರಿಯೆಗಳನ್ನು ಉಂಟುಮಾಡಿತು. ವಿಡಿಯೋ ಆನ್‌ಲೈನ್‌ನಲ್ಲಿ ಹಂಚಿಕೊಂಡ ನೆಟ್ಟಿಗರು ಮುಖ್ಯಮಂತ್ರಿಯ ನಡವಳಿಕೆಯನ್ನು ಪ್ರಶ್ನಿಸಿದರು. ಒಂದು ಪೋಸ್ಟ್‌ನಲ್ಲಿ, “ನಿತೀಶ್ ಜಿ ಅವರಿಗೆ ಏನಾಯಿತು? ಅವರ ಮಾನಸಿಕ ಸ್ಥಿತಿ ಸಂಪೂರ್ಣವಾಗಿ ಹದಗೆಟ್ಟಿದೆಯೇ ಅಥವಾ ನಿತೀಶ್ ಬಾಬು ಈಗ 100 ಪ್ರತಿಶತ ಸಂಘಿಯಾಗಿದ್ದಾರೆಯೇ?” ಎಂದು ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿತು. ಈ ಘಟನೆಯನ್ನು “ಅಸಹ್ಯಕರ ಮತ್ತು ನಾಚಿಕೆಗೇಡಿನ ಕೃತ್ಯ” ಎಂದು ಕರೆದ ಪಕ್ಷವು, ಮುಖ್ಯಮಂತ್ರಿಯ ಇಂತಹ ನಡವಳಿಕೆಯು ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕುತ್ತದೆ ಎಂದು ಹೇಳಿದೆ.

“ಈ ನಾಚಿಕೆಯಿಲ್ಲದ ಕೃತ್ಯವನ್ನು ನೋಡಿ. ಮಹಿಳಾ ವೈದ್ಯೆಯೊಬ್ಬರು ತಮ್ಮ ನೇಮಕಾತಿ ಪತ್ರವನ್ನು ಸ್ವೀಕರಿಸಲು ಬಂದಾಗ, ನಿತೀಶ್ ಕುಮಾರ್ ತಮ್ಮ ಹಿಜಾಬ್ ಅನ್ನು ತೆಗೆಸಿದರು” ಎಂದು ಕಾಂಗ್ರೆಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ.

“ರಾಜ್ಯದ ಅತ್ಯುನ್ನತ ಹುದ್ದೆಯಲ್ಲಿರುವ ವ್ಯಕ್ತಿಯೊಬ್ಬರು ಸಾರ್ವಜನಿಕವಾಗಿ ಇಷ್ಟೊಂದು ಅವಮಾನಕರ ರೀತಿಯಲ್ಲಿ ವರ್ತಿಸಿದರೆ, ಬಿಹಾರದಲ್ಲಿ ಮಹಿಳೆಯರು ಎಷ್ಟು ಸುರಕ್ಷಿತರಾಗಿದ್ದಾರೆಂದು ಊಹಿಸಬಹುದು. ಈ ಖಂಡನೀಯ ಕೃತ್ಯಕ್ಕಾಗಿ ನಿತೀಶ್ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು. ಈ ರೀತಿಯ ದುಷ್ಕೃತ್ಯ ಕ್ಷಮಿಸಲಾಗದು” ಎಂದಿದ್ದಾರೆ.

ರಾಷ್ಟ್ರೀಯ ಜನತಾ ದಳ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರು ಸಹ ಮುಖ್ಯಮಂತ್ರಿಯನ್ನು ಟೀಕಿಸಿದರು. ಅವರು ಮಹಿಳೆಯರನ್ನು ಅಗೌರವಿಸಿದ್ದಾರೆ, ವೈಯಕ್ತಿಕ ಮತ್ತು ಧಾರ್ಮಿಕ ಘನತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದರು.

ಈ ಕಾರ್ಯಕ್ರಮದಲ್ಲಿ 685 ಆಯುರ್ವೇದ, 393 ಹೋಮಿಯೋಪತಿ ಮತ್ತು 205 ಯುನಾನಿ ವೈದ್ಯರು ಸೇರಿದಂತೆ 1,283 ಆಯುಷ್ ವೈದ್ಯರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಅಧಿಕಾರಿಗಳ ಪ್ರಕಾರ, ವೈದ್ಯರನ್ನು ಆಯುಷ್ ವೈದ್ಯಕೀಯ ಸೇವೆಗಳು ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ನಿಯೋಜಿಸಲಾಗುವುದು. ಅಲ್ಲಿ ಅವರು ಹೊರರೋಗಿ ವಿಭಾಗ ಸೇವೆಗಳನ್ನು ಒದಗಿಸುತ್ತಾರೆ. ರಾಜ್ಯದಲ್ಲಿ ಆರೋಗ್ಯ ವಿತರಣೆಯನ್ನು ಬಲಪಡಿಸಲು ರಾಷ್ಟ್ರೀಯ ಮಕ್ಕಳ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಕೆಲಸ ಮಾಡುತ್ತಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...